ಸಂವಿಧಾನ ಬದಲಿಸಲು ಬಿಜೆಪಿ 400 ಸೀಟು ಕೇಳುತ್ತಿದೆ: HM ರೇವಣ್ಣ
ಹುಬ್ಬಳ್ಳಿ, ಏಪ್ರಿಲ್ 29: ಲೋಕಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಈ ಮಧ್ಯೆ ಸ್ಥಾನ ಗೆಲ್ಲುವ ಕುರಿತು ವಿಶ್ವಾಸದ ಹೇಳಿಕೆಗಳು ಕೇಳಿ ಬರುತ್ತಿವೆ. ಇದೀಗ ಅಧಿಕ ಸೀಟು ಗೆಲ್ಲುವುದಾಗಿ ಹೇಳಿದ್ದ ಬಿಜೆಪಿಗೆ ಪಂಚ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ತಿರುಗೇಟು ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು 400 ಸೀಟುಗಳನ್ನು ಕೇಳುತ್ತಿರುವುದು ದೇಶದ ಉದ್ಧಾರಕ್ಕಾಗಿ ಅಲ್ಲ. ದೇಶದ ಸಂವಿಧಾನವನ್ನು ಬದಲಿಸಲು ಅತ್ಯಧಿಕ ಸೀಟುಗಳನ್ನು ಕೇಳುತ್ತಿದ್ದಾರೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನ ಬೇಕಿಲ್ಲ ಎಂದು ದೂರಿದರು.

ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೌನ ಏಕೆ?
ಬಿಜೆಪಿಯವರಿಗೆ ಆಚಾರ, ವಿಚಾರ ಏನು ಇಲ್ಲ ಬರೀ ಪ್ರಚಾರ ಮಾತ್ರ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ವಿರುದ್ಧ ಮುಸ್ಲಿಂ ತುಷ್ಟಿಕರಣದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಮಾಂಗಲ್ಯ ಕಿತ್ತುಕೊಳ್ಳುವ ಬಗ್ಗೆ ಮಾತನಾಡುತ್ತಾರೆ. ಬಾಯಿ ತೆಗೆದರೆ ಬರಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ದೇಶದಲ್ಲಿ ಶ್ರೀಮಂತರನ್ನು ಶ್ರೀಮಂತರನ್ನಾಗಿ ಮಾಡುವುದು ಬಿಜೆಪಿಯ ಮೊದಲ ಗುರಿ ಎಂದು ಅವರು ಜರಿದರು. ಸಂವಿಧಾನ ಬದಲು ಮಾಡುವುದು ಬಿಜೆಪಿಯವರ ಆದ್ಯತೆ ಆಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಗುಡುಗು
ಹಾಸನದ ಸಂಸದರು ಅದೆಷ್ಟೋ ಮಹಿಳೆಯರ ಮಾಂಗಲ್ಯ ಕಿತ್ತುಕೊಂಡಿದ್ದಾರೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಅವರು ಗುಡುಗಿದರು. ಪ್ರಕರಣ ಕುರಿತು ಪ್ರಧಾನಮಂತ್ರಿಗಳು, ಬಿಜೆಪಿ ನಾಯಕರು ಮಾತನಾಡುವುದಿಲ್ಲ.

ಉತ್ತರ ಪ್ರದೇಶ, ಗುಜರಾತ್ ಅಂತ ರಾಜ್ಯಗಳಲ್ಲಿ ಮಹಿಳೆಯರ ನಾಪತ್ತೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಮೋದಿಯವರು ಯಾಕೆ ಮಾತನಾಡುತ್ತಿಲ್ಲ. ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಬ್ರಿಜ್ ಭೂಷಣ ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯದ ಬಗ್ಗೆ ಮಾತನಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಅವರು ವ್ಯಂಗ್ಯವಾಡಿದ್ದರು. ಇದೀಗ ನಮ್ಮ ಯೋಜನೆಗಳನ್ನು ಹೈಜಾಕ್ ಮಾಡಿ ಘೋಷಣೆ ಮಾಡಿದ್ದಾರೆ. ಇವರು ವಿಶ್ವಗುರು ಆಗಿದ್ದರೆ ಒಂದಾದರೂ ಸುದ್ದಿಗೋಷ್ಠಿ ನಡೆಸಬೇಕಿತ್ತಲ್ಲವೇ, ಏಕೆ ನಡೆಸಿಲ್ಲ. ಪ್ರಶ್ನೆಗಳಿಗೆ ಉತ್ತರಿಸಲು ಭಯಪಡುವ ಇವರಿಂದ ದೇಶದ ಅಭವೃದ್ಧಿ ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications