ಹುಬ್ಬಳ್ಳಿ: ಬಸ್ದಿನಕ್ಕೆ ಚಾಲನೆ ನೀಡಿ ಬಸ್ಸಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ
ಹುಬ್ಬಳ್ಳಿ, ಜುಲೈ 20 : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಬಸ್ ದಿನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ) ನಗರದ ವಿಮಾನ ನಿಲ್ದಾಣದಲ್ಲಿ ಚಾಲನೆ ನೀಡಿದರು. ಬಳಿಕ ಹುಬ್ಬಳ್ಳಿ ನಗರ ಸಾರಿಗೆ ಡಿಪೋದ ಬಸ್ಸಿನಲ್ಲಿ ಧಾರವಾಡಕ್ಕೆ ಪ್ರಯಾಣ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಸಿ.ಎಸ್.ಶಿವಳ್ಳಿ, ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ ಮತ್ತಿತರರು ಸಾತ್ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಧ್ಯೆಸ್ಥಿಕೆಯೊಂದೆ ದಾರಿಯಾಗಿದ್ದು, ಈ ಕುರಿತು ಈಗಾಗಲೇ ಎರಡು ಪತ್ರ ಬರೆದಿದ್ದೇನೆ. ಆದರೂ ಅವರಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಿವಾದ ಬಗೆ ಹರಿಸಲು ರಾಜ್ಯ ಸರ್ಕಾರ ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡಿದೆ. ವಿವಾದವನ್ನು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳು ಗೋವಾ ಸರ್ಕಾರ ಮಾಡುತ್ತಿರುವ ಡರ್ಟಿ ಪಾಲಿಟಿಕ್ಸ್ ಎಂದು ಕಿಡಿ ಕಾರಿದರು.

ಪ್ರತ್ಯೇಕ ಧ್ವಜ ಸಮರ್ಥನೆ: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದಬೇಕು ಎಂಬ ಕಾರಣಕ್ಕೆ ಸಮಿತಿ ರಚಿಸಿರುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಕ್ಕೆ ಪ್ರತ್ಯೇಕ ಬಾವುಟ ಇರಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಇದರ ಸಾಧಕ ಬಾಧಕಗಳನ್ನು ಕುರಿತು ಚರ್ಚಿಸಲು ಸಮಿತಿ ರಚಿಸಲಾಗಿದೆ ಎಂದರು.
ಸಮಿತಿ ವರದಿ ನೀಡಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಮುಖ್ಯವಾಗಿ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಪ್ರತ್ಯೇಕ ಧ್ವಜಹೊಂದಬಾರದು
ಎಂದು ಎಲ್ಲಿಯೂ ಹೇಳಿಲ್ಲ.
ಪ್ರತ್ಯೇಕ ಧ್ವಜದಿಂದ ರಾಷ್ಟ್ರದ ಸಾರ್ವಭೌಮತ್ವ ಹಾಗೂ ಐಕ್ಯತೆಗೆ ಯಾವುದೇ ಧಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications