ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

|
Google Oneindia Kannada News

ಹುಬ್ಬಳ್ಳಿ, ಜುಲೈ 7: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಹಾಡ ಹಗಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಉದ್ಯೋಗಿಗಳಿಂದಲೆ ಹತ್ಯೆಗೀಡಾಗಿದ್ದ ಗುರೂಜಿ ಅಂತ್ಯಕ್ರಿಯೆ ಬುಧವಾರ ಸಂಜೆ ಹುಬ್ಬಳ್ಳಿಯಲ್ಲಿ, ಅವರ ಜಮೀನಿನಲ್ಲಿ ನೆರವೇರಲಿದೆ.

Recommended Video

Chandrashekar Gurujiಯ ಪ್ರೀತಿಯ ಪ್ರಿನ್ಸ್ ಕಂಬನಿ ಮಿಡಿದಿದ್ದು ಹೀಗೆ | *Karnataka | OneIndia Kannada

ಕುಟುಂಬಸ್ಥರು ಈ ಬಗ್ಗೆ ಮಾಹಿತಿ ತಿಳಿಸಿದ್ದು, ಬುಧವಾರ ಬೆಳಗ್ಗೆ ಹುಬ್ಬಳ್ಳಿಯ ಸುಳ್ಳಾ ರಸ್ತೆಯಲ್ಲಿರುವ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯುವ ಜಾಗವನ್ನು ಸ್ವಚ್ಛ ಮಾಡಲಾಗಿದೆ. ಅಂತ್ಯಕ್ರಿಯೆ ಸಂಬಂಧಪಟ್ಟ ಸಿದ್ಧತೆ, ವಿಧಿವಿಧಾನಗಳಿಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ತವರೂರು ಬಾಗಲಕೋಟೆಯೊಂದಿಗೆ ಚಂದ್ರಶೇಖರ್ ಗುರೂಜಿ ನಂಟುತವರೂರು ಬಾಗಲಕೋಟೆಯೊಂದಿಗೆ ಚಂದ್ರಶೇಖರ್ ಗುರೂಜಿ ನಂಟು

ಚಂದ್ರಶೇಖರ್‌ ಗುರೂಜಿ ಅಪಾರ ಅನುಯಾಯಿಗಳನ್ನು ಹೊಂದಿರುವುದರಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸದ್ಯ ಚಂದ್ರಶೇಖರ್ ಗುರೂಜಿಯವರ ಶವವಿರುವ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯ ಶವಾಗಾರಕ್ಕೆ ಸಂಬಂಧಿಕರು, ಅನುಯಾಯಿಗಳು ಆಗಮಿಸುತ್ತಿದ್ದಾರೆ.

Chandrashekhar Guruji Cremation Will Be Held in Hubli on Wednesday

ಇನ್ನು ಮಂಗಳವಾರ ಆರೋಪಿಗಳು ಗುರೂಜಿಯನ್ನು ಮಾತನಾಡಲು ಕರೆಸಿ ಹೋಟೆಲ್‌ನಲ್ಲಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದರು. ಮಾಜಿ ಉದ್ಯೋಗಿಗಳಾದ ಮಹಾಂತೇಶ್ ಮತ್ತು ಮಂಜುನಾಥ್‌ ಎಂಬ ಈ ಕೃತ್ಯ ಎಸೆಗಿದ್ದರು. ಹತ್ಯೆ ನಡೆದ 4 ಗಂಟೆಗಳಲ್ಲಿಯೇ ಆರೋಪಿಗಳನ್ನು ಬಂಧಿಸಲಾಗಿತ್ತು.

Breaking: ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಹಂತಕರ ಬಂಧನBreaking: ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಹಂತಕರ ಬಂಧನ

ಆರೋಪಿಗಳ ಬಂಧನ; ಘಟನೆ ನಡೆದ ನಾಲ್ಕು ತಾಸುಗಳಲ್ಲೇ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಹತ್ಯೆಯಾದ ತಕ್ಷಣ ಆರೋಪಿಗಳಿಬ್ಬರ ಚಹರೆಯನ್ನು ಅಕ್ಕಪಕ್ಕದ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿತ್ತು. ಆರೋಪಿಗಳು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ತಪ್ಪಿಸಿಕೊಂಡು ಹೋಗುತ್ತಿರುವ ಮಾಹಿತಿ ತಿಳಿದ ಪೊಲೀಸರು ಜೆಸಿಬಿಯಿಂದ ಕಾರನ್ನು ಅಡ್ಡಗಟ್ಟಿ ರೋಚಕ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.

ಈಗಾಗಲೇ ಆರೋಪಿ ಮಹಂತೇಶ್ ಪತ್ನಿ ವನಜಾರನ್ನು ವಿಚಾರಣೆ ನಡೆಸಿ ಕಳುಹಿಸಲಾಗಿದೆ. ಬಂಧಿತ ಆರೋಪಿಗಳ ವಿಚಾರಣೆ ಬಾಕಿಯಿದೆ. ಸದ್ಯಕ್ಕೆ ಆಸ್ತಿ ವಿಚಾರವಾಗಿ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವು ವ್ಯಕ್ತಿಗಳ ವಿಚಾರಣೆ ನಡೆಸಬೇಕಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಮಾಹಿತಿ ನೀಡಿದ್ದಾರೆ.

English summary
Sarala vastu fame Chandrashekhar Guruji cremation will be held in Hubballi on Wednesday, June 6th. Guruji was killed by his ex employees in hotel at Hubballi, know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X