ಜಗದೀಶ್ ಶೆಟ್ಟರ್ ಬೆನ್ನಿಗೆ ನಿಂತ 'ವೀರಶೈವ ಲಿಂಗಾಯತ ಮಹಾಸಭಾ': ಬಿಜೆಪಿಗೆ ಬುದ್ಧಿ ಕಲಿಸುವ ಖಡಕ್ ಎಚ್ಚರಿಕೆ
ಹುಬ್ಬಳ್ಳಿ, ಮಾರ್ಚ್ 18: ಎರಡು ಕ್ಷೇತ್ರಗಳ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಇದೀಗ ಬೆಳಗಾವಿ ಟಿಕೆಟ್ ಪಡೆಯಲು ಪರದಾಡುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಬೆನ್ನಿಗೆ 'ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ' ನಿಂತಿದೆ. ಜೊತೆಗೆ ಟಿಕೆಟ್ ವಿಚಾರವಾಗಿ ಬಿಜೆಪಿಗೆ ಖಡಕ್ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದೆ.
ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಧಾನಸಭೆಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ಮುಂದಾಗಿದ್ದ ಕಾಣದ ಕೈಗಳು ಈ ಭಾರಿಯು ಕೆಲಸ ಮಾಡುತ್ತಿವೆ ಎನ್ನಲಾಗಿದೆ.

ಉತ್ತರ ಕರ್ನಾಟಕದ ಲಿಂಗಾಯತ ನಾಯಕರಲ್ಲಿ ಒಬ್ಬರಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಪರ ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಧ್ವನಿ ಎತ್ತಿದೆ. ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಮಹಾಸಭಾದ ಉಪಾಧ್ಯಕ್ಷ ಪ್ರೋ.ವಿ.ಸಿ.ಸವಡಿ ಅವರು ಎಚ್ಚರಿಕೆ ನೀಡಿದರು.
ಬೆಳಗಾವಿ ಟಿಕೆಟ್ ತಪ್ಪಿಸಲು ಕುತಂತ್ರ
ಸೋಮವಾರ ಈ ಕುರಿತು ಮಹಾಸಭಾ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯಿತು. ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಕ್ಷೇತ್ರಗಳಲ್ಲೂ ಅವರಿಗೆ ಟಿಕೆಟ್ ನೀಡಲಿಲ್ಲ ಎಂದರು.
ಈಗ ಅವರ ಹೆಸರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದ್ರೆ ಶೆಟ್ಟರ್ಗೆ ಆಗದ ಕೆಲವರು ಕುತಂತ್ರ ಮಾಡಿ ವ್ಯವಸ್ಥಿತವಾಗಿ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿದೆ. ಬಿಜೆಪಿ ವರಿಷ್ಠರು ಅವರ ಕುತಂತ್ರಕ್ಕೆ ಒಳಗಾದಗೆ ಶೆಟ್ಟರ್ಗೆ ಟಿಕೆಟ್ ನೀಡಬೇಕು.

ಚುನಾವಣೆಯಲ್ಲಿ ಮಹಾಸಭಾ ಬುದ್ಧಿ ಕಲಿಸುವ ಎಚ್ಚರಿಕೆ
ಒಂದು ವೇಳೆ ಟಿಕೆಟ್ ನೀಡದೆ ಹೋದಲ್ಲಿ ಮಹಾಸಭಾ ವತಿಯಿಂದ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಲಾಗುವುದು. ಅಲ್ಲದೇ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಲಾಗುವುದು ಎಂದು ಅವರು ಎಚ್ಚರಿಕೆ ಸಂದೇಶ ಕೇಸರಿಪಡೆಗೆ ರವಾನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಸದಸ್ಯರಾದ ಶೇಖರ ಕವಳಿ, ರಾಜಶೇಖರ ಉಪ್ಪಿನ, ಪರಮೇಶ್ವರ ನಿಗದಿ ಮತ್ತಿತರರು ಪಾಲ್ಗೊಂಡಿದ್ದರು.
ಅಧಿಕೃತ ಘೋಷಣೆ ಬಾಕಿ: ಶೆಟ್ಟರ್ ಸ್ಪರ್ಧೆಗೆ ಅಪಸ್ವರ
ಹಾವೇರಿ, ಧಾರವಾಡ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಜಗದೀಶ್ ಶೆಟ್ಟರ್, ರಾಜ್ಯ ಮತ್ತು ರಾಷ್ಟ್ರ ನಾಯಕರ ಮನವೊಲಿಸಿ ಬೆಳಗಾವಿ ಟಿಕೆಟ್ ನೀಡಲು ಒಪ್ಪಿಗೆ ಪಡೆಯುವಲ್ಲಿ ಸಫಲರಾಗಿದ್ದರು. ಆದರೆ ಇನ್ನೂ ಟಿಕೆಟ್ ಅಧಿಕೃತ ಘೋಷಣೆ ಆಗಿಲ್ಲ. ಅದಕ್ಕು ಮೊದಲೇ ಬೆಳಗಾವಿಯಲ್ಲಿ ಶೆಟ್ಟರ್ ಸ್ಪರ್ಧೆಗೆ ವಿರೋಧ ಕೇಳಿ ಬಂದಿದೆ. ಬಿಎಲ್ ಸಂತೋಷ್ ಬಣದ ಕೆಲ ಸ್ಥಳೀಯ ನಾಯಕರು ಟಿಕೆಟ್ ತಪ್ಪಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಶೆಟ್ಟರ್ ಬೆನ್ನಿಗೆ ವೀರಶೈವ ಮಹಾಸಭಾ ನಿಂತಿದೆ.
ಬೆಳಗಾವಿಯಲ್ಲಿ ಸ್ಥಳೀಯ ನಾಯಕರು ಹಾಗೂ ಇನ್ನಿತರರು ಗೋಬ್ಯಾಕ್ ಅಭಿಯಾನ ಆರಂಭಿಸಲು ನಿರ್ಧರಿಸಿದ್ದಾರೆ. ಶೆಟ್ಟರ್ಗೆ ಟಿಕೆಟ್ ನೀಡದಂತೆ ವರಿಷ್ಠರ ಮೇಲೆ ಈ ಮೂಲಕ ಒತ್ತಡ ಹೇರಲಿದ್ದಾರೆ.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications