''ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಕರಾವಳಿಯಲ್ಲಿ ಕೊಲೆ ಪ್ರಕರಣಗಳು ಹೆಚ್ಚು''
ಹುಬ್ಬಳ್ಳಿ, ಮೇ 05: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಕರಾವಳಿ ಪ್ರದೇಶದ ಮಂಗಳೂರಿನಲ್ಲಿ ಅತೀ ಹೆಚ್ಚು ಕೋಮು ಪ್ರಚೋದಕ ಕೊಲೆ ಪ್ರಕರಣಗಳು ನಡೆದಿವೆ. ಸರ್ಕಾರ ತಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಒಂದು ವರ್ಗ ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೃತ್ಯ ಎಸಗುತ್ತಿದೆ' ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ಇದೇ ವೇಳೆ ಮಹದಾಯಿ ವಿಚಾರವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಕೊಲೆ ಹಾಗೂ ಗಲಭೆಗಳು ನಡೆಯುತ್ತವೆ. ಗಲಭೆ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸಹ ರದ್ದು ಪಡಿಸಲಾಗುತ್ತದೆ. ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ಪ್ರಕರಣವೇ ಇದಕ್ಕೆ ನಿದರ್ಶನ. ತಾವು ಏನೇ ಮಾಡಿದರೂ, ಕಾಂಗ್ರೆಸ್ ತಮ್ಮ ರಕ್ಷಣೆಗೆ ಇದೆ ಎಂದು ಭಾವಿಸಿರುವುದರಿಂದ, ಇಂಥ ಪ್ರಕರಣಗಳು ಆಗಾಗ ಮರುಕಳಿಸುತ್ತ ಇರುತ್ತವೆ' ಎಂದು ದೂರಿದರು.

ಕಾಶ್ಮೀರದ ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನದ ವಿರುದ್ಧ ಕೈಗೊಳ್ಳಬೇಕಾದ ತುರ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿದ್ದು, ಅಲ್ಲಿ ತೀವ್ರ ಸಮಸ್ಯೆ ಸೃಷ್ಟಿಯಾಗಿದೆ. ಅಂತಾರರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಒಬ್ಬಂಟಿ ಮಾಡುವ ಯತ್ನವೂ ನಡೆಯುತ್ತಿದೆ. ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಸೂಕ್ತ ಸಮಯದಲ್ಲಿ ಉತ್ತರ ಕೊಡಲಾಗುವುದು. ಕಾಲಮಿತಿಯಲ್ಲಿಯೇ ನಿರ್ಧಾರ ಅಸಾಧ್ಯ ಎಂದರು.
ಮಾಧ್ಯಮದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಎಸ್ ಗೊಂದಲದ ಬಗ್ಗೆ ಪ್ರಶ್ನಿಸಿದರೆ, ಅವರು ಮಹದಾಯಿ ಸಮಸ್ಯೆ ಬಗ್ಗೆ ಮಾತನಾಡುತ್ತಾರೆ. ಕೆಪಿಎಸ್ಸಿ ಫಿಲ್ಮನರಿ ಪರೀಕ್ಷೆಯಲ್ಲಿ ಎಂಬತ್ತು ಪ್ರಶ್ನೆ ತಪ್ಪು ಇತ್ತು. ಪರೀಕ್ಷಾ ಮುನ್ನಾದಿನ ತಡರಾತ್ರಿವರೆಗೂ ಪ್ರವೇಶ ಪತ್ರ. ಇದನ್ನು ಪ್ರಶ್ನಿಸಿದರೆ ಮೆಣಸಿನಕಾಯಿ ತಿಂದ ಹಾಗೆ ಆಡುತ್ತಾರೆ. ಶುದ್ಧ ಅಯೋಗ್ಯ ಭಂಡತನದ ಪರಮಾವಧಿ ಇದಾಗಿದೆ' ಎಂದು ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕದಲ್ಲಿ ಮಹದಾಯಿ ಸಮಸ್ಯೆ ಈಗಿನದ್ದಲ್ಲ. 1970ರ ದಶಕದಿಂದಲೂ ಇದೆ.ಈ ವಿಚಾರ ಇತ್ತೀಚೆಗೆ ಅದು ಹೆಚ್ಚು ಚರ್ಚಿತವಾಗುತ್ತಿದೆ. ಕಾಂಗ್ರೆಸ್ ಸಾಯಕಿ ಸೋನಿಯಾ ಗಾಂಧಿ ಅವರು, ಕರ್ನಾಟಕಕ್ಕೆ ಒಂದು ಹನಿ ನೀರು ಬಿಡುವುದಿಲ್ಲ ಎಂದಿದ್ದರು. ಎರಡೂ ರಾಜ್ಯಗಳು ಚರ್ಚಿಸಿ ಪರಿಹರಿಸಿಕೊಳ್ಳುವ ಸಮಸ್ಯೆಯನ್ನು ಕೋರ್ಟ್ಗೆ ಕೊಂಡೊಯ್ದಿದ್ದು ಇವರೇ. ಸುಪ್ರೀಂ ಕೋರ್ಟ್ನಲ್ಲಿ ವಿಷಯ ಇರುವ ಕಾರಣ ಸದ್ಯ ತೀರ್ಮಾನ ಕೈಗೊಳ್ಳದಂತೆ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ವಿನಂತಿಸಿದ್ದು ಯಾರು' ಎಂದು ಪ್ರಶ್ನಿಸಿದರು.
ಜನಿವಾರ ಪ್ರಕರಣ ವಿರುದ್ಧ ಕ್ರಮ
'ಜನಿವಾರ ಬ್ರಾಹ್ಮಣ ಸಮುದಾಯವಷ್ಟೇ ಅಲ್ಲ, ವಿವಿಧ ಸಮಾಜದವರು ಧರಿಸುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಿಯಮಾವಳಿ ಪ್ರಕಾರ ತಪಾಸಣೆ ನಡೆಸುವುದು ತಪ್ಪಲ್ಲ. ಕಲಬುರಗಿಯಲ್ಲಿ ನಡೆದ ಘಟನೆ ಕುರಿತು ಪ್ರಕರಣ ದಾಖಲಾಗಿದೆ. ಸರ್ಕಾರ ಕ್ರಮ ಕೈಗೊಳ್ಳಲಿದೆ' ಎಂದು ಅವರು ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications