ಕೌನ್ಸೆಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಕಾರ್ಯಯನ್ನು ಸ್ವಾಗತಿಸುತ್ತೇನೆ: ಸಭಾಪತಿ ಬಸವರಾಜ ಹೊರಟ್ಟಿ
ಹುಬ್ಬಳ್ಳಿ, ಆಗಸ್ಟ್, 20: ಈ ವರ್ಷ 30 ಸಾವಿರಕ್ಕೂ ಹೆಚ್ಚು ಶಿಕ್ಷಕರು ಕೌನ್ಸೆಲಿಂಗ್ ಮೂಲಕ ಯಾವುದೇ ಗೊಂದಲವಿಲ್ಲದೇ ಪಾರದರ್ಶಕವಾಗಿ ವರ್ಗಾವಣೆಗೊಂಡಿರುವ ಮಾಹಿತಿ ಕೇಳಿ ಸಂತಸವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ನಾನು 2006-07ರಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವನಾದಾಗ ದೇಶದಲ್ಲಿಯೇ ಮೊದಲ ಬಾರಿ ಪ್ರಾಥಮಿಕ ಹಂತದಿಂದ ಪದವಿಪೂರ್ವ ಹಂತದವರೆಗಿನ ಶಾಲಾ- ಕಾಲೇಜು ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದೆ.
ಆರಂಭದಲ್ಲಿ ಕೆಲ ಸಣ್ಣಪುಟ್ಟ ನ್ಯೂನ್ಯತೆಗಳು ವರ್ಗಾವಣೆ ನೀತಿಯಲ್ಲಿದ್ದರೂ ಕಾಲಕಾಲಕ್ಕೆ ಬದಲಾವಣೆ ಆಗುವ ಮೂಲಕ ಪ್ರಸ್ತುತ ಸಾಲಿನಲ್ಲಿ 30 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ನೀತಿಯ ಲಾಭ ಪಡೆದಿದ್ದಾರೆ ಎಂದರು.

ಇದೊಂದು ದಾಖಲೆಯ ವರ್ಗಾವಣೆ ಎಂಬ ಮಾಹಿತಿ ಕೂಡ ಇಲಾಖೆಯಿಂದ ಇದೆ. ವರ್ಗಾವಣೆ ಕುರಿತು ಸಾಕಷ್ಟು ಅನುಮಾನಗಳು ಆರೋಪಗಳು ಇಂದಿನ ದಿನಮಾನಗಳಲ್ಲಿ ಕೇಳಿಬರುತ್ತಿವೆ. 2006-07ರ ಪೂರ್ವದಲ್ಲಿಯೂ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆಯ ಒಂದು ದೊಡ್ಡ ಜಾಲವೇ ಇತ್ತು ಎಂದರು.
ನೂರಾರು ಕೋಟಿ ವರ್ಗಾವಣೆಯ ಮೂಲಕ ನಡೆಯುತ್ತಿತ್ತು ಎಂಬ ಮಾಹಿತಿಯನ್ನೂ ಸಹ ಕೇಳುತ್ತಾ ಬಂದಿದ್ದೆ. ಇದಕ್ಕೊಂದು ಇತಿಶ್ರೀ ಹಾಡಬೇಕೆಂಬ ದೃಢ ಸಂಕಲ್ಪದಿಂದ ಉತ್ತಮ ಅಧಿಕಾರಿಗಳ ತಂಡ ಕಟ್ಟಿಕೊಂಡು ದೇಶದಲ್ಲಿಯೇ ಮೊದಲ ಬಾರಿ ವರ್ಗಾವಣೆ ನೀತಿ ಜಾರಿಗೊಳಿಸುವ ಮೂಲಕ ಯಾವೊಬ್ಬ ಶಿಕ್ಷಕರು ಜನಪ್ರತಿನಿಧಿಗಳ ಬಳಿ ಬರದ ಹಾಗೆ, ಹಾಗೂ ವಿಧಾನಸೌಧದ ಸುತ್ತದ ಹಾಗೆ ನೋಡಿಕೊಂಡಿದ್ದು ಈ ವರ್ಗಾವಣೆ ನೀತಿಯಿಂದ ಎಂದರು.
ಇದರಿಂದಾಗಿ ಶಿಕ್ಷಣ ಇಲಾಖೆ ವರ್ಗಾವಣೆ ವಿಷಯದಲ್ಲಿ ಕೆಟ್ಟ ಹೆಸರನ್ನು ಪಡೆದುಕೊಳ್ಳದೇ ಇಲ್ಲ-ಸಲ್ಲದ ಆರೋಪದಿಂದ ಮುಕ್ತವಾಗಿರುವುದಕ್ಕೆ ಖುಷಿ ಎನಿಸುತ್ತದೆ. ಪ್ರಸ್ತುತ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೊಳ್ಳುತ್ತಿರುವುದರಿಂದ ಅಲ್ಲಿನ ಸಿಬ್ಬಂದಿ ನಿರಾಳವಾಗಿ ಕೆಲಸ ಮಾಡುವಂತಾಗಿದೆ.
ಎಲ್ಲ ಇಲಾಖೆಗಳ ಸಿಬ್ಬಂದಿಯನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೊಳಿಸುವ ಪದ್ಧತಿಯನ್ನು ಅಳವಡಿಸಿಕೊಂಡರೆ ಅನಾವಶ್ಯಕವಾಗಿ ಉಂಟಾಗುವ ಇಲ್ಲಸಲ್ಲದ ಆರೋಪಗಳಿಂದ ಮುಕ್ತರಾಗಬಹುದು. ಹಾಗೂ ಸಾರ್ವಜನಿಕರಿಂದ ಸರ್ಕಾರಕ್ಕೆ ಆಗುವ ಮುಜುಗರವನ್ನು ತಪ್ಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications