ಚಂದ್ರಯಾನ-3 ಯಶಸ್ವಿಗೆ ವಿಭಿನ್ನ ರೀತಿಯಲ್ಲಿ ಹಾರೈಸಿದ ಹುಬ್ಬಳ್ಳಿ ಕಲಾವಿದ
ಹುಬ್ಬಳ್ಳಿ, ಆಗಸ್ಟ್, 23: ಭಾರತದ ಐತಿಹಾಸಿಕ ಕ್ಷಣ ಚಂದ್ರಯಾನ-3 ಯಶಸ್ಸಿಗೆ ಇನ್ನೊಂದೇ ಮೆಟ್ಟಿಲಷ್ಟೇ ಬಾಕಿಯಿದ್ದು, ಇಸ್ರೋದ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಂದು ಸಂಜೆ ಲ್ಯಾಂಡ್ ಆಗಲಿದೆ. ಇದಕ್ಕಾಗಿ ಇಡೀ ವಿಶ್ವವೇ ಅದರ ಮೇಲೆ ದೃಷ್ಟಿ ನೆಟ್ಟಿದೆ. ಅಲ್ಲದೆ ಚಂದ್ರಯಾನ-3 ಯಶಸ್ವಿಯಾಗಲೆಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಹಾಗೆಯೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಲಾವಿದರೊಬ್ಬರು ರಂಗೋಲಿಯಲ್ಲಿ ಚಂದ್ರಯಾನ -3ರ ವಿಕ್ರಮ್ ಲ್ಯಾಂಡರ್ ಅನ್ನು ತಯಾರು ಮಾಡಿ ಗಮನ ಸೆಳೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಕಲಾವಿದರೊಬ್ಬರು ಮುಂಜಾಗ್ರತಾ ಕ್ರಮ, ಮಾಹಿತಿ ತಂತ್ರಜ್ಞಾನ ಹಾಗೂ ಉಡಾವಣೆ ಪ್ರಕ್ರಿಯೆಯನ್ನು ರಂಗೋಲಿಯಲ್ಲಿ ತಮ್ಮದೇ ಶೈಲಿಯಲ್ಲಿ ಬಿಡಿಸುವ ಮೂಲಕ ಶುಭಹಾರೈಸಿದ್ದಾರೆ. ನಗರದ ಶಾಂತಿನಿಕೇತನ ಬಡಾವಣೆ ನಿವಾಸಿ ಕಲಾವಿದ ದಿನೇಶ್ ಚಿಲ್ಲಾಳ ಅವರ ರಂಗೋಲಿ ಕಲೆಯಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ನ ಪ್ರತಿಕೃತಿ ಅರಳಿದೆ.

ನಾಲ್ಕು ವರ್ಷಗಳ ಹಿಂದೆ 2019ರಲ್ಲಿ ಚಂದ್ರಯಾನ-2 ರ ಉಡಾವಣೆ ವಿಫಲವಾದ ನಂತರ ಚಂದ್ರಯಾನ-3 ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯಲು ಕ್ಷಣಗಣೆ ಆರಂಭವಾಗಿದೆ. 615 ಕೋಟಿ ರೂಪಾಯಿ ಬಜೆಟ್ನೊಂದಿಗೆ ಮಹತ್ವಾಕಾಂಕ್ಷೆಯ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡ್ ಆಗಲಿದೆ.
ನಂತರ ರೋವರ್ನ ನಿಯೋಜನೆಯು ವಿವಿಧ ಪ್ರಯೋಗಗಳನ್ನು ನಡೆಸುತ್ತದೆ. ಮತ್ತು ಚಂದ್ರನ ಗುಣಲಕ್ಷಣಗಳಾದ ಭೂಕಂಪನ, ಪ್ಲಾಸ್ಮಾ ಪರಿಸರ ಮತ್ತು ಸಂಯೋಜನೆಯನ್ನು ಅಧ್ಯಯನ ಮಾಡಿರುವ, ಹಾಗೂ ಚಂದ್ರಯಾನ-3 ಮಿಷನ್ಗಾಗಿ ಇಸ್ರೋ ಮೂರು ಮುಖ್ಯ ಉದ್ದೇಶಗಳಾದ ಚಂದ್ರನ ಮೇಲೆ ಸುರಕ್ಷಿತ ಮತ್ತು ಸೌಮ್ಯವಾದ ಲ್ಯಾಂಡಿಂಗ್ ಅನ್ನು ಯಶಸ್ವಿಯಾಗಿ ಸಾಧಿಸುವುದು, ಚಂದ್ರನ ಮೇಲ್ಮೈಯಲ್ಲಿ ಚಲಿಸುವ ರೋವರ್ ಸಾಮರ್ಥ್ಯವನ್ನು ಪ್ರದರ್ಶಿಸುವುದು, ನೇರವಾಗಿ ವೈಜ್ಞಾನಿಕ ವೀಕ್ಷಣೆಗಳನ್ನು ನಡೆಸುವುದು ಮುಂತಾದ ಮಾಹಿತಿಯನ್ನು ರಂಗೋಲಿ ಮೂಲಕ ಬಿಂಬಿಸಿದ್ದಾರೆ.
ಹೀಗೆ ಕಲಾವಿದ ದಿನೇಶ್ ಚಿಲ್ಲಾಳ ಅವರು ಚಂದ್ರಯಾನ-5 ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications