Cauvery dispute: ‌ಸಂಕಷ್ಟ ಸೂತ್ರ ಮಾಡಬೇಕು ಎಂದ ಸಚಿವ ಎಚ್‌.ಸಿ.ಮಹದೇವಪ್ಪ

ಹುಬ್ಬಳ್ಳಿ, ಸೆಪ್ಟೆಂಬರ್‌, 03: ಆಪರೇಷನ್ ಮಾಡುತ್ತಲೇ ಭಾರತೀಯ ಜನತಾ ಪಕ್ಷದವರು ಬೀದಿಗೆ ಬಂದಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ. ಮಹದೇವಪ್ಪ ಹುಬ್ಬಳ್ಳಿಯಲ್ಲಿ ಗಂಭೀರ ಆರೋಪ ಮಾಡಿದರು. ಹಾಗೆಯೇ ಇದೆ ವೇಳೆ ಕಾವೇರಿ ವಿವಾದ ಬಗ್ಗೆಯೂ ಅವರು ಮಾತನಾಡಿದ್ದಾರೆ. ಹಾಗಾದರೆ ಏನು ಹೇಳಿದ್ದಾರೆ ಅನ್ನುವ ವಿವರವನ್ನು ಇಲ್ಲಿ ಗಮನಿಸಿ.

ನಗರದಲ್ಲಿಂದ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾವೇರಿ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಸರ್ಕಾರ‌‌ ಕಾಪಾಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ಕೊಟ್ಟರು. ಇದು ನೂರು ವರ್ಷಗಳ ವಿವಾದವಾಗಿದೆ. ನಮಗೂ ತಮಿಳುನಾಡು ಹಾಗೂ ನಾಲ್ಕು ರಾಜ್ಯಗಳಿಗೆ ಈ ವಿಷಯದಲ್ಲಿ ಕೋರ್ಟ್ ಹೋಗಿ ನಿರ್ಣಯ ಆದೇಶ ಆಗಿ ಕಾವೇರಿ ಮ್ಯಾನೇಜ್ಮೆಂಟ್ ಮಾಡಲಾಗಿದೆ. ಈ ಸಲ ಕಡಿಮೆ ಪ್ರಮಾಣದಲ್ಲಿ ಮಳೆ ಆಗಿದ್ದರಿಂದ ಸಾಕಷ್ಟು ನೀರಿನ ಸಂಗ್ರಹ ನಮಲ್ಲಿ ಇಲ್ಲ. ಕಾರಣ ಕಾನೂನು, ಕೋರ್ಟ್ ನಮ್ಮ ಹಿತಾಸಕ್ತಿ ನೋಡಿಕೊಂಡು ಕ್ರಮ ಕೈಗೊಳ್ಳಬೇಕು ಎಂದರು.

Cauvery dispute: Sankasha sutra is the only solution says H.C.Mahadevappa

ನಮ್ಮ ಸರ್ಕಾರ ಮನವರಿಕೆ ಮಾಡಿದೆ. ಇನ್ನೂ ಇದೊಂದು ಸಂಕಷ್ಟ ಪರಿಸ್ಥಿತಿ. ಈ ಸಂಕಷ್ಟ ಸೋತ್ರ ಇನ್ನೂ ಬಂದಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡಿ ಸಂಕಷ್ಟ ಸೋತ್ರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಕಾಂಗ್ರೆಸ್‌ನಿಂದ ಬಿಜೆಪಿ ಶಾಸಕರು ಬರುತ್ತಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಆ ತರಹ ಮಾಡಿನೇ ಬೀದಿಗೆ ನಿಂತಿದ್ದಾರೆ. ಜನರ ಆದೇಶನೇ ಬೇರೆ, ಜನರ ಆಶೋತ್ತರಗಳ ವಿರುದ್ಧ ನಡೆದುಕೊಂಡಿದ್ದರಿಂದ 2008ರಲ್ಲೂ ಬಹುಮತ‌ ಇಲಲ್ಲ, 2018 ರಲ್ಲಿಯೂ ಬಹುಮತ ಇಲ್ಲ. ಆವಾಗ ಆಪರೇಷನ್ ಕಮಲ ಮಾಡಿದರಲ್ಲ ಏನಾಯಿತು? ಎಂದು ಪ್ರಶ್ನಿಸಿದರು.

ಬಿಜೆಪಿಯವರಿಗೆ ಇನ್ನೂ ವಿರೋಧ ಪಕ್ಷದ ನಾಯಕನ ಮಾಡಲಿಕ್ಕೆ ಆಗಿಲ್ಲ. ಕರ್ನಾಟಕದ ಇತಿಹಾಸದಲ್ಲಿಯೇ ವಿರೋಧ ಪಕ್ಷದ ನಾಯಕನಿಲ್ಲಿದೇ ಕಾಲಹರಣ ಮಾಡತ್ತಿದ್ದಾರೆ. ಯಾರು ಬಿಜೆಪಿಗೆ ನಮ್ಮ ಶಾಸಕರು ಹೋಗುವುದಿಲ್ಲ, ಸರ್ಕಾರ ಸ್ಥಿರವಾಗಿದೆ. ಅವಧಿ ಸಂಪೂರ್ಣ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಮತ್ತೇ ಅಸಮಾಧಾನಗೊಂಡು ಸಿಎಂಗೆ ಪತ್ರ ಬರೆದ ವಿಚಾರ ಕುರಿತು ಮಾತನಾಡಿದ ಅವರು, ಬಸವರಾಜ ರಾಯರಡ್ಡಿ ಮಂತ್ರಿ ಆದವರು, ಹಿರಿಯ ಶಾಸಕರು, ನಮ್ಮ ಸ್ನೇಹಿತರು. ಅಧಿಕಾರಿಗಳನ್ನು ಹೇಗೆ ಹ್ಯಾಂಡಲ್ ಮಾಡಬೇಕು ಎಂದು ಅವರಿಗೆ ಗೊತ್ತಿದೆ. ನನಗೆ ಅವರು ಅಸಮಾಧಾನಗೊಂಡಿದ್ದಾರೆ ಅಂತಾ ಅನಿಸುವುದಿಲ್ಲ. ಹೆಚ್ಚು ಅಭಿವೃದ್ಧಿ ಮಾಡಬೇಕೆನ್ನುವ ಬಗ್ಗೆ ಹೆಚ್ಚು ಉತ್ಸಾಹ ಹೊಂದಿರುವರು. ಏನಾದರೂ ಆಗಿದ್ದರೆ ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ ಎಂದರು.

ಎಸ್‌ಸಿ, ಎಸ್‌ಟಿ ಇಲಾಖೆ ಹಣ ಐದು ಗ್ಯಾರಂಟಿಗಳಿಕೆ ಬಳಕೆ ಆರೋಪ ಕುರಿತು ಮಾತನಾಡಿದ ಅವರು, ಇದು ಸುಳ್ಳು ಎಸ್ಸಿ ಪಿಇಟಿ ನಾನ್ ಗ್ರಾಂಟೆಬಲ್ ಅನುದಾನ ‌ ಎಸ್‌ಸಿ, ಎಸ್ಟಿ ಅವರಿಗೆ ಅಲ್ಲದೇ ಬೇರೇ ಉದ್ದೇಶಕ್ಕೆ ಬಳಕೆ ಮಾಡುವುದಕ್ಕೆ ಬರುವುದಿಲ್ಲ. ಬೇರೆ ಉದ್ದೇಶಕ್ಕೆ ಬಳಸಬಾರದು ಎಂಬ ಉದ್ದೇಶದಿಂದ 7 ಡಿಗೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಯಾವುದೇ ಕಾರಣಕ್ಕೂ ಬೇರೆ ಕಡೆ ಅಥವಾ ಐದು ಗ್ಯಾರಂಟಿಗಳಿಗೆ ಕೊಡುವುದಕ್ಕೆ ಬರಲ್ಲ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಶಾಸಕ ಅಬ್ಬಯ್ಯಾ ಪ್ರಸಾದ್, ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ಪಾಟೀಲ್ ಸೇರಿದಂತೆ ಮುಂತಾದವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+