'ಸಿಎಂ ಕುರ್ಚಿ ಕಿತ್ತಾಟದಲ್ಲಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನ ಖಚಿತ'
ಹುಬ್ಬಳ್ಳಿ, ಜನವರಿ 11: ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಆಂತರಿಕ ಜಗಳದಿಂದ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಇಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿವೆ. ಒಂದಲ್ಲ ಒಂದು ದಿನ ಅದು ಹೊರ ಬರುತ್ತೆ ಅಂತ ಹೇಳಿದ್ದೆ. ಈಗಾಗಲೇ ಔತಣಕೂಟ ಆರಂಭವಾಗಿದೆ. ಕೆಲ ಸಚಿವರು ಸೇರಿ ಔತಣಕೂಟ ಮಾಡಿದರು. ಎಸ್ಸಿ, ಎಸ್ಟಿ ಶಾಸಕರು, ಮಂತ್ರಿಗಳ ಔತಣ ಕೂಟಕ್ಕೆ ಅಡ್ಡಗಾಲು ಹಾಕಿದರು. ಅಡ್ಡಗಾಲು ಹಾಕೋ ಕೆಲಸ ಡಿ.ಕೆ ಶಿವಕುಮಾರ್ ಮಾಡಿದ್ದರು ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ರಾಜಣ್ಣ, ಎಂ.ಬಿ ಪಾಟೀಲ್ ಹೇಳಿಕೆ ನೋಡಿದ್ರೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಎರಡು ಗುಂಪು ಎದ್ದು ಕಾಣುತ್ತಿದೆ. ಮೊದಲು ಈ ಜಗಳ ಒಳಗೊಳಗೇ ಇತ್ತು. ಈಗ ಹೊರ ಬರುತ್ತಿದೆ. ಆದಷ್ಟು ಬೇಗ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎಂದರು.
ಬಿಜೆಪಿ ಔತಣಕೂಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್, ಊಟಕ್ಕೆ ಕೊಟ್ಟವರು ಸ್ಪಷ್ಟಿಕರಣ ಕೊಟ್ಟಿದ್ದಾರೆ. ನಮ್ಮಲ್ಲಿ ಸಮಸ್ಯೆ ಇದೆ. ಸರಿ ಮಾಡುವ ಕೆಲಸ ಹೈಕಮಾಂಡ್ ಮಾಡುತ್ತಾರೆ. ಆದರೆ ಕಾಂಗ್ರೆಸ್ ಎಸ್ಸಿ, ಎಸ್ಟಿ ಸಮಸ್ಯೆಗಳ ಕುರಿತು ಚರ್ಚಿಸಲು ಔತಣಕೂಟ ಸೇರಿದ್ದೇವೆ ಅಂತಾ ರಾಜಣ್ಣ ಹೇಳುತ್ತಾರೆ. ಈ ರೀತಿಯ ಸಮಸ್ಯೆಗಳನ್ನು ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಬೇಕು. ಇದನ್ನು ಚರ್ಚೆ ಮಾಡೋಕೆ ಮಂತ್ರಿಗಳು ಸೇರಿದರೆ ನಂಬುತ್ತಾರಾ..? ಎಂದು ಪ್ರಶ್ನಿಸಿದರು.

ಎಸ್ಸಿ, ಎಸ್ಟಿ ಜನರ ಮೇಲೆ ಅವರಿಗೆ ಕಾಳಜಿಯೇ ಇಲ್ಲಾ. ರಾಜಣ್ಣ ಹೇಳಿಕೆ ನೋಡಿದ್ರೆ ರಾಜಕೀಯ ಸಲುವಾಗಿ ಮಾಡ್ತಿದ್ದಾರೆ. ಎಸ್ ಸಿ ಎಸ್ಟಿ ಕಲ್ಯಾಣಕ್ಕಾಗಿ ಅಲ್ಲ ಅಂತಾ, ಇದನ್ನು ನೀವು ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಬೇಕಿತ್ತು. ಡಿನ್ನರ್ ಮೀಟಿಂಗ್ ಮಾಡುವ ಅವಶ್ಯಕತೆನೇ ಇರಲಿಲ್ಲ ಎಂದು ಹೇಳಿದರು.
ಪರಮೇಶ್ವರ ಡಿನ್ನರ್ ಮೀಟಿಂಗ್ ಬ್ರೇಕ್ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಇದರ ಹಿಂದೆ ರಾಜಕೀಯ ಇದೆ. ಡಿ.ಕೆ ಶಿವಕುಮಾರ್ಗೆ ತನ್ನ ವಿರುದ್ಧ ಷಡ್ಯಂತ್ರ ನಡೀತಾ ಇದೆ ಅಂತಾ ಅನಿಸುತ್ತಿದೆ. ಹೀಗಾಗಿ ಶತ್ರು ಸಂಹಾರದ ಪೂಜೆ ಪುನಸ್ಕಾರ ಆರಂಭಿಸಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಬಯಲಲ್ಲೇ ಗುದ್ದಾಟ ನಡೆಯುತ್ತದೆ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications