Get Updates
Get notified of breaking news, exclusive insights, and must-see stories!

ಸರ್ಕಾರದಿಂದ ಬಿಗ್‌ ಗುಡ್‌ನ್ಯೂಸ್‌: 40,000 ಮನೆ ಹಂಚಿಕೆಗೆ ಡೇಟ್‌ ಫಿಕ್ಸ್‌!

ಬೆಲೆ ಏರಿಕೆಯ ನಡುವೆಯೇ ಕರ್ನಾಟಕ ಸರ್ಕಾರವು ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯು ಮನೆ ಕನಸು ಕಾಣುತ್ತಿರುವವರಿಗೆ ಬಿಗ್‌ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ರಾಜ್ಯದಲ್ಲಿ ಮನೆ ಕಟ್ಟಬೇಕು ಎನ್ನುವ ಆಸೆಯಲ್ಲಿ ಇರುವವರಿಗೆ ಭರ್ಜರಿ ಗುಡ್‌ನ್ಯೂಸ್‌ ಕೊಡಲಾಗಿದೆ. ಅದರಲ್ಲೂ ಬಡವರಿಗೆ ಇದರ ಲಾಭವಾಗಲಿದೆ. ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕೊಳಗೇರಿ ಅಭಿವೃದ್ಧಿ ಮಂಡಳಿಯು ಭರ್ಜರಿ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಸರ್ವರಿಗೂ ಸೂರು ಎನ್ನುವ ಯೋಜನೆಯನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದ್ದು. ಇದೀಗ ಈ ಯೋಜನೆಯ ಅಡಿಯಲ್ಲಿ ಇನ್ನಷ್ಟು ಮನೆಗಳನ್ನು ವಿತರಿಸುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ.

Big Good News From Karnataka Government Date Fixed for Allotment of 40 000 Houses

ಬೆಲೆ ಏರಿಕೆಯ ಬಿಸಿಯಲ್ಲಿ ರೋಸಿ ಹೋಗಿರುವ ಜನರಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದೆ. ಕರ್ನಾಟಕದಲ್ಲಿ ವಿವಿಧ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಹಲವರಿಗೆ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿ

ವತಿಯಿಂದ ಬಡ ಕುಟುಂಬಗಳಿಗೆ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42,345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡುವುದಾಗಿ ಸರ್ಕಾರ ಹೇಳಿದೆ. ಈ ವಿಷಯವನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಖಚಿತಪಡಿಸಿದ್ದಾರೆ.

ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ನಂತರ ಅವರು ಮಾತನಾಡಿದ್ದಾರೆ. ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ 36,789 ಮನೆಗಳನ್ನು ರಾಜ್ಯ ಸರ್ಕಾರವು ಹಂಚಿಕೆ ಮಾಡಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27ಕ್ಕೆ ಹುಬ್ಬಳ್ಳಿ ಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬರೋಬ್ಬರಿ 42,345 ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ ಸೌಕರ್ಯ ಸಹಿತ ಒಂದು ವಾರದಲ್ಲಿ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಇನ್ನು 2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟವಾಗಿ ಮನೆಗಳು ಅರ್ಧಕ್ಕೆ ನಿಂತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಮೇಲೆ, ಫಲಾನುಭವಿಗಳ ವಂತಿಗೆಯನ್ನು ತಲಾ 4 ಲಕ್ಷ ರೂಪಾಯಿ ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಆಯುಕ್ತ ಅಶೋಕ್, ತಾಂತ್ರಿಕ ಸಲಹೆಗಾರ ಬಾಲರಾಜ್, ಪ್ರಧಾನ ಎಂಜಿನಿಯರ್‌ ಸುಧೀರ್, ನಿರ್ದೇಶಕ ವೆಂಕಟೇಶ್, ವಿನಯ್ ಕುಮಾರ್ ಹಾಗೂ ರಶೀದ್ ಸೇರಿದಂತೆ ಹಲವರು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+