ಅನಂತಕುಮಾರ್ ಹೆಗಡೆಗೆ ಸಂವಿಧಾನದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ: ಸಿಎಂ
ಹುಬ್ಬಳ್ಳಿ, ಡಿಸೆಂಬರ್ 25: ಸಂವಿಧಾನ ಬದಲಾಯಿಸ್ತೇವೆ ಎಂದು ಹೇಳಿದ್ದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
"ಅನಂತಕುಮಾರ್ ಹೆಗಡೆ ಅವರಿಗೆ ಸಂವಿಧಾನ ಗೊತಿಲ್ಲ. ಅದರ ಬಗ್ಗೆ ಗೌರವವೂ ಇಲ್ಲ," ಎಂದು ಖಾರವಾಗಿ ನುಡಿದ್ದಾರೆ. "ಸಂವಿಧಾನ ಮೊದಲು ಹುಟ್ಟಿದ್ದೋ ಅನಂತ ಕುಮಾರ್ ಹೆಗಡೆ ಹುಟ್ಟಿದ್ದೋ?" ಎಂದು ಅವರು ಪ್ರಶ್ನಿಸಿದ್ದಾರೆ.
"ಸಾಮಾಜಿಕ ಸಂಸ್ಕ್ರತಿ ಅನಂತಕುಮಾರ್ ಅವರಿಗೆ ಗೊತ್ತಿಲ್ಲಾ. ಸಂವಿಧಾನದ ಬಗ್ಗೆ ಕನಿಷ್ಠ ಜ್ಞಾನವೂ ಅವರಿಗಿಲ್ಲ ಅಂತ," ವ್ಯಂಗ್ಯವಾಡಿದರು.

ಇನ್ನು ಕಳಸಾ ಬಂಡೂರಿ ವಿಚಾರವಾಗಿ ಮಾತನಾಡಿದ ಅವರು, "ಗೋವಾ ಸಿಎಂ ಮನೋಹರ್ ಪರಿಕ್ಕರ್ ಮತ್ತು ಬಿ.ಎಸ್. ಯಡಿಯೂರಪ್ಪ ಇಬ್ಬರೂ ಸೇರಿ ನಾಟಕವಾಡುತ್ತಿದ್ದಾರೆ. ಈ ಭಾಗದ ಜನರಿಗೆ ಮೋಸ ಮಾಡುವ ತಂತ್ರಗಾರಿಕೆಯನ್ನು ಬಿಜೆಪಿ ಅನುಸರಿಸುತ್ತಿದೆ. ಗೋವಾ ಸಿಎಂ ನನಗೆ ಪತ್ರ ಬರೆಯ ಬೇಕಿತ್ತು. ಆದರೆ ಅವರು ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಅದು ದಾಖಲಾತಿ ಆಗೋದಿಲ್ಲ. ಅವರಿಗೆ ನೀರು ಕೊಡುವ ಮನಸ್ಸು ಇದ್ದರೆ ಟ್ರಿಬ್ಯೂನಲ್ ಗೆ ಅಫಿಡೆವಿಟ್ ಸಲ್ಲಿಸಲಿ," ಅಂತ ಹೇಳಿದರು.
ಇನ್ನು ಗದುಗಿನಲ್ಲಿ ನಿನ್ನೆ ಆಯೋಜಿಸಿದ್ದ ವೀರಶೈವ ಲಿಂಗಾಯತ ಧರ್ಮ ಜನಜಾಗೃತಿ ಸಮಾವೇಶದ ವಿಚಾರವಾಗಿ ದಿಂಗಾಲೇಶ್ವರ ಸ್ವಾಮೀಜಿಗಳ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, "ನಾನು ಮಾನವೀಯ ಮೌಲ್ಯದಲ್ಲಿ ನಂಬಿಕೆ ಇಟ್ಟಿದ್ದೇನೆ. ರುಂಡ ಮುಂಡ ಬೇರ್ಪಡಿಸುವ ಸಂಸ್ಕೃತಿ ನಮ್ಮದಲ್ಲ. ನಾವು ಧರ್ಮ ವಿಭಜನೆ ಮಾಡಲು ಹೊರಟಿಲ್ಲ. ಐದು ಪಿಟಿಷನ್ ಗಳನ್ನ ಸಲ್ಲಿಕೆಯಾಗಿವೆ. ಅವಗಳನ್ನು ಕಸದ ಬುಟ್ಟಿಗೆ ಹಾಕೋಕೆ ಆಗಲ್ಲ. ಹೀಗಾಗಿ ಸಮಿತಿಯನ್ನು ರಚಿಸಿದ್ದೇನೆ," ಎಂದು ಅವರು ವಿವರ ನೀಡಿದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications