ಮಂಚದಲ್ಲಿ ಮಲಗಿಸಿ ಅಧಿಕಾರದ ಖುರ್ಚಿ ಹತ್ತಿದವರು ಬಿಜೆಪಿಗರು: ಹುಬ್ಬಳ್ಳಿಯಲ್ಲಿ ಸಿ.ಎಂ.ಇಬ್ರಾಹಿಂ ಲೇವಡಿ
ಬಿಜೆಪಿಯವರೇ 13 ಜನರನ್ನು ಮಂಚದ ಮೇಲೆ ಮಲಗಿಸಿ ಸರ್ಕಾರ ತಂದಿದ್ದೀರಿ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದರು.
ಹುಬ್ಬಳ್ಳಿ, ಫೆಬ್ರವರಿ, 05: ಬಿಜೆಪಿಯವರೇ 13 ಜನರನ್ನು ಮಂಚದ ಮೇಲೆ ಮಲಗಿಸಿ ಸರ್ಕಾರ ತಂದಿದ್ದೀರಿ. ನಿಮಗೆ ನಾಚಿಕೆ ಆಗಬೇಕು. 13 ಜನರಲ್ಲಿ 12 ಜನ ಮಂತ್ರಿ ಆಗಿದ್ದಾರೆ. ಇವತ್ತು ಜಾರಕಿಹೊಳಿ ಸಿ.ಡಿ. ತಗೊಂಡು ಗೃಹ ಸಚಿವರ ಬಳಿ ಹೋಗಿದ್ದಾರೆ. ನನ್ನ ಮಗ ಸಿ.ಡಿ ಅಂದರೆ ಏನು ಅಂತಾ ಕೇಳುತ್ತಿದ್ದಾನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಬಿಜೆಪಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ವ್ಯಂಗ್ಯವಾಡಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, "ಕಟೀಲು ಪೀಟಲು ಬಾರಸಿ ಹೇಳುತ್ತಾನೆ. ರೋಡ್ ಬೇಡಾ, ಅಭಿವೃದ್ಧಿ ಬೇಡ ಅವನಿಗೆ ಬೇಕಿರುವುದು ಲವ್ ಜಿಹಾದ್. ಇವತ್ತು ಜಾರಕಿಹೊಳಿ ವಿಷಯನ್ಯಾಕೆ ಮಾತನಾಡುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಇಂತಹ ಪಾಪಿಗಳನ್ನು ಕಟ್ಟಿಕೊಂಡು ಮುಖ್ಯಮಂತ್ರಿ ಆಗಿದ್ದಾರೆ. ಸದಾನಂದಗೌಡ ಸೇರಿ 12 ಜನರ ಕ್ಯಾಸೆಟ್ ಹೊರಗೆ ಹಾಕಬೇಕು. ಇಲ್ಲದಿದ್ದರೆ ನೀವು ರಾಜೀನಾಮೆ ಕೊಟ್ಟು ಹೊರಗೆ ಬರಬೇಕು. ಸ್ಯಾಂಟ್ರೋ ರವಿ ಎಲ್ಲಿದ್ದಾನೆ, ಅವನ ಬಗ್ಗೆ ಸುದ್ದಿನೇ ಇಲ್ಲ. ಮಂಚ ಮುರಿಯೋದೇ ಅಚ್ಚೇ ದೀನ್ ನಾ," ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈಶ್ವರಪ್ಪಗೆ ಕ್ಲೀನ್ ಚೀಟ್ ಕೊಡಿಸಿದ್ದೀರಿ
13 ಜನ ಬಂದು ರಾಜೀನಾಮೆ ಕೊಟ್ಟವರು ದರಿದ್ರದವರು. ಯಡಿಯೂರಪ್ಪ, ನಿನ್ನ ಮಗ ಮೂರು ಸಲ ಎಂಪಿ ಆಗಿದ್ದಾನೆ. 30 ಸಾವಿರ ಜನರಿಗೆ ಮಣ್ಣು ಹಾಕಿದ್ದೀರಿ. ಈಶ್ವರಪ್ಪಗೆ ಕ್ಲೀನ್ ಚೀಟ್ ಕೊಡಿಸಿದ್ದೀರಿ. ಅದು ಸಿಬಿಐ ತನಿಖೆಯಾಗಬೇಕು. ಬಿಜೆಪಿಯಲ್ಲಿ ದರಿದ್ರ ಗ್ರಹಗಳು ಸೇರಿಕೊಂಡಿವೆ. ನಿಮ್ಮನ್ನು ತೆಗೆದು ಹಾಕಬೇಕು. ಇಂತಹ ದರಿದ್ರಗಳನ್ನು ತೆಗೆಯಬೇಕು ಎಂದು ಮನವಿ ಮಾಡಿದ ಅವರು, ದೇವೆಗೌಡ ಅವರ ರಾಜಕೀಯದಲ್ಲಿ ಒಂದು ರೂಪಾಯಿ ತಗೊಂಡಿಲ್ಲ ಎಂದು ಹೇಳಿದರು.

ಪ್ರಲ್ಹಾದ್ ಜೋಶಿ ವಿರುದ್ಧ ಇಬ್ರಾಹಿಂ ಕಿಡಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ಇದೇನಾ ನವಗೃಹ ಪೂಜೆ. ಬನ್ನಿ ಸಂವಾದ ಮಾಡೋಣ. ಈದ್ಗಾ ಮೈದಾನದಲ್ಲಿ ಗಣಪತಿ ಪೂಜೆ ಕೂರಿಸಿದರೇ ಅಲ್ಲ. ಜನರ ಮನಸ್ಸಲ್ಲಿ ಗಣಪತಿ ಕೂರಸಿ. ದರ್ಗಾ ತೆರವು ಮಾಡಿದ್ದೀರಿ, ಅದು ಏನು ಮಾಡಿತ್ತು ನಿಮಗೆ? ಬೈರಿದೇವರಕೊಪ್ಪ ದರ್ಗಾ ತೆರವು ಮಾಡಿದೀರಿ, ಏನು ಸಿಕ್ತು ನಿಮಗೆ.? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications