Prakash Raj: ಚಂದ್ರಯಾನ-3 ಕುರಿತು ಅಪಹಾಸ್ಯ: ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ನಟ ಪ್ರಕಾಶ್ ರೈ ವಿರುದ್ಧ ದೂರು
ಬಾಗಲಕೋಟೆ, ಆಗಸ್ಟ್, 23: ಚಲನಚಿತ್ರ ನಟ ಪ್ರಕಾಶರಾಜ ಅಲಿಯಾಸ್ ಪ್ರಕಾಶ ರೈ ಎಂಬ ಅರೆಹುಚ್ಚ ತನ್ನ ಮಾನಸಿಕ ಸ್ಥಿತಿಮಿತಿಯನ್ನು ಕಳೆದುಕೊಂಡವರ ರೀತಿ ತನ್ನ ಅಧಿಕೃತ ಟೀಟ್ವರ್ ಐಡಿಯಲ್ಲಿ ನಮ್ಮ ಹೆಮ್ಮೆಯ ವಿಜ್ಞಾನಿಗಳ ವ್ಯಂಗ್ಯ ಚಿತ್ರ ಪೋಸ್ಟ್ ಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಸ್ವದೇಶಿ ಚಿಂತಕರಾದ ಶಿವಾನಂದ ಗಾಯಕವಾಡ ಅವರು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪೋಲಿಸ್ ಠಾಣೆಯ ಪಿಎಸ್ಐ ಅವರಿಗೆ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಪತ್ರ ಸಲ್ಲಿಸಿದರು. ಇದೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 14ರಂದು ನಮ್ಮ ದೇಶವೇ ಹೆಮ್ಮೆ ಪಡುವಂತಹ ಕೆಲಸವನ್ನು ನಮ್ಮ ಐಎಸ್ಆರ್ಡಿ ವಿಜ್ಞಾನಿಗಳು ಚಂದ್ರಯಾನ-3 ಉಪಗ್ರಹ ಉಡಾವಣೆ ಮಾಡುವ ಮೂಲಕ ಭಾರತದ ಶಕ್ತಿಯನ್ನು ಇಮ್ಮಡಿಗೊಳ್ಳಿಸಿದ್ದರು.

ಇನ್ನೇನು ಅದು ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿದು ಜಗತ್ತು ಭಾರತದ ವಿಜ್ಞಾನಿಗಳ ಹೊಗಳುವ ಈ ಸಂದರ್ಭದಲ್ಲಿ ಅವರಿಗೆ ಅಪಮಾನ ಆಗುವ ರೀತಿ, ಅಸಹ್ಯ ಅನಿಸುವ ರೀತಿಯಲ್ಲಿ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡುವುದರ ಮೂಲಕ ಪ್ರಕಾಶ್ ರೈ ಅವರು ವಿಕೃತಿ ಮೆರೆದಿದ್ದಾರೆ. ತಕ್ಷಣವೇ ಇಂತಹವನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಜು ರಾವಳ, ನಾಗರಾಜ ತಳವಾರ, ರೋಹಿತ ಮತ್ತು ಆಕಾಶ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
-
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
ಕರ್ನಾಟಕದ 4 ರೈಲು ನಿಲ್ದಾಣ ಸೇರಿ 76 ಕಡೆ ಪ್ರಯಾಣಿಕರ ನಿಲುಗಡೆ ತಾಣ ನಿರ್ಮಾಣ, ಏನಿದರ ಪ್ರಯೋಜನ? -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ












Click it and Unblock the Notifications