ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿರುದ್ಧ ಪೌರ ಕಾರ್ವಿುಕರ ಪ್ರತಿಭಟನೆ: ಸಿಎಂಗೆ ರಕ್ತದಲ್ಲಿ ಪತ್ರ
ಹುಬ್ಬಳ್ಳಿ, ಅಕ್ಟೋಬರ್ 03: ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ.
ಅನಿರ್ದಿಷ್ಟ ಅವಧಿಯ ಪ್ರತಿಭಟನೆಯನ್ನುಧಾರವಾಡ ಜಿಲ್ಲಾ ಎಸ್ಸಿ ಎಸ್ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ ನೇತೃತ್ವದಲ್ಲಿ ಗುತ್ತಿಗೆ ಪೌರ ಕಾರ್ವಿುಕರು ಪ್ರತಿಭಟನೆ ನಿರತರಾಗಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದರು.

ರಾಜ್ಯ ಸರ್ಕಾರ 2017ರಲ್ಲಿಯೇ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ, ನೇರ ನೇಮಕಾತಿ ಹಾಗೂ ನೇರ ವೇತನ ಪಾವತಿಸಲು ಆದೇಶ ಹೊರಡಿಸಿತ್ತು. ಆದರೆ, ಹು-ಧಾ ಮಹಾನಗರ ಪಾಲಿಕೆಯಲ್ಲಿ ಇದು ಜಾರಿಗೆ ಬಂದಿಲ್ಲ. ಪಾಲಿಕೆಯ 799 ಗುತ್ತಿಗೆ ಪೌರ ಕಾರ್ವಿುಕರಿಗೆ ನೇರ ವೇತನ ಪಾವತಿಸುವಂತೆ ಹಾಗೂ ಖಾಲಿ ಉಳಿದಿರುವ 340 ಪೌರ ಕಾರ್ವಿುಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವಂತೆ ಪೌರ ಕಾರ್ಮಿಕರು ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ರದ್ದುಪಡಿಸಯವುದು ಹಾಗೂ ಇತರ ಬೇಡಿಕೆಗಳನ್ನು ಪೂರೈಸಲು ಆಗ್ರಹಿಸಿ ಅಯೋರಾತ್ರಿಯಿಂದ ಮುಂದುವರಿಸಿದ್ದಾರೆ. ಸುಮಾರು 300 ಕಾರ್ಮಿಕರು ರಕ್ತದಲ್ಲಿ ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಧಾರವಾಡ ಜಿಲ್ಲಾ ಎಸ್ಸಿ ಎಸ್ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಗುತ್ತಿಗೆ ಪೌರ ಧರಣೆ ನಡೆಸುತಿದ್ದು, ರಾಜ್ಯ ಸರ್ಕಾರ 2017ರಲ್ಲಿಯೇ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ, ನೇರ ನೇಮಕಾತಿ ಹಾಗೂ ನೇರ ವೇತನ ಪಾವತಿಸಲು ಆದೇಶ ಹೊರಡಿಸಿತ್ತು. ಆದರೆ, ಹು-ಧಾ ಮಹಾನಗರ ಪಾಲಿಕೆಯಲ್ಲಿ ಇದು ಜಾರಿಗೆ ಬಂದಿಲ್ಲ. ಪಾಲಿಕೆಯ 799 ಗುತ್ತಿಗೆ ಪೌರ ಕಾರ್ವಿುಕರಿಗೆ ನೇರ ವೇತನ ಪಾವತಿಸುವಂತೆ ಹಾಗೂ ಖಾಲಿ ಉಳಿದಿರುವ 340 ಪೌರ ಕಾರ್ವಿುಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವಂತೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಬೇಕೆಂದು ವಿಜಯ ಗುಟ್ರಾಳ ಆಗ್ರಹಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications