"ಅರವಿಂದ್ ಕ್ರೇಜಿವಾಲ್ ಕ್ರೇಜ್ ಖಾಲಿ!"
ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆ ಚುನಾವಣೆ2025ರಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ದೆಹಲಿಯಲ್ಲಿ ಎಎಪಿ ಮೂರನೇ ಬಾರಿ ಅಧಿಕಾರಕ್ಕೆ ಬರುವ ಕನಸು ಈಡೇರುತ್ತಿಲ್ಲ. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಕ್ರೇಜ್ ಕಡಿಮೆಯಾಗಿದೆ ಎಂದೇ ಹೇಳಲಾಗುತ್ತಿದೆ. ಹೌದು ಈ ರೀತಿ ಹೇಳಿದ್ದು ಯಾರು ಹಾಗೂ ದೆಹಲಿಯಲ್ಲಿ ಈಗ ಪರಿಸ್ಥಿತಿ ಯಾವ ರೀತಿ ಇದೆ ಎನ್ನುವ ವಿವರ ಇಲ್ಲಿದೆ.
ದೆಹಲಿಯಲ್ಲಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಕಾಪಾಡಿಕೊಂಡಿದೆ. ದೆಹಲಿ ವಿಧಾನಸಭೆ ಚುನಾವಣೆಯ ಮ್ಯಾಜಿಕ್ ಸಂಖ್ಯೆ /ಬಹುಮತ 36 ಆಗಿದೆ. ಇನ್ನು ದೆಹಲಿಯಲ್ಲಿ ಎಎಪಿ ಭಾರೀ ಹಿನ್ನಡೆ ಅನುಭವಿಸುತ್ತಿದೆ. ಅರವಿಂದ್ ಕೇಜ್ರಿವಾ ಅವರಿಗೇ ಭಾರೀ ಹಿನ್ನಡೆಯಾಗಿರುವುದು ಮುಜುಗರಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ದೆಹಲಿ ವಿಧಾನಸಭೆ ಚುನಾವಣೆಯ ರಿಸಲ್ಟ್ನ ಬಗ್ಗೆ ಮಾತನಾಡಿದ್ದಾರೆ.

ದೆಹಲಿಯಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಅರವಿಂದ್ ಕ್ರೇಜಿವಾಲ್ ಅವರು ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅರವಿಂದ್ ಕ್ರೇಜಿವಾಲ್ ಅವರು ಅಧಿಕಾರಕ್ಕೆ ಬಂದಿದ್ದರು. ಕಳೆದ ಎರಡು ಅವಧಿಯಲ್ಲಿ ಕೇಜ್ರಿವಾಲ್ ಅವರ ಆಡಳಿತ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಇದರಿಂದ ಜನರು ನಿರಾಸೆಗೆ ಒಳಗಾಗಿದ್ದಾರೆ. ಹೀಗಾಗಿ, ದೆಹಲಿಯಲ್ಲಿ ಜನ ಬಿಜೆಪಿ ಕೈ ಹಿಡಿದಿದ್ದಾರೆ.
ಕಾಂಗ್ರೆಸ್ ಡೇ ಬಾಯ್ ಡೇ ಕೊಲ್ಯಾಪ್ಸ್ ಆಗುತ್ತಿದೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿತ ಕಂಡಿದೆ ಎಂದು ಅವರು ದೂರಿದ್ದಾರೆ.
ಇದೀಗ ಕಾಂಗ್ರೆಸ್ ಪಕ್ಷವು ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದೂ ಸಹ ಈ ರಾಜ್ಯಗಳಲ್ಲಿ ಬಿಜೆಪಿಯ ತಪ್ಪಿನಿಂದಾಗಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ. ಅಲ್ಲದೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಈ ಚುನಾವಣೆಯಿಂದ ಕಾಂಗ್ರೆಸ್ನ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ಆದರೆ, ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಎಲ್ಲಿದೆಯೋ ಅಲ್ಲಿ ಮಾತ್ರ ಒಳ್ಳೆ ಕೆಲಸಗಳು ಆಗಿವೆ. ಹೀಗಾಗಿ, ಜನ ದೆಹಲಿಯಲ್ಲಿ ಡಬಲ್ ಇಂಜಿನ್ ಸರ್ಕಾರ ತಂದಿದ್ದಾರೆ. ದೆಹಲಿ ಜನ ಮೋದಿ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ.
ದೆಹಲಿಯನ್ನು ಅಭಿವೃದ್ದಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನಾವು ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಆದರೆ, ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ. ಆದರೆ, ಬಿಜೆಪಿಯಲ್ಲವೂ ಎಲ್ಲವೂ ಸರಿ ಇಲ್ಲ. ಭಿನ್ನಮತಕ್ಕೆ ನಾಯಕರು ಇತಿಶ್ರೀ ಹಾಕಲಿದ್ದಾರೆ. ಅಧ್ಯಕ್ಷರ ಚುನಾವಣೆ ಬಂದಿದ್ದು, ಸರ್ವಾನುಮತದಿಂದ ಅಧ್ಯಕ್ಷರ ಆಯ್ಕೆ ಆಗಬೇಕು. ಚುನಾವಣೆ ಎನ್ನುವುದು ಒಂದು ಪ್ರಕ್ರಿಯೆ ಅಷ್ಟೇ ಎಂದಿದ್ದಾರೆ.
ಇನ್ನು ದೆಹಲಿ ವಿಧಾನಸಭೆಯಲ್ಲಿ ಒಟ್ಟು 70 ಸೀಟುಗಳಿದ್ದು, 36 ಮ್ಯಾಜಿಕ್ ನಂಬರ್ ಆಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications