ಕೌನ್ಸೆಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಕಾರ್ಯಯನ್ನು ಸ್ವಾಗತಿಸುತ್ತೇನೆ: ಸಭಾಪತಿ ಬಸವರಾಜ ಹೊರಟ್ಟಿ
ಹುಬ್ಬಳ್ಳಿ, ಆಗಸ್ಟ್, 20: ಈ ವರ್ಷ 30 ಸಾವಿರಕ್ಕೂ ಹೆಚ್ಚು ಶಿಕ್ಷಕರು ಕೌನ್ಸೆಲಿಂಗ್ ಮೂಲಕ ಯಾವುದೇ ಗೊಂದಲವಿಲ್ಲದೇ ಪಾರದರ್ಶಕವಾಗಿ ವರ್ಗಾವಣೆಗೊಂಡಿರುವ ಮಾಹಿತಿ ಕೇಳಿ ಸಂತಸವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ನಾನು 2006-07ರಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವನಾದಾಗ ದೇಶದಲ್ಲಿಯೇ ಮೊದಲ ಬಾರಿ ಪ್ರಾಥಮಿಕ ಹಂತದಿಂದ ಪದವಿಪೂರ್ವ ಹಂತದವರೆಗಿನ ಶಾಲಾ- ಕಾಲೇಜು ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದೆ.
ಆರಂಭದಲ್ಲಿ ಕೆಲ ಸಣ್ಣಪುಟ್ಟ ನ್ಯೂನ್ಯತೆಗಳು ವರ್ಗಾವಣೆ ನೀತಿಯಲ್ಲಿದ್ದರೂ ಕಾಲಕಾಲಕ್ಕೆ ಬದಲಾವಣೆ ಆಗುವ ಮೂಲಕ ಪ್ರಸ್ತುತ ಸಾಲಿನಲ್ಲಿ 30 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ನೀತಿಯ ಲಾಭ ಪಡೆದಿದ್ದಾರೆ ಎಂದರು.

ಇದೊಂದು ದಾಖಲೆಯ ವರ್ಗಾವಣೆ ಎಂಬ ಮಾಹಿತಿ ಕೂಡ ಇಲಾಖೆಯಿಂದ ಇದೆ. ವರ್ಗಾವಣೆ ಕುರಿತು ಸಾಕಷ್ಟು ಅನುಮಾನಗಳು ಆರೋಪಗಳು ಇಂದಿನ ದಿನಮಾನಗಳಲ್ಲಿ ಕೇಳಿಬರುತ್ತಿವೆ. 2006-07ರ ಪೂರ್ವದಲ್ಲಿಯೂ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆಯ ಒಂದು ದೊಡ್ಡ ಜಾಲವೇ ಇತ್ತು ಎಂದರು.
ನೂರಾರು ಕೋಟಿ ವರ್ಗಾವಣೆಯ ಮೂಲಕ ನಡೆಯುತ್ತಿತ್ತು ಎಂಬ ಮಾಹಿತಿಯನ್ನೂ ಸಹ ಕೇಳುತ್ತಾ ಬಂದಿದ್ದೆ. ಇದಕ್ಕೊಂದು ಇತಿಶ್ರೀ ಹಾಡಬೇಕೆಂಬ ದೃಢ ಸಂಕಲ್ಪದಿಂದ ಉತ್ತಮ ಅಧಿಕಾರಿಗಳ ತಂಡ ಕಟ್ಟಿಕೊಂಡು ದೇಶದಲ್ಲಿಯೇ ಮೊದಲ ಬಾರಿ ವರ್ಗಾವಣೆ ನೀತಿ ಜಾರಿಗೊಳಿಸುವ ಮೂಲಕ ಯಾವೊಬ್ಬ ಶಿಕ್ಷಕರು ಜನಪ್ರತಿನಿಧಿಗಳ ಬಳಿ ಬರದ ಹಾಗೆ, ಹಾಗೂ ವಿಧಾನಸೌಧದ ಸುತ್ತದ ಹಾಗೆ ನೋಡಿಕೊಂಡಿದ್ದು ಈ ವರ್ಗಾವಣೆ ನೀತಿಯಿಂದ ಎಂದರು.
ಇದರಿಂದಾಗಿ ಶಿಕ್ಷಣ ಇಲಾಖೆ ವರ್ಗಾವಣೆ ವಿಷಯದಲ್ಲಿ ಕೆಟ್ಟ ಹೆಸರನ್ನು ಪಡೆದುಕೊಳ್ಳದೇ ಇಲ್ಲ-ಸಲ್ಲದ ಆರೋಪದಿಂದ ಮುಕ್ತವಾಗಿರುವುದಕ್ಕೆ ಖುಷಿ ಎನಿಸುತ್ತದೆ. ಪ್ರಸ್ತುತ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೊಳ್ಳುತ್ತಿರುವುದರಿಂದ ಅಲ್ಲಿನ ಸಿಬ್ಬಂದಿ ನಿರಾಳವಾಗಿ ಕೆಲಸ ಮಾಡುವಂತಾಗಿದೆ.
ಎಲ್ಲ ಇಲಾಖೆಗಳ ಸಿಬ್ಬಂದಿಯನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೊಳಿಸುವ ಪದ್ಧತಿಯನ್ನು ಅಳವಡಿಸಿಕೊಂಡರೆ ಅನಾವಶ್ಯಕವಾಗಿ ಉಂಟಾಗುವ ಇಲ್ಲಸಲ್ಲದ ಆರೋಪಗಳಿಂದ ಮುಕ್ತರಾಗಬಹುದು. ಹಾಗೂ ಸಾರ್ವಜನಿಕರಿಂದ ಸರ್ಕಾರಕ್ಕೆ ಆಗುವ ಮುಜುಗರವನ್ನು ತಪ್ಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications