ವೀರಶೈವ-ಲಿಂಗಾಯತ ವಿವಾದ: ಚರ್ಚೆಗೆ ಮತ್ತೊಮ್ಮೆ ಆಹ್ವಾನ ಕೊಟ್ಟ ಹೊರಟ್ಟಿ
ಹುಬ್ಬಳ್ಳಿ, ಡಿಸೆಂಬರ್ 30: ಇಂದು (ಡಿಸೆಂಬರ್ 30) ಹುಬ್ಬಳ್ಳಿಯ ಮೂರು ಸಾವಿರಮಠದಲ್ಲಿ ನಡೆಯಬೇಕಿದ್ದ ವೀರಶೈವ ಹಾಗೂ ಲಿಂಗಾಯತ ಆಂತರಿಕ ಚರ್ಚೆ ರದ್ದಾದ ಹಿನ್ನೆಲೆಯಲ್ಲಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತೊಂದು ದಿನಾಂಕ ನಿಗದಿಪಡಿಸಿದ್ದಾರೆ.
ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, "ಜನವರಿ 28, 29, 31 ರಂದು ಈ ಮೂರು ದಿನಗಳಲ್ಲಿ ಯಾವ ದಿನವಾದ್ರು ಆಂತರಿಕ ಚರ್ಚೆಗೆ ಬೆಳಗಾವಿಯ ನಾಗನೂರು ಮಠಕ್ಕೆ ಬನ್ನಿ" ಎಂದು ದಿಂಗಾಲೇಶ್ವರ ಶ್ರೀಗೆ ಆಹ್ವಾನ ನೀಡಿದರು.
ಇದು ಬಹಿರಂಗ ಚರ್ಚೆ ಅಲ್ಲ. ಇದು ಕೇವಲ ಆಂತರಿಕ ಚರ್ಚೆ ಮಾಡೋಣ. ಸೌಹಾರ್ದಯುತ ಚರ್ಚೆಗೆ ನಾವು ಸಿದ್ಧ ಎಂದು ಹೊರಟ್ಟಿ ಹೇಳಿದರು. ಈಗಾಗಲೇ ಲಿಂಗಾಯತ ಪರವಾಗಿ ವಾದ ಮಾಡಲು ಹೊರಟ್ಟಿ ಐದು ಜನರ ಹೆಸರನ್ನು ಸಹ ಪ್ರಕಟಿಸಿದ್ದಾರೆ.

ನಾವು ಲಿಂಗಾಯತ ಹಾಗೂ ವೀರಶೈವ ಬೇರೆ ಎಂದು ಹೇಳಿದ್ದೇವೆ ಆದರೆ, ದಿಂಗಾಲೇಶ್ವರ ಸ್ವಾಮಿಗಳು ಇದನ್ನು ಒಪ್ಪುತ್ತಿಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡುವಂತೆ ಕೇಳಿದ್ದೇವೆ.
ಹೀಗಾಗಿ ಡಿ. 30 ರಂದು ಬೆಳಗ್ಗೆ 11 ಗಂಟೆಗೆ ಮೂರು ಸಾವಿರ ಮಠದಲ್ಲಿ ಬಹಿರಂಗ ಚರ್ಚೆ ಏರ್ಪಡಿಸಲಾಗಿದೆ. ಇದರ ಹಿನ್ನೆಲೆ ಮೂರು ಸಾವಿರಮಠಕ್ಕೆ ಭೇಟಿ ನೀಡಿರುವುದಾಗಿ ಬಸವರಾಜ ಹೊರಟ್ಟಿ ಇತ್ತೀಚೆಗೆ ಹೇಳಿದ್ದರು. ಆದರೆ, ಸ್ಥಳಿಯ ಪೊಲೀಸರು ಹಾಗೂ ಮಠದ ಅಧಿಕಾರಿಗಳು ನಿರಾಕರಿಸಿದ್ದರಿಂದ ರದ್ದುಗೊಂಡಿತ್ತು.
ವೀರಶೈವ ಹಾಗೂ ಲಿಂಗಾಯತ ಬೇರೆ ಬೇರೆ ಎನ್ನುವ ಕಿತ್ತಾಟಕ್ಕೆ ತುಮೂರಿನ ಸಿದ್ದಗಂಗಾ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications