ಲಾಕ್ಡೌನ್; ಹುಬ್ಬಳ್ಳಿಯಲ್ಲಿ ನಡೆಯಿತು ಪೊಲೀಸರ ಮೇಲೆ ಕಲ್ಲು ತೂರಾಟ
ಹುಬ್ಬಳ್ಳಿ, ಏಪ್ರಿಲ್ 3: ಲಾಕ್ ಡೌನ್ ನಡುವೆಯೂ ನಮಾಜ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಟೂರ್ ರಸ್ತೆ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ಶುಕ್ರವಾರ ನಡೆದಿದೆ.
Recommended Video
ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು ಪೊಲೀಸರ ಹಾಗೂ ಮುಸ್ಲಿಂರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಗಳ ಮೇಕೆ ಸ್ಥಳೀಯ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ.
ಮೂರು ಜನ ಪೊಲೀಸ್ ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೇ ಈ ಸಂದರ್ಭದಲ್ಲಿ ಮಸೀದಿಯಲ್ಲಿ ಪ್ರಾರ್ಥನಾ ಮಾಡಲು ಮುಂದಾದ 20ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದವರಿಗೆ ಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಪೊಲೀಸರ ಮೇಲೆ ಚಪ್ಪಲಿ ಕೂಡ ತೂರಿದ್ದಾರೆ.

ಎಂಟು ಜನರನ್ನು ವಶಕ್ಕೆ ಪಡೆದ ಶಹರ ಠಾಣೆ ಪೊಲೀಸ್ ಅಧಿಕಾರಿಗಳು ಪರಾರಿಯಾದವರಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲೊ ನಿಯೋಜಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications