ವಿಜಯಪುರದಲ್ಲಿ ಹಳೆ ಸಿಮ್ಗಳಿಗೆ ಆಧಾರ್ ಲಿಂಕ್ ಮಾಡಲು ’ಡಂಗುರ’
ವಿಜಯಪುರ, ಜುಲೈ 19: ಸಾಮಾನ್ಯವಾಗಿ ಹಬ್ಬ-ಹರಿದಿನ, ಗ್ರಾಮಸಭೆ, ಪಡಿತರ ವಿತರಣೆ ಹಾಗೂ ಕೆಲವು ವಿಶೇಷ ಸಂದರ್ಭಗಳಲ್ಲಿ 'ಡಂಗುರ' ಸಾರುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ವಿಷಯ ಮುಟ್ಟಿಸುವುದು ವಾಡಿಕೆ. ಆದರೆ, ಇಲ್ಲೊಂದು ಖಾಸಗಿ ಟೆಲಿಕಾಂ ಕಂಪೆನಿ ವಿಜಯಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಡಂಗುರ ಸಾರುವ ಮೂಲಕ ಅಚ್ಚರಿ ಮೂಡಿಸಿದೆ. ಯಾಕೆ ಅಂತಿರಾ? ಮುಂದೆ ಓದಿ..
ಖಾಸಗಿ ಟೆಲಿಕಾಂ ಸಂಸ್ಥೆ ಏರ್ಟೆಲ್ ಕಂಪನಿಯವರು ಹಳೆ ಸಿಮ್ (ಮೊಬೈಲ್ ನಂಬರ್) ಗಳಿಗೆ ಆಧಾರ್ ನಂಬರ್ ಲಿಂಕ್ ಮಾಡುವ ಸುದ್ದಿ ಮುಟ್ಟಿಸಲು ಗ್ರಾಮದಲ್ಲಿ 'ಡಂಗುರ' ಸಾರಿಸಿದೆ. ಯುವಕನೊಬ್ಬ ಗ್ರಾಮದ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಜನರ ಗಮನ ಸೆಳೆಯಲು 'ಭಜನೆ ತಾಳ'ಗಳನ್ನು ಬಳಸಿಕೊಂಡು ಡಂಗುರ ಸಾರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೌದು, ಇತ್ತೀಚಿಗೆ ಗ್ರಾಮೀಣ ಪ್ರದೇಶದ ಶೇ 80ರಷ್ಟು ಜನರಲ್ಲಿ ಸ್ಮಾರ್ಟ್ ಫೋನ್ಗಳಿವೆ. ಸ್ಮಾರ್ಟ್ ಫೋನ್ ಹೊಂದಿದವರು ವಾಟ್ಸ್ಅಪ್, ಟೆಲಿಗ್ರಾಂ, ಫೇಸ್ಬುಕ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಇವುಗಳ ಮೂಲಕ ಏರ್ಟೆಲ್ ಕಂಪನಿಯವರು ಹಳೆ ಸಿಮ್ಗಳಿಗೆ ಆಧಾರ ಕಾರ್ಡ್ ಲಿಂಕ್ ಮಾಡುವ ಸಂದೇಶ ಕಳುಹಿಸಬಹುದಾಗಿತ್ತು.
ಕೊನೆ ಪಕ್ಷ ತಾವೇ ನೀಡಿದ ಸಿಮ್ಗೆ ಎಸ್ಎಂಎಸ್ ಕಳುಹಿಸಬಹುದಾಗಿತ್ತು. ಆದರೆ, ಈ ಕೆಲಸಕ್ಕೆ ಡಂಗುರ ಸಾರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಆದರೆ, ಈ ಮೂಲಕವಾದರೂ ನಮ್ಮ ಗ್ರಾಮೀಣ ಸಂಸ್ಕೃತಿಯನ್ನು ಜೀವಂತವಾಗಿರಿಸಿದ ಕಂಪನಿಗೆ ಥ್ಯಾಂಕ್ಸ್ ಹೇಳಲೇಬೇಕು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications