ಹು-ಧಾ ಮೆಯರ್ ಗೆ ಸಿಎಂ ಅವಮಾನ: ಪ್ರತಿಭಟನೆ ಎಚ್ಚರಿಕೆ
ಹುಬ್ಬಳ್ಳಿ, ಜೂನ್ 10: 'ಹುಬ್ಬಳ್ಳಿ-ಧಾರವಾಡ ಮಹಾನಗರದ ಪ್ರಥಮ ಪ್ರಜೆಯಾದ ನನ್ನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವಮಾನಿಸಿದ್ದಾರೆ' ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೆಯರ್ ಡಿ.ಕೆ.ಚೌವ್ಹಾಣ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಜೂನ್ 4 ರಂದು ಮುಖ್ಯಮಂತ್ರಿಗಳು ಹುಬ್ಬಳ್ಳಿ ಮೂಲಕ ಗದಗ ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು. ನಗರಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ಸ್ವಾಗತಿಸುವುದು ಮೆಯರ್ ಆದ ನನ್ನ ಕರ್ತವ್ಯ. ಆದ್ದರಿಂದ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಗಳನ್ನು ಸ್ವಾಗತಿಸುವ ಸಂದರ್ಭದಲ್ಲಿ ನನ್ನನ್ನು ಅವಮಾನ ಮಾಡಿದ್ದಾರೆ.

ನಾನು ಬಿಜೆಪಿಗೆ ಸೇರಿರಬಹುದು ಆದರೆ, ಸಂವಿಧಾನಿಕ ಹುದ್ದೆಯಲ್ಲಿರುವವರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಸೌಜನ್ಯವನ್ನು ಸಿದ್ದರಾಮಯ್ಯ ತೋರದಿರುವುದು ತೀವ್ರ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಮತ್ತೆ ಹುಬ್ಬಳ್ಳಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ತೆರಳುತ್ತೇನೆ. ಅವರೇನಾದರೂ ಮತ್ತೆ ಅವಮಾನ ಮಾಡಿದರೆ ಅಲ್ಲಿಯೇ ಪ್ರತಿಭಟನೆ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
110 ಕೋಟಿ ಬಿಡುಗಡೆಗೆ ಆಗ್ರಹ
'ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬರಬೇಕಾದ ಕಾನೂನು ಬದ್ಧ ಅನುದಾನ ನೀಡಲು ಮುಖ್ಯಮಂತ್ರಿಗಳು ವಿನಾಕಾರಣ ಹಿಂದೇಟು ಹಾಕುತ್ತಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸರ್ಕಾರ ಬಾಕಿ ಉಳಿಸಿಕೊಂಡಿರುವ ಪಾಲಿಕೆ ನಿವೃತ್ತ ನೌಕರರ ಪಿಂಚಣಿ ವೇತನ ಹಾಗೂ ಬಾಕಿ ಉಳಿಸಿಕೊಂಡಿರುವ 110 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸುವಂತೆ ಹಲವು ಬಾರಿ ಮನವಿ ಮಾಡಿಕೊಂಡಿದ್ದೇನೆ ಹೊರತು ಅವರ ಬಳಿ ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿಲ್ಲ. ಹಾಗೀದ್ದರೂ ಮೆಯರ್ ಹುದ್ದೆಗಾದರೂ ಗೌರವದಿಂದ ನಡೆದುಕೊಳ್ಳಬೇಕಿತ್ತು. ಆದರೆ ಅದನ್ನು ಬಿಟ್ಟು ಪಕ್ಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರಿಗೆ ನಿಯೋಗ
ಮಹಾನಗರ ಪಾಲಿಕೆಗೆ ಬರಬೇಕಾದ ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಬಳಿ ನಿಯೋಗ ಕೊಂಡೊಯ್ಯಲು ಕಳೆದ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಅವರ ಬಳಿ ನಿಯೋಗ ತೆಗೆದುಕೊಂಡು ಹೋಗಲಾಗುವುದು. ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸಿದರೆ ಸರಿ ಇಲ್ಲವಾದರೆ ವಿಧಾನಸೌಧದ ಎದುರೇ ಪ್ರತಿಭಟನೆ ನಡೆಸಲಾಗುವುದು ಎಂದು ಚೌವ್ಹಾಣ್ ಎಚ್ಚರಿಕೆ ನೀಡಿದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications