ಧರಂಸಿಂಗ್ ಅಗಲಿಕೆಗೆ ಮುಖ್ಯಮಂತ್ರಿ, ಸಚಿವ ವಿನಯ್ ಕುಲಕರ್ಣಿ ಕಂಬನಿ
ಹುಬ್ಬಳ್ಳಿ, ಜುಲೈ 27: "ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಒಬ್ಬ ಅಜಾತ ಶತ್ರು. ತಮ್ಮ ೪೦-೫೦ ವರ್ಷಗಳ ರಾಜಕೀಯ ಬದುಕಿನಲ್ಲಿ ಯಾರ ವೈರತ್ವವನ್ನೂ ಕಟ್ಟಿಕೊಂಡವರಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ.
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಗುರುವಾರ ಹಾವೇರಿ ಜಿಲ್ಲೆಯ ಪ್ರವಾಸದಲ್ಲಿದ್ದ ಅವರು ಮಾಜಿ ಮುಖ್ಯಮಂತ್ರಿಯ ಅಕಾಲಿಕ ಮರಣದಿಂದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು. ನಂತರ ಹಾವೇರಿ ತಾಲೂಕಿನ ದೇವಿಹೊಸೂರು ತೋಟಗಾರಿಕಾ ಕಾಲೇಜಿನಲ್ಲಿ ಎರಡು ನಿಮಿಷ ಮೌನ ಆಚರಿಸಿ ಮಾಜಿ ಮುಖ್ಯಮಂತ್ರಿ ನಿಧನಕ್ಕೆ ಕಂಬನಿ ಮಿಡಿದರು.

ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಅವರ ಸಾವಿನಿಂದ ರಾಜ್ಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದರು.
ನಂತರ ಹುಬ್ಬಳ್ಳಿ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ಬಂದು ಧರಂ ಸಿಂಗ್ ಅವರ ಅಂತಿಮ ದರ್ಶನ ಪಡೆದರು.
ಮಾಜಿ ಸಿಎಂ ಶೆಟ್ಟರ್ ಸಂತಾಪ
ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಸಾವು ಎಲ್ಲರಿಗೂ ಶಾಕ್ ನೀಡಿದೆ. ನಮಗೂ ಅವರಿಗೂ ಆತ್ಮೀಯ ಸಂಬಂಧವಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಮಾತನಾಡಿದ ಅವರು, ಧರ್ಮಸಿಂಗ್ ಒಬ್ಬ ಸರಳ, ಸಜ್ಜನಿಕೆಯ ವ್ಯಕ್ತಿ. ಅಹಂಕಾರ ಇಲ್ಲದ ವ್ಯಕ್ತಿತ್ವ ಹೊಂದಿರುವ ಅವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ಹಾನಿ ತಂದಿದೆ. ಧರ್ಂ ಸಿಂಗ್ ಬೀದರ್ ಜಿಲ್ಲೆಯಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿದ ನಾಯಕರಾಗಿದ್ದರು ಎಂದು ಶೆಟ್ಟರ್ ನೆನಪಿಸಿಕೊಂಡರು.
ವಿನಯ್ ಕುಲಕರ್ಣಿ ಶೋಕ ಸಂದೇಶ
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ನಿಧನಕ್ಕೆ ಗಣಿ, ಭೂವಿಜ್ಞಾನ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಮೃತರ ಅಗಲಿಕೆಯ ನೋವನ್ನು ಭರಿಸಲು ಅವರ ಕುಟುಂಬದವರಿಗೆ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications