ಮಂಡ್ಯದಲ್ಲಿ ನಿಖಿಲ್ ವಿರುದ್ದ ರೇವಣ್ಣ 'ನಿಂಬೆಹಣ್ಣು' ಪ್ರಯೋಗ? ಸಿ ಟಿ ರವಿ
Recommended Video
ಹುಬ್ಬಳ್ಳಿ, ಮೇ 17: ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತ ನಂತರ, ತಾನು ಪ್ರಯೋಗಿಸಿದ ನಿಂಬೆಹಣ್ಣು ವರ್ಕೌಟ್ ಆಯಿತು ಎನ್ನುವ ಮಾತನ್ನು ಎಚ್ ಡಿ ರೇವಣ್ಣ ಹೇಳಿದ್ದರು. ಈ ಬಾರಿಯೂ ಅವರು ಅದನ್ನೇ ಮಾಡಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.
ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಚಿಕ್ಕಣ್ಣಗೌಡರ್ ಪರ ಮತಯಾಚಿಸುತ್ತಾ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಸಿ, ಹಾಸನದಲ್ಲಿ ತಮ್ಮ ಮಗ ಪ್ರಜ್ವಲ್ ಗೆಲ್ಲಿಸಲು, ರೇವಣ್ಣ ನಿಂಬೆಹಣ್ಣು ಪ್ರಯೋಗಿಸಿರಬಹುದು ಎಂದು ಸಿ ಟಿ ರವಿ ವ್ಯಂಗ್ಯವಾಡಿದ್ದಾರೆ.
ಕೈಯಲ್ಲಿ, ಜೇಬಿನಲ್ಲಿ ನಿಂಬೆಹಣ್ಣು ಇಲ್ಲದೇ ರೇವಣ್ಣ ಮನೆಯಿಂದ ಹೊರಗೆ ಕಾಲಿಡುವುದಿಲ್ಲ, ಎಲ್ಲದಕ್ಕೂ ನಿಂಬೆಹಣ್ಣನ್ನೇ ನಂಬುವ ಅವರು, ಹಾಸನ ಮತ್ತು ಮಂಡ್ಯದಲ್ಲಿ 'ನಿಂಬೆಹಣ್ಣು ಪ್ರಯೋಗ' ಯಾಕೆ ಮಾಡಿರಬಾರದು ಎಂದು ಸಿ ಟಿ ರವಿ ಲೇವಡಿ ಮಾಡಿದ್ದಾರೆ.

ಅದರ್ಗುಂಚಿಯಲ್ಲಿ ಯಡಿಯೂರಪ್ಪ, ಗೋವಿಂದ ಕಾರಜೋಳ ಜೊತೆ ರೋಡ್ ಶೋ ಮೂಲಕ ಮತಯಾಚನೆ ಮಾಡುತ್ತಾ, ಅಪಮೈತ್ರಿ ಸರಕಾರದ ವೈಫಲ್ಯತೆಯನ್ನು ಜನತೆ ನೋಡಿದ್ದಾರೆ. ಮತಬಾಂಧವರು ಬಿಜೆಪಿಗೆ ಮತ ನೀಡಿ ನಮ್ಮ ಸರಕಾರ ಬರುವಂತೆ ಆಶೀರ್ವದಿಸಬೇಕೆಂದು ಮನವಿ ಮಾಡಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ. ನಾವೇನೂ ಸರಕಾರವನ್ನು ಬೀಳಿಸಲು ಹೋಗುವುದಿಲ್ಲ, ಅವರವರೇ ಕಿತ್ತಾಡಿಕೊಂಡು, ತಮ್ಮದೇ ಸರಕಾರಕ್ಕೆ ಖೆಡ್ಡಾ ತೋಡಲಿದ್ದಾರೆಂದು ಸಿ ಟಿ ರವಿ ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ವಿರುದ್ದ ಏಕವಚನದಲ್ಲಿ, ಅಸಂಬದ್ದವಾಗಿ ಮಾತನಾಡುತ್ತಾ ಸಿದ್ದರಾಮಯ್ಯ ತಮ್ಮ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆಂದು ಸಿ ಟಿ ರವಿ ಹೇಳಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications