ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಸಿದ್ಧಾರೂಢರ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ಗಮನ ಸೆಳೆದರು.
ಹುಬ್ಬಳ್ಳಿ, ಫೆಬ್ರವರಿ, 19: ಉತ್ತರ ಕರ್ನಾಟಕದ ಆರಾಧ್ಯ ದೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದರ್ಶನ ಪಡೆದರು.
ಮಹಾಶಿವರಾತ್ರಿ ಅಂಗವಾಗಿ ಸದ್ಗುರು ಸಿದ್ಧಾರೂಢರ ಜಾತ್ರೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಸಿದ್ಧಾರೂಢರ ಹಾಗೂ ಗುರುನಾಥರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಮಹಾಶಿವರಾತ್ರಿಯ ಅಂಗವಾಗಿ ತವರಿಗೆ ಆಗಮಿಸಿದ ಸಿಎಂ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಅಲ್ಲದೇ ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿಯ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದ್ದು, ಸಿದ್ಧಾರೂಢರ ಜಾತ್ರೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡಿರುವುದು ವಿಶೇಷವಾಗಿದೆ.
ಸುರ್ಜೇವಾಲ ವಿರುದ್ಧ ಸಿಎಂ ಆಕ್ರೋಶ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ನ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಏನು ಗೊತ್ತು. ಅವರು ಮೊದಲು ಕಾಂಗ್ರೆಸ್ ಒಳಜಗಳಗಳನ್ನು ಸರಿಪಡಿಸಿ ನಂತರ ನಮ್ಮ ರಾಜ್ಯದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು. ಹುಬ್ಬಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಸುದ್ದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ನರಕ ಸೃಷ್ಟಿಯಾಗಿದೆ ಇತ್ತೇಚೆಗೆ ಸುರ್ಜೇವಾಲಾ ಹೇಳಿದ್ದರು.

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ನವರು ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಜನರೇ ಮನೆಗೆ ಕಳುಹಿಸಿದ್ದಾರೆ. ಅತ್ಯಂತ ಬೇಜವಾಬ್ದಾರಿಯುವಾದ ವಿರೋಧ ಪಕ್ಷ ಕಾಂಗ್ರೆಸ್. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ತಿರುಗೇಟು ನೀಡಿದರು.
ಕರ್ನಾಟಕದ ಜನರಿಗೆ ಯಾರು ಯಾರು ಅಸುರರು, ಯಾರು ದೇವತೆಗಳು ಎಂಬುದು ಸರಿಯಾಗಿ ತಿಳಿದಿದೆ. ಸುಮಾರು 70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ನ್ನು ಕಿತ್ತೊಗೆದು ಅಸುರರು ಯಾರೆಂದು ಜನರೇ ತೋರಿಸಿದ್ದಾರೆ. ಕಾಂಗ್ರೆಸ್ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾದಂತಿದೆ.

ಅವರಿಗೂ ನಮಗೂ ಬಹಳಷ್ಟು ವ್ಯತ್ಯಾಸಗಳು ಇವೆ. ಅವರು ಚುನಾವಣೆಗಾಗಿ ಆಕಾಶ ತೋರಿಸಿ ಜನರನ್ನು ಮರಳು ಮಾಡಲು ಹೊರಟಿದ್ದಾರೆ. ನಾವು ಯಾವುದಕ್ಕಾಗಿ, ಯಾರಿಗೆ, ಎಷ್ಟು ಹಣವಾಗುತ್ತದೆ ಎಂದು ವಿವರಿಸಿದ್ದೇವೆ. ಅವರೇ ನಮ್ಮನ್ನು ನಕಲು ಮಾಡಿದ್ದಾರೆ. ಬಿಜೆಪಿ ಗೃಹಿಣಿ ಶಕ್ತಿ ನೀಡಿದ ಮೇಲೆ ಅವರು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ್ದಾರೆ. ಇದರಿಂದ ಯಾರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications