'ಕುಠಾರಸ್ವಾಮಿ' ಎಂದ ಚಂಪಾಗೆ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ
Recommended Video

ಹುಬ್ಬಳ್ಳಿ, ಜನವರಿ 05: ನಿನ್ನೆ ನಡೆದ ಧಾರವಾಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಯಲ್ಲಿ ಕುಮಾರಸ್ವಾಮಿ ಅವರು 'ಕುಠಾರಸ್ವಾಮಿ' ಎಂದ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ)ರ ವಿರುದ್ಧ ಕುಮಾರಸ್ವಾಮಿ ಇಂದು ಹರಿಹಾಯ್ದಿದ್ದಾರೆ.
ಇಂಗ್ಲಿಷ್ ಶಾಲೆಗಳ ಆರಂಭದ ವಿಷಯದಲ್ಲಿ ಚಂಪಾ ಅವರು ತಮ್ಮ ಮಿತಿ ದಾಟಿ ಮಾತನಾಡಬಾರದು ಎಂದು ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ್ದಾರೆ.
ಅಷ್ಟು ಮಾತನಾಡುವ ಚಂದ್ರಶೇಖರ ಪಾಟೀಲರ ಮೊಮ್ಮಕ್ಕಳು ಯಾವ ಮಾಧ್ಯಮದ ಶಾಲೆಗಳಲ್ಲಿ ಓದುತ್ತಿದ್ದಾರೆ ಎಂಬುದು ಗೊತ್ತಿದೆ ಎಂದು ಟಾಂಗ್ ನೀಡಿರುವ ಕುಮಾರಸ್ವಾಮಿ, ಅವರಿಗಿಂತ ಜೋರಾಗಿ ಮಾತನಾಡಬಲ್ಲೆ ಆದರೆ ಅವರ ಹಂತಕ್ಕೆ ನಾನ್ಯಾಕೆ ಇಳಿಯಲಿ ಎಂದರು.

ನಾಲ್ಕು ವರ್ಷಗಳಲ್ಲಿ 13 ಲಕ್ಷ ಕನ್ನಡ ಶಾಲೆ ವಿದ್ಯಾರ್ಥಿಗಳು ಖಾಸಗಿ ಶಾಲೆ ಸೇರಿದ್ದಾರೆ ಎಂದು ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಕಂಬಾರರು ಮಾತನಾಡಿ ಹೇಳಿದ್ದಾರೆ. ಆದರೆ ಹಾಗಾಗಲು ನಾನು ಕಾರಣವೇನು ಎಂದು ಸಮ್ಮೇಳನಾಧ್ಯಕ್ಷರ ಭಾಷಣದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಂದ್ರಶೇಖರ ಕಂಬಾರರು ಆಗಲೇ ಏಕೆ ಚರ್ಚೆ ಪ್ರಾರಂಭಿಸಲಿಲ್ಲ ಎಂದು ಗುಟುರು ಹಾಕಿರುವ ಕುಮಾರಸ್ವಾಮಿ, ಚಂಪಾ ಅವರು ಯಾರಿಗೂ ಪ್ರಮಾಣ ಪತ್ರಗಳು ನೀಡುವುದು ಬೇಡ, ಕನ್ನಡದ ಬಗ್ಗೆ ಕಾಳಜಿ ಇದ್ದರೆ ಪರಿಹಾರ ಸೂಚಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ನಿನ್ನೆ ಸಾಹಿತ್ಯ ಸಮ್ಮೇಳನ ಉದ್ಘಾಟನೆಯಲ್ಲಿ ಮಾತನಾಡಿದ ಚಂಪಾ ಅವರು, 'ಕುಮಾರಸ್ವಾಮಿ ಅವರು ಕನ್ನಡದ ಪಾಲಿಗೆ ಕುಠಾರಸ್ವಾಮಿ ಆಗುವುದು ಬೇಡ' ಎಂದಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications