ವಿದ್ಯುತ್ ಖರೀದಿ : ಕೇಂದ್ರಕ್ಕೆ ಸವಾಲು ಹಾಕಿದ ಡಿಕೆಶಿ
ಹುಬ್ಬಳ್ಳಿ, ನವೆಂಬರ್ 28 : 'ವಿದ್ಯುತ್ ಖರೀದಿ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ಕೇಂದ್ರ ಸರ್ಕಾರ 2 ರೂಪಾಯಿ 50 ಪೈಸೆಗೆ ವಿದ್ಯುತ್ ನೀಡಲು ಸಿದ್ಧವಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ದರಕ್ಕೆ ವಿದ್ಯುತ್ ನೀಡಿದ್ದೇ ಆದಲ್ಲಿ ನನ್ನ ವೈಯಕ್ತಿಕ ಕೆಲಸ ಬಿಟ್ಟು ಅವರ ಹಿಂದೆ ಅಲೆಯುವೆ' ಎಂದು ಟಾಂಗ್ ನೀಡಿದರು.
ಅಗತ್ಯಬಿದ್ದಲ್ಲಿ 10 ಲಕ್ಷ ಟನ್ ಕಲ್ಲಿದ್ದಲು ಖರೀದಿ: ಡಿಕೆ ಶಿವಕುಮಾರ್
'ಒಂದು ವೇಳೆ ಕೇಂದ್ರ ಸರ್ಕಾರ 2 ರೂ. 50 ಪೈಸೆಗೆ ವಿದ್ಯುತ್ ನೀಡಿದರೆ, ಎಲ್ಲ ಖರೀದಿ ಪ್ರಕ್ರಿಯೆ ರದ್ದು ಮಾಡುವೆ' ಎಂದು ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
'ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲೋಡ್ ಶಡ್ಡಿಂಗ್ ಮಾಡುವುದಿಲ್ಲ. ರಾಜ್ಯದ ರೈತರಿಗೆ ಬೇಸಿಗೆಯಲ್ಲಿ ಸಂಪೂರ್ಣ ವಿದ್ಯುತ್ ನೀಡಲಾಗುತ್ತದೆ' ಎಂದು ಸ್ಪಷ್ಟಪಡಿಸಿದರು.
ಬಿಟಿಪಿಎಸ್ನಲ್ಲಿ ಕಲ್ಲಿದ್ದಲು ಕೊರತೆ, ವಿದ್ಯುತ್ ಉತ್ಪಾದನೆ ಸ್ಥಗಿತ?
ಯೋಗೇಶ್ ಗೌಡ ಕೊಲೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, 'ಇದು ಬಿಜೆಪಿಯವರು ಮಾಡುತ್ತಿರುವ ಸುಳ್ಳು ಆರೋಪ. ನಮ್ಮ ಯಾವೊಬ್ಬ ಸಚಿವರು ಅಕ್ರಮವನ್ನು ಎಸಗಿಲ್ಲಾ' ಎಂದು ಹೇಳಿದರು.
'ಪ್ರತಿಪಕ್ಷಗಳು ನಮ್ಮ ಬೆಳವಣಿಗೆ ಕಂಡು ಹತಾಶರಾಗಿದ್ದಾರೆ. ಹೀಗಾಗಿ ಕೆ.ಜೆ.ಜಾರ್ಜ್ ಹಾಗೂ ವಿನಯ ಕುಲಕರ್ಣಿ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಐಟಿ ದಾಳಿ ನಡೆದಾಗಲೂ ಅದೊಂದು ದೇಶದ ದೊಡ್ಡ ಹಗರಣ ಎನ್ನುವಂತೆ ಬಿಂಬಿಸಿದ್ದರು' ಎಂದರು.