ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್‌ಡೌನ್; ಹುಬ್ಬಳ್ಳಿಯಲ್ಲಿ ನಡೆಯಿತು ಪೊಲೀಸರ ಮೇಲೆ ಕಲ್ಲು ತೂರಾಟ

|
Google Oneindia Kannada News

ಹುಬ್ಬಳ್ಳಿ, ಏಪ್ರಿಲ್ 3: ಲಾಕ್ ಡೌನ್ ನಡುವೆಯೂ ನಮಾಜ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕರು ಪೊಲೀಸರ ಮೇಲೆ‌ ಕಲ್ಲು ತೂರಾಟ ನಡೆಸಿದ ಘಟನೆ ಮಂಟೂರ್ ರಸ್ತೆ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ಶುಕ್ರವಾರ ನಡೆದಿದೆ.

Recommended Video

ಮೂಕ ಪ್ರಾಣಿಗಳಿಗೆ ನೇರವಾದ ಕನ್ನಡದ ಯುವಕರು | Oneindia Kannada

ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು ಪೊಲೀಸರ ಹಾಗೂ ಮುಸ್ಲಿಂರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಗಳ ಮೇಕೆ ಸ್ಥಳೀಯ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ.

ಲಾಕ್ ಡೌನ್ ನಲ್ಲಿ ಸಿಲುಕಿಕೊಂಡ ಮಗ; ಹುಬ್ಬಳ್ಳಿಯಲ್ಲಿ ಮಗಳಿಂದಲೇ ಶವಕ್ಕೆ ಅಗ್ನಿಸ್ಪರ್ಶಲಾಕ್ ಡೌನ್ ನಲ್ಲಿ ಸಿಲುಕಿಕೊಂಡ ಮಗ; ಹುಬ್ಬಳ್ಳಿಯಲ್ಲಿ ಮಗಳಿಂದಲೇ ಶವಕ್ಕೆ ಅಗ್ನಿಸ್ಪರ್ಶ

ಮೂರು ಜನ ಪೊಲೀಸ್ ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೇ ಈ ಸಂದರ್ಭದಲ್ಲಿ ಮಸೀದಿಯಲ್ಲಿ ಪ್ರಾರ್ಥನಾ ಮಾಡಲು ಮುಂದಾದ 20ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದವರಿಗೆ ಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಪೊಲೀಸರ ಮೇಲೆ ಚಪ್ಪಲಿ ಕೂಡ ತೂರಿದ್ದಾರೆ.

Coronavirus In Hubballi: Stone Pelting On Police In Hubballi

ಎಂಟು ಜನರನ್ನು ವಶಕ್ಕೆ ಪಡೆದ ಶಹರ ಠಾಣೆ ಪೊಲೀಸ್‌ ಅಧಿಕಾರಿಗಳು ಪರಾರಿಯಾದವರಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ.‌ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲೊ ನಿಯೋಜಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
Coronavirus In Hubballi: Stone Pelting In Hubballi about prayer in mosque. 20 youths stone pelt on hubballi police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X