Get Updates
Get notified of breaking news, exclusive insights, and must-see stories!

MUDA: ಹಗರಣದ ಬಗ್ಗೆ ಚರ್ಚಿಸಲಾಗದೇ ಸಿಎಂ ಸಿದ್ದರಾಮಯ್ಯ ಪಲಾಯನ: ಶಾಸಕ

ಹುಬ್ಬಳ್ಳಿ, ಜುಲೈ 28: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ಮಾಡಿದ್ದೇವೆ ಎಂದು ಹೇಳಿದ್ದ ಸರ್ಕಾರ ನಾಯಕರಿಗೆ ಇದೀಗ ಮುಡಾ ಹಗರಣ, ವಾಲ್ಮಿಕಿ ಹಗರಣಗಳು ಮುಳುವಾಗಿ ಕಾಡುತ್ತಿವೆ. ಮುಡಾ ಹಗರಣವಂತೂ ನೇರ ಸಿಎಂ ಸಿದ್ದರಾಮಯ್ಯ ಅವರ ಸುತ್ತ ಸುತ್ತಿದೆ. ಇದೇ ವಿಚಾರ ಇತ್ತೀಚೆಗೆ ಅಂತ್ಯಗೊಂಡ ವಿಧಾನಮಂಡಲ ಅಧಿವೇಶನದಲ್ಲೂ ಭಾರೀ ಚರ್ಚೆ ಸೃಷ್ಟಿಸಿತ್ತು.

ಇದೇ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಡೆಯನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಟೀಕಿಸಿದ್ದಾರೆ.

CM Siddaramaiah Ran Away from Did not Discussing the Muda Scam MLA Mahesh Tenginakai

ನಲವತ್ತು ವರ್ಷದಿಂದ ಸಮಾಜವಾದ ಪ್ರತಿಪಾದಿಸುತ್ತ ಬಂದಿರುವ ಮುಖ್ಯಮಂತ್ರಿಗಳು ಮೊಟ್ಟ ಮೊದಲ ಬಾರಿಗೆ ಮುಡಾ ಹಗರಣದ ಕುರಿತು ಚರ್ಚೆಗೆ ಆಸ್ಪದ ಕೊಡದೆ ಪಲಾಯನ ಮಾಡಿರುವುದು ದುರ್ದೈವ' ಎಂದು ಶಾಸಕರು ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಗರಣದಲ್ಲಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲದಿದ್ದರೆ, ಶುದ್ಧರಾಗಿದ್ದರೆ ಚರ್ಚೆಗೆ ಆಸ್ಪದ ನೀಡಬೇಕಿತ್ತು. ಅವರಲ್ಲಿ ಗೊಂದಲ ಕಾಡುತ್ತಿರುವುದರಿಂದ, ಅಧಿವೇಶನವನ್ನು ಮೊಟುಕುಗೊಳಿಸಿದ್ದಾರೆ' ಎಂದು ಅವರು ಆರೋಪಿಸಿದರು.

ಹಗರಣದಲ್ಲಿ ಸರ್ಕಾರದ ಪಾತ್ರವಿದೆ: ಶಾಸಕ

ಮುಡಾ ಹಗರಣದ ಕುರಿತು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಯಾವ ರಾಜಕೀಯನ್ನೂ ಮಾಡುತ್ತಿಲ್ಲ. ರಾಜ್ಯದ ಸಾಕಷ್ಟು ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕಿತ್ತು. ವಾಲ್ಮೀಕಿ ನಿಗಮ ಮಂಡಳಿಯ ಹಗರಣದ ಬಗ್ಗೆಯೂ ಮಾತನಾಡಲು ಬಿಡುತ್ತಿಲ್ಲ. ಈ ಹಗರಣಗಳಲ್ಲಿ ಸರ್ಕಾರದ ಪಾತ್ರವಿದೆ ಎಂದು ಎಲ್ಲರಿಗೂ ತಿಳಿದಿದೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಹೆಸರಿಡುವ ಮೂಲಕ, ವಿಷಯಾಂತರ ಮಾಡುತ್ತಿದ್ದಾರೆ' ಎಂದು ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯು ರಾಜ್ಯ ಸರ್ಕಾರ ಬೀಳಿಸುವ ಯತ್ನ ಮಾಡುತ್ತಿಲ್ಲ. ವಿರೋಧ ಪಕ್ಷವಾಗಿ ಹೋರಾಟ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಸಮಸ್ಯೆಯಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಸದ್ಯ ಅವರೇ ತಿರುಗಿ ಬೀಳುವ ಪರಿಸ್ಥಿತಿ ಬರಲಿದೆ' ಎಂದು ಅವರು ಹೇಳಿದರು.

ಎಚ್‌ಡಿಕೆಗೆ ಮುಡಾ ನಿವೇಶನ?

ಮೈತ್ರಿ ಮಾಡಿಕೊಂಡಿರುವ ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಮುಡಾ ಹಗರಣದಲ್ಲಿ ಸಿಎ ಸಿದ್ದರಾಮಯ್ಯ ಹೆಸರು ಕೇಳಿ ಬರುತ್ತಿದ್ದಂತೆ ಅಲರ್ಟ್ ಆಗಿದ್ದರು. ಸದನದಲ್ಲಿಯೂ ಪ್ರಸ್ತಾಪಿಸಿ ಸರ್ಕಾರದ ಮೇಲೆ ಚಾಟಿ ಬೀಸಿದ್ದರು. ಅಧಿವೇಶನ ಮುಕ್ತಾಯವಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಿಂದ ಯಾರೆಲ್ಲ ನಿವೇಶನ ಪಡೆದಿದ್ದಾರೆ ಎಂದು ಒಂದಷ್ಟು ಹೆಸರು ಹೇಳಿದ್ದರು. ಇದರಲ್ಲಿ ಮಾಜಿ ಸಿಎಂ ಹಾಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಹೆಸರು ಸಹ ಕೇಳಿ ಬಂದಿದೆ.

ಒಟ್ಟಾರೆ ಮುಡಾ ಮತ್ತು ವಾಲ್ಮಿಕ ಹಗರಣಗಳ ವಿಚಾರಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+