ಬಿಜೆಪಿಯ ರಹೀಮ್ ಫೋಟೋ ದುರುಪಯೋಗ, ದೂರು ನೀಡಲು ನಿರ್ಧಾರ
ಹುಬ್ಬಳ್ಳಿ, ಜುಲೈ 21: ಬಿಜೆಪಿ ಅಲ್ಪ ಸಂಖ್ಯಾತರ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ರಹೀಮ್ ಉಚ್ಚಿಲ್ ಅವರನ್ನು ಹುಬ್ಬಳ್ಳಿಯ ಸಿದ್ಧಾರೂಢಸ್ವಾಮಿ ಮಠದ ಪೂಜಾರಿಯನ್ನಾಗಿ ನೇಮಕ ಮಾಡಲಾಗಿದೆಯೇ?
ಇಂಥದೊಂದು ಪೋಸ್ಟ್ ಫೇಸ್ಬುಕ್ನಲ್ಲಿ ವೈರಲ್ ಆಗಿದೆ. ವಿಲಿಯಂ ಪಿಂಟೊ ಎಂಬ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ರಹೀಮ್ ಸಿದ್ಧಾರೂಢ ಸ್ವಾಮಿ ಮುಂದೆ ತೆಗೆದಿರುವ ಫೋಟೋ ವೈರಲ್ ಆಗಿದೆ.

ಇತ್ತೀಚಿಗೆ ಬಿಜೆಪಿ ವಿಸ್ತಾರಕರಾಗಿ ಹುಬ್ಬಳ್ಳಿಗೆ ಬಂದಿದ್ದ ರಹೀಮ್ ಉಚ್ಚಿಲ್ ಅವರು ನಗರದ ಸಿದ್ಧಾರೂಢಸ್ವಾಮಿ ಮಠಕ್ಕೆ ಭೇಟಿ ನೀಡಿದ್ದರು. ಅಲ್ಲದೆ ಸಿದ್ದಾರೂಢಸ್ವಾಮಿ ಗದ್ದುಗೆ ಎದುರು ಫೋಟೋ ತೆಗೆಸಿಕೊಂಡಿದ್ದರು.
ಇದೇ ಪೋಟೋವನ್ನು ಬಳಸಿಕೊಂಡು ವಿಲಿಯಂ ಪಿಂಟೊ ಎಂಬ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ರಹೀಮ್ ಉಚ್ಚಿಲ್ ಅವರು ಹುಬ್ಬಳ್ಳಿ ಶ್ರೀ ಸಿದ್ದಾರೂಢಮಠ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕಗೊಂಡಿದ್ದಾರೆ. ಅವರನ್ನು ನೇಮಕ ಮಾಡಲು ಮಠದ ಆಡಳಿತ ಮಂಡಳಿಯ ಸರ್ವ ಸದಸ್ಯರ ಸಭೆಯೇ ನಿರ್ಧರಿಸಲಾಗಿದೆ. ಹೀಗಾಗಿ ಅವರು ಶ್ರೀ ಶ್ರೀ ರಹೀಮ್ ಪೂಜಾರಿ ಆಗಿದ್ದಾರೆ ಎಂಬರ್ಥದ ಪೋಸ್ಟ್ ಹಾಕಲಾಗಿದೆ.
ಫೇಸ್ಬುಕ್ನಲ್ಲಿ ಇದಕ್ಕೆ ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದು, ಆಪ್ತರು ರಹೀಮ್ ಅವರಿಗೆ ಫೋನ್ ಮಾಡಿ ವಿಚಾರಿಸುತ್ತಿದ್ದಾರಂತೆ.
ಕಿಡಿಗೇಡಿಗಳ ಕೃತ್ಯ
ಆದರೆ, ಇದನ್ನು ಅಲ್ಲಗಳೆದಿರುವ ರಹೀಮ್, ಇದೊಂದು ಕಿಡಿಗೇಡಿಗಳ ಕೃತ್ಯವಾಗಿದೆ ಎಂದು ಕಿಡಿಕಾರಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದ್ದು, ನನ್ನ ವಿರುದ್ಧ ಇಸ್ಲಾಂ ಧರ್ಮ ಹಾಗೂ ಮುಖಂಡರನ್ನು ಎತ್ತಿಕಟ್ಟುವ ವ್ಯವಸ್ಥಿತ ಪಿತೂರಿ ಇದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಇಂಥವರ ವಿರುದ್ಧ ದೂರು ನೀಡಲು ನಿರ್ಧರಿಸಿದ್ದು, ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ಜುಲೈ 21ರಂದು ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications