Bomb Blast: ರಾಮೇಶ್ವರ ಕೆಫೆ ಬ್ಲಾಸ್ಟ್ ಕೇಸ್ಗೆ ಹುಬ್ಬಳ್ಳಿ ಲಿಂಕ್ ಸಾಬೀತು: ಇಬ್ಬರನ್ನು ಬಂಧಿಸಿದ NIA
ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯಲ್ಲಿ ಬಿಡು ಬಿಟ್ಟಿದ್ದ ಬೆಂಗಳೂರು ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾಧಿಕಾರಿಗಳು (NIA) 11 ಪ್ರದೇಶಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಮಂಗಳವಾರ ರಾತ್ರಿ ಇಬ್ಬರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣವು ಹುಬ್ಬಳ್ಳಿಗೆ ಲಿಂಕ್ ಇದೆ ಎಂಬುದು ಸಾಬೀತಾಗಿದೆ.
ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಸೇರಿ 11 ಪ್ರದೇಶಗಳಲ್ಲಿ ತನಿಖಾಧಿಕಾರಿಗಳು ದಾಳಿ ನಡೆಸಿದರು. ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ, ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಅವರನ್ನು ಎನ್ಐಎ ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

ಈ ಬಂಧಿತ ಇಬ್ಬರು ವಿದೇಶಿಗಳ ಸೂಚನೆ ಮೇರೆಗೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಕೆಲಸ ಮಾಡಿದ್ದರು ಎಂಬುಗು ಗೊತ್ತಾಗಿದೆ. ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್ಗೆ ಆರ್ಥಿಕವಾಗಿ ಸಹಾಯ ಮಾಡಿದ್ದಾರೆ ಎಂದು ತನಿಖಾ ಏಜೆನ್ಸಿ ಮೂಲಗಳು ಮಾಹಿತಿ ನೀಡಿವೆ.
ಬಂಧಿತರಿಂದ ಎಸ್ಐಟಿಗೆ ಮಹತ್ವ ಮಾಹಿತಿ
ಸದ್ಯ ಇಬ್ಬರು ಬಂಧಿತರ ಬಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಾಕ್ಷ್ಯಗಳು ಸಿಕ್ಕಿವೆ. ಆರೋಪಿಗಳಿಗೆ ಹಣ ನೀಡಿದ್ದರ ಬಗ್ಗೆ ವಿದೇಶಿ ಹ್ಯಾಂಡ್ಲರ್ನ ಕೋಡ್ ವರ್ಡ್ನಲ್ಲಿ ಸಂದೇಶ ರವಾನೆಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಗಳು ಸಿಕ್ಕಿವೆ.
ದಿ ರಾಮೇಶ್ವರಂ ಕೆಫೆ ಸ್ಫೋಟ ಘಟನೆ ನಂತರ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದ. ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಈ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ.
ಒಂದೂವರೆ ತಿಂಗಳ ಬಳಿಕ ಪ್ರಮುಖ ಆರೋಪಿಗಳ ಬಂಧನ
ತಿಂಗಳುಗಳ ಹಿಂದೆ ಬೆಂಗಳೂರಿನ ವೈಟ್ಫಿಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಂಧಿತ ಆರೋಪಿಗಲು ಬಾಂಬ್ ಸ್ಪೋಟಿಸಿದ್ದರು. ನಂತರ ಪರಾರಿಯಾಗಿದ್ದ ಮೊಹಮ್ಮದ್ ಮತೀನ್ ಹಾಗೂ ಮುಸಾವಿರ್ ಹುಸೇನ್ ಅನ್ನು ಒಂದೂವರೆ ತಿಂಗಳ ಬಳಿಕ ಎನ್ಐಎಗೆ ಸೆರೆ ಸಿಕ್ಕರು.

ಚೈನ್ ಲಿಂಕ್ ಮೂಲಕ ಬಾಂಬ್ ಸ್ಪೋಟ
ಈ ಬಂಧಿತರನ್ನು ವಿಚಾರಣೆ ನಡೆಸಿದಾಗಿ ಇವರದ್ದು ಚೈನ್ ಲಿಂಕ್ ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಇವರಿಬ್ಬರೇ ಅಲ್ಲದೇ ನೆನ್ನೆ ಹುಬ್ಬಳ್ಳಿಯಲ್ಲಿ ಬಂಧನಕ್ಕೊಳಗಾದ ಇಬ್ಬರು ಸಹೋದರರಿಗೂ ಲಿಂಕ್ ಇದೆ ಎಂಬ ಮಾಹಿತಿ ಬಹಿರಂಗವಾಗಿದೆ. ಅದರ ಆಧಾರದಲ್ಲಿಯೇ ಕೆಲವು ದಿನಗಳಿಂದ ಎನ್ಐಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಬೀಡು ಬಿಟ್ಟು ಕಾರ್ಯಾಚರಣೆ ನಡೆಸಿದ್ದಾರೆ.
ಸಿಲಿಕಾನ್ ಸಿಟಿ, ಐಟಿ ಹಬ್ ಹೆಸರೇ ಹೇಳುವಂತೆ ಬೆಂಗಳೂರು ಐಟಿ ಬಿಟಿ ಕಂಪನಿಗಳ ಕೇಂದ್ರವಾಗಿದೆ. ಹೀಗಾಗಿ ಐಟಿ ಕಂಪನಿಗಳು ಹೆಚ್ಚಿರುವ ವೈಟ್ಫಿಲ್ಡ್ ನಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದರೆ ದೇಶದ ಗಮನ ಸೆಳೆಯಬಹುದು ಎಂಬ ಪ್ಲಾನ್ ಮಾಡಿಕೊಂಡಿದ್ದರು ಎಂಬ ಮಾಹಿತಿ ಬಂಧಿತರಿಂದಲೇ ಅಧಿಕಾರಿಗಳಿಗೆ ಗೊತ್ತಾಗಿದೆ.
ಸದ್ಯ ಪ್ರಕರಣ ಚೈನ್ ಲಿಂಕ್ ಅನ್ನು ತನಿಖಾಧಿಕಾರಿಗಳು ಬ್ರೇಕ್ ಮಾಡುತ್ತಿದ್ದಾರೆ. ಆರೋಪಿಗಳ ಜತೆ ಸಂಪರ್ಕದಲ್ಲಿ ಇದ್ದವರನ್ನು ಹೆಡೆಮುರಿ ಕಟ್ಟುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.
-
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ











Click it and Unblock the Notifications