ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಡುವ ಎಣ್ಣೆಯಲ್ಲಿ ಕೈ ಹಾಕಿದ ಅಯ್ಯಪ್ಪ ಭಕ್ತರು

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜನವರಿ 06: ಹುಬ್ಬಳ್ಳಿಯ ಶಬರಿ ನಗರದಲ್ಲಿ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳು ಕುದಿಯುವ ಎಣ್ಣೆಯಲ್ಲಿ ಕೈ ಹಾಕಿ ವಡೆ ತಗೆಯುವ ಮೂಲಕ ಎಣ್ಣೆ ಸೇವೆ ಸಲ್ಲಿಸಿದ್ದಾರೆ.

ಅಯ್ಯಪ್ಪ ಸ್ವಾಮಿಯ ಭಕ್ತರು ಈ ಸಮಯದಲ್ಲಿ ಅಯ್ಯಪ್ಪನ ನಾಮ ಸ್ಮರಣೆಯಲ್ಲಿ ತೊಡಗಿಕೊಂಡಿರುತ್ತಾರೆ. ಪ್ರತಿದಿನವೂ ವಿಶಿಷ್ಟ ರೀತಿಯಲ್ಲಿ ಕಟ್ಟುನಿಟ್ಟಿನ ಆಚರಣೆ ಮಾಡುತ್ತಿರುತ್ತಾರೆ.

ಹುಬ್ಬಳ್ಳಿಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ನಡೆದಿದ್ಯಾಕೆ...?ಹುಬ್ಬಳ್ಳಿಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ನಡೆದಿದ್ಯಾಕೆ...?

ಮಕರ ಸಂಕ್ರಮಣ ದಿನದಂದು ಶಬರಿಮಲೆಯಲ್ಲಿ ಮಕರ ಜ್ಯೋತಿ ಕಾಣಿಸುವವರೆಗೂ ಅಯ್ಯಪ್ಪ ಸ್ವಾಮಿಯ ಭಕ್ತರು ಕಠಿಣ ವೃತದಲ್ಲಿರುತ್ತಾರೆ. ಈ ನಡುವೆ ಹುಬ್ಬಳ್ಳಿಯ ಶಬರಿ ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಸುಡುವ ಎಣ್ಣೆಯಲ್ಲಿ ಕೈ ಹಾಕಿ ವಡೆ ತಗೆಯುವ ಮೂಲಕ ಎಣ್ಣೆ ಸೇವೆ ಸಲ್ಲಿಸಿದ್ದಾರೆ

Ayyappa Devotees Put Their Hands In The Boiling Oil

ಸ್ಥಳೀಯ ನೂರಾರು ಅಯ್ಯಪ್ಪ ಮಾಲಾಧಾರಿಗಳು ಕುದಿಯುವ ಎಣ್ಣೆಯಲ್ಲಿ ಕೈ ಹಾಕುವ ಮೂಲಕ ವಡೆಯನ್ನು ಹೊರ ತೆಗೆದು ಭಕ್ತಿಯ ಸಮರ್ಪಣೆ ಮಾಡಿದರು.

ಶಬರಿಮಲೆಯಲ್ಲಿ ಇತಿಹಾಸ ಸೃಷ್ಟಿ: ಅಯ್ಯಪ್ಪ ದೇವಾಲಯ ಪ್ರವೇಶಿಸಿದ ಮಹಿಳೆಯರುಶಬರಿಮಲೆಯಲ್ಲಿ ಇತಿಹಾಸ ಸೃಷ್ಟಿ: ಅಯ್ಯಪ್ಪ ದೇವಾಲಯ ಪ್ರವೇಶಿಸಿದ ಮಹಿಳೆಯರು

ನಿರಂತರವಾಗಿ ಐದು ವರ್ಷಗಳಿಂದಲೂ ಈ ರೀತಿಯ ಆಚರಣೆ ಮಾಡುತ್ತಾ ಬಂದಿದ್ದಾರೆ. ನಮಗೆ ಒಂದು ಹನಿ ಸುಡುವ ಎಣ್ಣೆ ಮೈಮೇಲೆ ಬಿದ್ದರೆ ಬೊಬ್ಬೆ ಏಳುತ್ತದೆ. ಆದರೆ ಕುದಿಯುವ ಎಣ್ಣೆಯಲ್ಲಿ ಕೈ ಹಾಕಿದರೂ ಯಾವದೇ ಸುಟ್ಟ ಗಾಯಗಳಾಗದಿರುವದು ವಿಶೇಷವಾಗಿದೆ.

English summary
Ayyappa Swamy Maladaris in Shabari, Hubli. Devotees Served to Ayyappa swamy by Putting hands in boiling oil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X