ವಿಧಾನಸಭೆ ಚುನಾವಣೆ 2023: ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಟಿಕೆಟ್ಗಾಗಿ ಜಟಾಪಟಿ, ವಿಡಿಯೋ ವೈರಲ್
ಹುಬ್ಬಳ್ಳಿ, ಡಿಸೆಂಬರ್, 28: ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಚ್ಚಾಟ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನೀಲ್ ಕುಮಾರ್ ಪಾಟೀಲ್ಗೆ ನೀಡುವಂತೆ ಬಹುತೇಕ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಪಕ್ಷದ ವೀಕ್ಷಕರ ಮುಂದೆಯೇ ಟಿಕೆಟ್ ಆಕಾಂಕ್ಷಿಗಳ ಬೆಂಬಲಗರಿಂದ ಮಾತಿನ ಚಕಮಕಿ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಹುಬ್ಬಳ್ಳಿಯ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆದಿದೆ. ಇನ್ನೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾದ್, ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್ ನೇತೃತ್ವದಲ್ಲಿ ಮಹಾನಗರ ಜಿಲ್ಲಾ ಹಾಗೂ ಗ್ರಾಮೀಣ ಜಿಲ್ಲಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ, ಪ್ರಕ್ರಿಯೆ ನಡೆಯಿತು.
ಟಿಕೆಟ್ಗಾಗಿ ಆಂತರಿಕ ಜಟಾಪಟಿ
ಕಾಂಗ್ರೆಸ್ನ ಹಿರಿಯ ಮುಖಂಡರು ಸಂದರ್ಶನದ ರೀತಿಯಲ್ಲಿ ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳೊಂದಿಗೆ ಚರ್ಚೆ ನಡೆಸಿದ್ದರು. ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳು, ಬೆಂಬಲಿಗ ಕಾರ್ಯಕರ್ತರ ದಂಡು ಸೇರಿತ್ತು. ಆಕಾಂಕ್ಷಿಗಳು ತಮ್ಮ ಹತ್ತಾರು ಬೆಂಬಲಿಗರೊಂದಿಗೆ ಬಂದು ಶಕ್ತಿಪ್ರದರ್ಶನ ಮಾಡಿದರು. ಇದೇ ವೇಳೆ ಕಾಂಗ್ರೆಸ್ ಕಚೇರಿಯಲ್ಲಿಯೇ ಆಕಾಂಕ್ಷಿಗಳ, ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ.

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದ ರಜತ್ ಉಳ್ಳಾಗಡ್ಡಿ ಮಠ, ಅನಿಲ್ ಕುಮಾರ್ ಪಾಟೀಲ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಪಕ್ಷದ ವೀಕ್ಷಕರ ಎದುರು ರಜತ್ಗೆ ಟಿಕೆಟ್ ನೀಡಬೇಕೆಂದು ಕೆಲವರು ಒತ್ತಾಯಿಸಿದರು. ಮತ್ತೊಂದೆಡೆ ಇನ್ನು ಕೆಲವರು ಅನೀಲ್ ಕುಮಾರ್ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಹೀಗೆ ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ಎರಡು ಗುಂಪಿನ ನಡುವೆ ವಾಗ್ವಾದವೇ ನಡೆದಿದೆ. ಅಲ್ಲದೇ ಎರಡು ಗುಂಪಿನವರು ತಮ್ಮ ಅಭ್ಯರ್ಥಿಗಳ ಪರ ಜಯಘೋಷ ಹಾಕುವ ಮೂಲಕ ಸಭೆಯಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿಸಿದ್ದರು.
ಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ್ ಆಕ್ರೋಶ
ದೇಶದಲ್ಲಿ ಕೋವಿಡ್ ಹೆಚ್ಚಳವಾಗಿದ್ದು, ನಾವು ಮುನ್ನೆಚ್ಚರಿಕೆ ವಹಿಸಬೇಕು. ಚೀನಾದಲ್ಲಿ ಕೋವಿಡ್ ನಾವು ಬಿಟ್ಟಿದೀವಾ? ಇದೊಂದು ಸೋಂಕಿನ ಕಾಯಿಲೆ, ಹೊಸ ಹೊಸ ತಳಿ ಮೂಲಕ ಬರುತ್ತಿದೆ. ಇವರಿಗೆ ರಾಜಕೀಯ ಬಿಟ್ಟು ಬೇರೆ ಏನೂ ಇಲ್ಲ ಎಂದು ಡಿ.ಕೆ.ಶಿವಕುಮಾರ್ಗೆ ಸಚಿವ ಅಶ್ವತ್ಥ್ ನಾರಾಯಣ್ ಹುಬ್ಬಳ್ಳಿಯಲ್ಲಿ ತಿರುಗೇಟು ನೀಡಿದ್ದಾರೆ. ಅಲ್ಲದೆ ಕಾಂಗ್ರೆಸ್ನವರು ಜನರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ ನಾವು ತುಪ್ಪವನ್ನು ಬಾಯಿಗೆ ಹಾಕುತ್ತೇವೆ ಎಂದು ವ್ಯಂಗ್ಯವಾಡಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ಗೆ ಅಧಿಕಾರದ ಹಸಿವು ನಿರಂತರ ಕಾಡುತ್ತಿದೆ. ಅವರ ತಲೆಯಲ್ಲಿ ರಾಜಕೀಯ ವಿಚಾರ ಬಿಟ್ಟು ಬೇರೆನೂ ಇಲ್ಲ. ಜನರ ಬಗ್ಗೆ ಸ್ವಲ್ಪನೂ ಕಾಳಜಿ ಇಲ್ಲ. ಯಾವಾಗ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಯುತ್ತಿದ್ದಾರೆ. ಅಧಿಕಾರ ತಪ್ಪಿ ಹೋಗಿರುವುದಕ್ಕೆ ಅವರಿಗೆ ಸಂಕಟ ಆಗುತ್ತಿದೆ. ಆದ್ದರಿಂದ ಅಧಿಕಾರ ಪಡೆಯುವುದಕ್ಕೆ ಕೋವಿಡ್ ನೆಪದಲ್ಲಿ ಅವಧಿಪೂರ್ವ ಚುನಾಚಣೆ ಅಂತಿದಾರೆ. ಅವರ ಅಭಿವೃದ್ಧಿ, ಕಾಂಗ್ರೆಸ್ ಅಭಿವೃದ್ಧಿಯೇ ಮುಖ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications