ಸಿದ್ದರಾಮಯ್ಯ ಅವರಿಂದಲೇ ಸಮ್ಮಿಶ್ರ ಸರ್ಕಾರ ಬೀಳುತ್ತೆ ಎಂದ ಶೆಟ್ಟರ್
Recommended Video
ಹುಬ್ಬಳ್ಳಿ, ಜನವರಿ 31: ಸಿದ್ದರಾಮಯ್ಯ ಅವರಿಂದಲೇ ಸಮ್ಮಿಶ್ರ ಸರ್ಕಾರ ಬೀಳಲಿದೆ, ಕಾಂಗ್ರೆಸ್ನವರು ಸರ್ಕಾರವನ್ನು ಐಸಿಯುನಲ್ಲಿಟ್ಟುಕೊಂಡು ಹೋಗುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವೆಂಗ್ಯವಾಡಿದ್ದಾರೆ.
ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಒಳಜಗಳ ಹೆಚ್ಚಾಗಿದೆ: ಶೆಟ್ಟರ್
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಅದರ ಪರಿಣಾಮ ಈಗ ಹೊರಗೆ ಬರುತ್ತಿದೆ. ಸಿದ್ದರಾಮಯ್ಯ ಅವರಿಂದಲೇ ಸರ್ಕಾರ ಬೀಳುವುದು ಖಾತ್ರಿಯಾಗಿದೆ ಎಂದು ಹೇಳಿದರು.
ಹುಬ್ಬಳ್ಳಿ: ಜಗದೀಶ್ ಶೆಟ್ಟರ್-ದೇಶಪಾಂಡೆ ನಡುವೆ ಮಾತಿನ ಚಕಮಕಿ
ಸಿದ್ದರಾಮಯ್ಯ ಯೋಜನೆಗಳಿಗೆ ಮಂಜೂರು ಮಾಡಿದ್ದ ಹಣವನ್ನು ನೀಡಲು ಕುಮಾರಸ್ವಾಮಿಯವರಿಗೆ ಆಗುತ್ತಿಲ್ಲ. ಈ ಸರ್ಕಾರವನ್ನು ಬೀಳಿಸಲು ನಾವು ಯಾವುದೇ ಪ್ರಯತ್ನ ಪಡಬೇಕಾಗಿಲ್ಲ. ಅದು ತನ್ನಷ್ಟಕ್ಕೆ ತಾನೇ ಪತನವಾಗಲಿದೆ ಎಂದರು.
ರಾಜ್ಯದಲ್ಲಿ ಆರ್ಥಿಕ ಸ್ಥಿತಿ ತೀವ್ರವಾಗಿ ಹದಗೆಟ್ಟಿದೆ, ಇನ್ನೊಂದೆಡೆ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯವನ್ನೇ ಒತ್ತೆ ಇಡಲು ಹೊರಟಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಈ ರೀತಿಯ ಪರಿಸ್ಥಿತಿಯಲ್ಲಿ ಕುಮಾರಸ್ವಾಮಿಯವರು ಸರ್ಕಾರ ಮುನ್ನಡೆಸದೆ ರಾಜೀನಾಮೆ ನೀಡಿ ಮನೆಗೆ ಹೋಗಲಿ. ಮೈತ್ರಿ ಸರ್ಕಾರದಲ್ಲಿ ದೊಂಬರಾಟ, ನಾಟಕೀಯತೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ಕುಮಾರಸ್ವಾಮಿಯವರು ಕೆಲವು ಯೋಜನೆಗಳನ್ನು ಕೈಬಿಡಲು ಮುಂದಾದಾಗ ಸಿದ್ದರಾಮಯ್ಯನವರೊಂದಿಗೆ ಸಂಘರ್ಷ ಆರಂಭವಾಗಿತ್ತು. ಈ ಸರ್ಕಾರ ಹಿಟ್ ವಿಕೆಟ್ ಆಗಲಿದೆ. ಸರ್ಕಾರ ತನ್ನಷ್ಟಕ್ಕೆ ತಾನೇ ಪತನವಾಗಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಬಹಳ ಗಂಭೀರವಾಗಿದೆ ಎಂದರು.