ಧಾರವಾಡದಲ್ಲಿ ಚಿತ್ರಸಂತೆ: ಕಲಾವಿದರಿಗೆ ಅವಳಿ ನಗರದ ಕಲಾಸಕ್ತರ ಶಬ್ಬಾಶ್ ಗಿರಿ
ಬಣ್ಣಗಳ ಚಿತ್ತಾರ, ಕಲಾವಿದನ ಕಲ್ಪನೆಗೆ ಬಣ್ಣದ ರಂಗು, ಕುಂಚದಲ್ಲಿ ಅರಳಿದ ಇತಿಹಾಸ, ಸಂಸ್ಕೃತಿ, ಗ್ರಾಮೀಣ ಸೊಗಡು, ಪ್ರಕೃತಿ ಸೊಗಡಿನ ವೈಭವವನ್ನು ಕಣ್ತುಂಬಿಕೊಳ್ಳಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣ ಸಮೀಪದ ರಸ್ತೆಯಲ್ಲಿ ಜನಸಾಗರ ಸೇರಿತ್ತು.
ಹುಬ್ಬಳ್ಳಿ, ಜನವರಿ 30: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ದಿನವೂ ಜನಜಂಗುಳಿಯಿಂದ, ಗದ್ದಲ ಗಲಾಟೆಯಿಂದ ಕೂಡಿರುತ್ತಿದ್ದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಇಂದು ಸಾಕಷ್ಟು ವೈವಿಧ್ಯಮಯ ಕಲೆಯ ಅನಾವರಣಕ್ಕೆ ಸಾಕ್ಷಿಯಾಯಿತು.
ಬಣ್ಣಗಳ ಚಿತ್ತಾರ, ಕಲಾವಿದನ ಕಲ್ಪನೆಗೆ ಬಣ್ಣದ ರಂಗು, ಕುಂಚದಲ್ಲಿ ಅರಳಿದ ಇತಿಹಾಸ, ಸಂಸ್ಕೃತಿ, ಗ್ರಾಮೀಣ ಸೊಗಡು, ಪ್ರಕೃತಿ ಸೊಗಡಿನ ವೈಭವವನ್ನು ಕಣ್ತುಂಬಿಕೊಳ್ಳಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣ ಸಮೀಪದ ರಸ್ತೆಯಲ್ಲಿ ಜನಸಾಗರವೇ ನೆರೆದಿತ್ತು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆವರಣಕ್ಕೆ ಹೊಂದಿಕೊಂಡಿರುವ ರಸ್ತೆಯ ಪಕ್ಕದಲ್ಲಿ ಡಾ. ಮಿಣಜಗಿ ಕಲಾ ಆರ್ಟ್ ಗ್ಯಾಲರಿ ವತಿಯಿಂದ ಚಿತ್ರಸಂತೆಯನ್ನು ಆಯೋಜಿಸಲಾಗಿತ್ತು. ಅನೇಕ ಕಲಾವಿದರ ಕುಂಚದಲ್ಲಿ ಅರಳಿದ ಚಿತ್ರಕಲೆಗಳು ಧಾರವಾಡ ಜಿಲ್ಲೆಯ ಕಲಾಸಕ್ತರ ಮನತಣಿಸಿದವು.

ಇನ್ನು ದೇಶದ ವಿವಿಧ ಸಂಸ್ಕೃತಿ ಬಿಂಬಿಸುವ ಕಲಾಕೃತಿಗಳು ಚಿತ್ರಸಂತೆಯ ಸೊಬಗನ್ನು ಇನ್ನೂ ಹೆಚ್ಚಿಸಿವೆ. ಪರಿಸರ, ವನ್ಯಜೀವಿಗಳು, ದೇವಸ್ಥಾನ, ಹೂವು ಕಟ್ಟುವ ಮಹಿಳೆ, ಗ್ರಾಮೀಣ ಸೊಗಡು, ದಿವಂಗತ ಪುನೀತ್ ರಾಜ್ಕುಮಾರ್ ಹಾಗೂ ರಾಷ್ಟ್ರಪಿತ ಮಹಾತ್ಮಗಾಂಧಿ, ಡಾ.ಅಂಬೇಡ್ಕರ್, ಬುದ್ಧ-ಬಸವ, ವಿಶ್ವ ಪ್ರಸಿದ್ಧ ನಾಯಕರು, ರೂಪದರ್ಶಿಯರು, ಕೃಷಿಕರ ಬದುಕು, ದೇವರು, ಕಾಲುದಾರಿ, ಸೂರ್ಯಾಸ್ತ ಹಾಗೂ ಸೂರ್ಯೋದಯ, ನದಿಗಳ ಹರಿವು, ನೀರು ಕುಡಿಯುತ್ತಿರುವ ಜಿಂಕೆ, ದೈವ ಕೋಲ, ಕಾಡು ಹಣ್ಣುಗಳು, ಎಳನೀರಿನ ವ್ಯಾಪಾರಿ, ಪಾನಿಪುರಿ ವ್ಯಾಪಾರಿ, ಹಳೇ ನಗರದ ಸೊಬಗು, ಬೆಟ್ಟಗಳ ಸಾಲು, ಗ್ರಾಮೀಣ ಮನೆ ಹೀಗೆ ಹಲವು ವಿಷಯಗಳು ಕಲಾವಿದನ ಕುಂಚದಲ್ಲಿ ಚಿತ್ರದ ರೂಪ ಪಡೆದಿದ್ದವು.
ಮಹಿಳೆಯರ ಭಾವ, ಜಾನಪದ ಸಂಸ್ಕೃತಿ ಹಾಗೂ ಶಿಲ್ಪಕಲೆಗಳ ಚಿತ್ರ ಸೇರಿದಂತೆ ಹತ್ತಾರು ವಿಷಯಗಳು ಕಲಾವಿದನ ಕುಂಚದಲ್ಲಿ ಅರಳಿದ್ದು, ನೋಡುಗರ ಗಮನ ಸೆಳೆದವು.

ಡಾ. ಮಿಣಜಗಿ ಕಲಾ ಆರ್ಟ್ ಗ್ಯಾಲರಿ ವತಿಯಿಂದ ಆಯೋಜಿಸಲಾಗಿದ್ದ ಚಿತ್ರಸಂತೆಯಲ್ಲಿ 500ಕ್ಕೂ ಹೆಚ್ಚು ಕಲಾ ಕೃತಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅನೇಕ ಕಲಾವಿದರು ಚಿತ್ರಸಂತೆಯಲ್ಲಿ ತಮ್ಮ ಚಿತ್ರ ಪ್ರದರ್ಶನ ಹಾಗೂ ಮಾರಾಟ ನಡೆಸಿದರು. ಜಲವರ್ಣ, ತೈಲವರ್ಣ, ಮರಳಿನ ಚಿತ್ರಕಲೆ, ಆ್ಯಕ್ರಿಲಿಕ್ ಪೇಂಟಿಂಗ್, ಮಧುಬನಿ, ಡಿಜಿಟಲ್ ಕಲೆ, ರಾಜಸ್ಥಾನಿ ಶೈಲಿಯ ಕಲಾಕೃತಿಗಳು ಎಲ್ಲರ ಗಮನ ಸೆಳೆದವು. ಒಂದಕ್ಕಿಂತ ಒಂದು ಕಲಾಕೃತಿಗಳು ನೋಡುಗರ ಆಲೋಚನೆಯನ್ನು ಹೆಚ್ಚಿಸಿದವು. ಇದರ ಜೊತೆಗೆ ಚಿತ್ರಸಂತೆಯಲ್ಲಿ ವಿಭಿನ್ನ ಕರಕುಶಲ ವಸ್ತುಗಳನ್ನು ಕೂಡ ಪ್ರದರ್ಶನಕ್ಕೆ ಇಡಲಾಗಿತ್ತು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications