ಬೇಂದ್ರೆ ನಿವಾಸಕ್ಕೆ ಅಮಿತ್ ಶಾ ಭೇಟಿ, ಸಕ್ಕರೆ ನೀಡಿ ಸ್ವಾಗತ
ಧಾರವಾಡ, ಏಪ್ರಿಲ್ 12: ಕಳೆದ ಬಾರಿಯ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಕುವೆಂಪು ಅವರ ನಿವಾಸಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ವರಕವಿ ಬೇಂದ್ರೆ ಅವರ ನಿವಾಸಕ್ಕೆ ಭೇಟಿ ನೀಡಿದರು.
ಸಾಧನಕೇರಿಗೆ ರಾಜ್ಯ ಬಿಜೆಪಿ ಮುಖಂಡರ ಜೊತೆ ತೆರಳಿದ ಅಮಿತ್ ಶಾ ಅವರು ಮೊದಲಿಗೆ ಬೇಂದ್ರೆ ಭವನಕ್ಕೆ ಭೇಟಿ ನೀಡಿ ಅಲ್ಲಿ ಕೆಲ ಸಮಯ ಕಳೆದರು ನಂತರ ಅಲ್ಲಿಂದ ಪಕ್ಕದಲ್ಲೇ ಇರುವ ಬೇಂದ್ರೆ ಅವರ ನಿವಾಸಕ್ಕೆ ತೆರಳಿದರು.
ಬೇಂದ್ರೆ ಅವರು ಇದ್ದಾಗಿನಿಂದಲೂ ಮನೆಗೆ ಬರುವವರಿಗೆ ಸಕ್ಕರೆ ನೀಡಿ ಸ್ವಾಗತಿಸುವ ಪರಿಪಾಠ ಇಂದೂ ಸಹ ಬೇಂದ್ರೆ ಕುಟುಂಬಸ್ಥರು ಮುಂದುವರೆಸಿದ್ದು, ಅಮಿತ್ ಶಾ ಅವರಿಗೆ ಸಕ್ಕರೆ ನೀಡಿ ಸ್ವಾಗತಿಸಿದರು.

ಬೇಂದ್ರೆ ಅವರ ಸೊಸೆ ಪದ್ಮಾಬಾಯಿ ಬೇಂದ್ರೆ ಅವರನ್ನು ಶಾ ಸನ್ಮಾನಿಸಿದರು. ಬೆಂದ್ರೆ ಕುಟುಂಬದಿಂದ ನಾಕು ತಂತಿಯ ಇಂಗ್ಲಿಷ್ ಅನುವಾದ ಕವನ ಗುಚ್ಚ ಪುಸ್ತಕ ನೀಡಿದರು. ಬೇಂದ್ರೆ ಪ್ರತಿಷ್ಠಾನದ ಅಧ್ಯಕ್ಷ ಡಾ. ಡಿ.ಎಂ.ಹಿರೇಮಠ್ ಅವರು ಬೇಂದ್ರೆ ಬದುಕು, ಬರಹ ಕುರಿತ ಕಿರು ಹೊತ್ತಿಗೆಯನ್ನು ಶಾಗೆ ನೀಡಿ ಸನ್ಮಾನಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಎರಡು ದಿನಗಳ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯ ಸಿದ್ಧಾರೂಡ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು, ನಂತರ ಲೋಕಸಭೆಯಲ್ಲಿ ಸುಗಮ ಅಧಿವೇಶನಕ್ಕೆ ಪ್ರತಿಪಕ್ಷಗಳ ಅಸಹಕಾರ ಖಂಡಿಸಿ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಮಾಡಿದರು. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಶಿ, ರಾಜೀವ ಚಂದ್ರಶೇಖರ ಸೇರಿದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರ, ಮುಖಂಡರು ಅಮಿತ್ ಶಾ ಜೊತೆಗಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications