ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್
ಹುಬ್ಬಳ್ಳಿ, ಆಗಸ್ಟ್ 20 : ಈ ಬಾರಿ ವೀರಶೈವ ಲಿಂಗಾಯತಕ್ಕೆ ಒಳಪಡುವ ಎಲ್ಲಾ ಪಂಗಡಗಳನ್ನು ಒಟ್ಟುಗೂಡಿಸಿ ಹೋರಾಟ ಮಾಡಲು ಚಿಂತನೆ ನಡೆದಿದೆ. ಚುನಾವಣೆ ಬಳಿಕ ಎಲ್ಲಾ ಮಠಾಧೀಶರನ್ನು, ವಿರಕ್ತ ಮಠ ಮತ್ತು ಪಂಚ ಪೀಠಾಧಿಪತಿಗಳ ಜೊತೆಗೆ ಮಾತುಕತೆ ನಡೆಸುತ್ತೇವೆ ಎಂದು ಪ್ರತ್ಯೇಕ ಧರ್ಮ ಕುರಿತು ಮಾಜಿ ಸಚಿವ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ನಮ್ಮ ಸಮಾಜಕ್ಕೆ ಅಲ್ಪಸಂಖ್ಯಾತ ಮನ್ನಣೆ ಸಿಗಬೇಕು. ನಮ್ಮ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಹೆಚ್ಚಾಗಬೇಕೆಂಬುವುದು ನಮ್ಮ ಉದ್ದೇಶ . ಇನ್ನೂ ಸಾವರ್ಕರ್ ಭಾವಚಿತ್ರವನ್ನು ಸುಟ್ಟಿರುವುದು ತಪ್ಪು. ಅದೇ ರೀತಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಚಿಲ್ಲರೆ ಕೆಲಸ ಎಂದು ಎಂಬಿ ಪಾಟೀಲ್ ಹೇಳಿದರು.
ಧರ್ಮ ಒಡೆಯುವ ಕೆಲಸ ಮಾಡಲ್ಲ
ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು ಎನ್ನುವ ಉದ್ದೇಶದಿಂದ ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಯತ್ನ ಮಾಡಲಾಗಿತ್ತು. ನಾವು ಯಾವುದೇ ಧರ್ಮ ಒಡೆದಿಲ್ಲ. ಶೈಕ್ಷಣಿಕ ವಿಚಾರವಾಗಿ ಪ್ರಯತ್ನ ಮಾಡಿದೆವು. ಈಗ ರಾಜ್ಯದಲ್ಲಿ ಉಪ ಪಂಗಡಗಳು ಬೇರೆ ಬೇರೆಯಾಗುತ್ತಿವೆ. ಹೀಗಾಗಿ ನಾವು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ, ಧರ್ಮ ಒಡೆಯುವ ಕೆಲಸ ಮಾಡುತ್ತಿಲ್ಲ. ಚುನಾವಣೆ ನಂತರ ಎಲ್ಲಾ ಸ್ವಾಮೀಜಿಗಳ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ಯುಪಿ ಮಾಡೆಲ್ ಸರ್ಕಾರ ಏಕೆ?
ದೇಶದ ಯುಪಿ, ಬಿಹಾರ ಜನ ನಮ್ಮಲ್ಲಿ ದುಡಿಯೋಕೆ ಬರುತ್ತಾರೆ. ನಮ್ಮ ರಾಜ್ಯಕ್ಕೆ ಮೆಡಿಕಲ್, ಇಂಜಿನಿಯರಿಂಗ್ ಓದೋಕೆ ಬರುತ್ತಾರೆ. ಆದರೆ ನಮ್ಮ ಮುಖ್ಯಮಂತ್ರಿಗೆ ಯುಪಿ ಮಾಡೆಲ್ ಸರ್ಕಾರ ಬೇಕಂತೆ. ಮೋದಿಯವರು ಸ್ವಾತಂತ್ರ್ಯದ ದಿನ ಭ್ರಷ್ಟಾಚಾರದ ವಿರುದ್ದ ಯುದ್ಧ ಸಾರುತ್ತೀವಿ ಅಂತಾರೆ. 40 ಪರ್ಸೆಂಟ್ ವಿರುದ್ದ ಗುತ್ತಿಗೆದಾರರೇ ಪ್ರಧಾನಿ ಮೋದಿಯವರಿಗೆ ದೂರು ನೀಡಿದ್ದಾರೆ. ಅವರ ಮೇಲೆ ಏಕೆ ಐಟಿ, ಇಡಿ ದಾಳಿ ಮಾಡಿಲ್ಲ ಎಂದು ಪ್ರಶ್ನಿಸಿದರು.
ಈ ರಾಜ್ಯದಲ್ಲಿ ಸರ್ಕಾರವಿಲ್ಲ ಎಂದು ಅವರ ಸಚಿವರೇ ಹೇಳುತ್ತಾರೆ. ಸುಮ್ಮನೆ ಮ್ಯಾನೇಜ್ ಮಾಡುತ್ತಿದ್ದೀವಿ ಎಂದು ಮಾಧುಸ್ವಾಮಿ ಹೇಳಿದ್ದಾರೆ. ನಾವು ಜನರ ಮನೆ ಮನೆಗೆ ಹೋಗುತ್ತೇವೆ. ನಾವು ಈ ಬಾರಿ 140-150 ಸೀಟ್ ಪಡೆದು ಅಧಿಕಾರಕ್ಕೆ ಬರುತ್ತೇವೆ. ಮತ್ತೆ ರಾಜ್ಯವನ್ನು ನಂಬರ್ ಒನ್ ಆಗಿ ಮಾಡುತ್ತೇವೆ ಎಂದು ಎಂ.ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications