ಕುಂದಗೋಳ: ಪುರಾತನ ಗುಹೆ ಕುಸಿತದಿಂದ ಗ್ರಾಮಸ್ಥರ ಬದುಕು ಅತಂತ್ರ
ಹುಬ್ಬಳ್ಳಿ, ಜೂ.26: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಪುರಾತನ ಚಾಲುಕ್ಯರ ಕಾಲದ ಗುಹೆಯೊಂದು ಕುಸಿದಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಹೌದು, ಹೀಗೆ ಕುಸಿದಿರುವ ಗುಹೆ ಚಾಲುಕ್ಯರ ಕಾಲದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದೆ. ಗುಹೆಯನ್ನು ರಾಜ ಮಹಾರಾಜರು ಯುದ್ಧದ ಸಮಯದಲ್ಲಿ ತಮ್ಮ ರಕ್ಷಣೆಗಾಗಿ ಬಳಸಿಕೊಳ್ಳುತ್ತಿದ್ದರಂತೆ. ಅಲ್ಲದೇ ಗುಹೆಯಲ್ಲಿ ಗವಿಸಿದ್ದೇಶ್ವರ ದೇಗುಲ ಕೂಡಾ ಇತ್ತಂತೆ ಆದರೆ ಇಂತಹ ಇತಿಹಾಸ ಪ್ರಸಿದ್ಧ ಗುಹೆ ಕಳೆದ ಕೆಲವು ದಿನಗಳ ಹಿಂದೆ ಗುಹೆ ಕುಸಿಯುತ್ತಿದ್ದು, ಪರಿಣಾಮವಾಗಿ ಪುರಾತನ ಗುಹೆ ಸಂಪೂರ್ಣ ಮುಚ್ಚಿ ಹೋಗುವ ಹಂತದಲ್ಲಿದೆ.
ಗುಹೆ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ನೆಲಕಚ್ಚಿದ ಮರಗಳು
ಇನ್ನು ಗುಹೆ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಗುಹೆಯ ಅಕ್ಕಪಕ್ಕದ ಮರಗಳು ನೆಲಕ್ಕೆ ಬಿದ್ದಿವೆ, ಸ್ಥಳೀಯರ ಮನೆಗಳಿಗೆ ದಕ್ಕೆ ಉಂಟಾಗಿದೆ. ಇದಲ್ಲದೇ ಮನೆ, ಶೌಚಾಲಯ, ಬಣವೆಗಳು ಯಾವಾಗ ಕುಸಿದು ಬೀಳುತ್ತವೆ ಎಂಬ ಆತಂಕದಲ್ಲಿ ಜೀವ ಭಯದಿಂದ ಟ್ಯಾಕ್ಟರ್ ಟೇಲರ್, ದನದ ಕೊಟ್ಟಿಗೆಯಲ್ಲಿ ಜನರು ವಾಸಿಸುವಂತಾಗಿದೆ.

ಈ ಹಿಂದೆ ಗುಹೆ ನೆಲಕ್ಕೆ ಬಿದ್ದಾಗ ಸ್ಥಳೀಯ ಶಾಸಕಿ ಕುಸುಮಾವತಿ ಶಿವಳ್ಳಿ, ತಹಸೀಲ್ದಾರ ಅಶೋಕ್ ಶಿಗ್ಗಾಂವಿ ಸೇರಿದಂತೆ ಅಧಿಕಾರಿಗಳ ವರ್ಗ ಪರಿಶೀಲನೆ ನಡೆಸಿ ಗುಹೆ ಸುತ್ತ 50 ಮೀಟರ್ ವಾಸಿಸದಂತೆ ತಿಳಿಸಿದ್ದಾರೆ. ಆದರೆ ಇಲ್ಲಿನ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಮಾತ್ರ ಮಾಡಿಲ್ಲ. ನಾಮಾಕವಾಸ್ಥೆಗೆ ಎಚ್ಚರಿಕೆ ಎಂಬ ಬಿಳಿಹಾಳೆಯ ಬೋರ್ಡ್ ಹಾಕಲಾಗಿದ್ದು, ಸ್ಥಳದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಅಥವಾ ಮನೆ ಬೀಳುವ ಹಂತದಲ್ಲಿರುವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲಾ. ಇದರಿಂದ ಜನ ಜಾನುವಾರು ಭಯದಿಂದ ಬೀದಿ ಬಯಲಲ್ಲೇ ಬದುಕು ನಡೆಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕಾಗಿದೆ.

ತಮ್ಮ ಮನೆ ಬಿಟ್ಟು ಟ್ರ್ಯಾಕ್ಟರ್ ಟೇಲರ್, ದನದ ಕೊಟ್ಟಿಗೆಯಲ್ಲಿ ಜೀವನ
ಒಂದು ಕಡೆಗೆ ಕುಸಿದಿರುವ ಪುರಾತನ ಗುಹೆ, ಮತ್ತೊಂದೆಡೆ ತಮ್ಮ ಮನೆ ಬಿಟ್ಟು ಟ್ರ್ಯಾಕ್ಟರ್ ಟೇಲರ್, ದನದ ಕೊಟ್ಟಿಗೆಯಲ್ಲಿ ಜೀವನ ನಡೆಸುತ್ತಿರುವ ಕುಟುಂಬಗಳು. ಈ ದೃಶ್ಯಗಳು ಕಂಡುಬಂದಿದೆ.

ಗುಹೆಯನ್ನು ರಾಜ ಮಹಾರಾಜರು ಯುದ್ಧದ ಸಮಯದಲ್ಲಿ ತಮ್ಮ ರಕ್ಷಣೆಗಾಗಿ ಬಳಸಿಕೊಳ್ಳುತ್ತಿದ್ದರಂತೆ. ಅಲ್ಲದೇ ಗುಹೆಯಲ್ಲಿ ಗವಿಸಿದ್ದೇಶ್ವರ ದೇಗುಲ ಕೂಡಾ ಇತ್ತಂತೆ. ಆದರೆ ಇಂತಹ ಇತಿಹಾಸ ಪ್ರಸಿದ್ಧ ಗುಹೆ ಕಳೆದ ಕೆಲವು ದಿನಗಳ ಹಿಂದೆ ಕುಸಿಯುತ್ತಿದ್ದು, ಪರಿಣಾಮವಾಗಿ ಪುರಾತನ ಗುಹೆ ಸಂಪೂರ್ಣ ಮುಚ್ಚಿ ಹೋಗುವ ಹಂತದಲ್ಲಿದೆ. ಇನ್ನು ಗುಹೆ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಗುಹೆಯ ಅಕ್ಕಪಕ್ಕದ ಮರಗಳು ನೆಲಕ್ಕೆ ಬಿದ್ದಿವೆ. ಸ್ಥಳೀಯರ ಮನೆಗಳಿಗೆ ದಕ್ಕೆ ಉಂಟಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications