ಜಯಮೃತ್ಯುಂಜಯ ಶ್ರೀಗಳಿಗೆ ಸಂಕಷ್ಟ, ಖುದ್ದು ಹಾಜರಿಗೆ ನ್ಯಾಯಾಲಯ ಸೂಚನೆ
ಹುಬ್ಬಳ್ಳಿ, ನವೆಂಬರ್ 25: ವೀರಶೈವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೂಡಲ ಸಂಗಮ ಜಯಮೃತ್ಯುಂಜಯ ಶ್ರೀಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ನವೆಂಬರ್ 5 ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಯಮೃತ್ಯುಂಜಯ ಶ್ರೀಗಳ ಖುದ್ದು ಹಾಜರಿಗೆ ನ್ಯಾಯಾಲಯ ಆದೇಶ ನೀಡಿದೆ.

ನವೆಂಬರ್ 5 ರಂದು ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ, ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು, ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು, ಐದು ಜನ ತಂದೆಗೆ ಹುಟ್ಟಿದವರು ವೀರಶೈವರು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.
ಹಾಗಾಗಿ ವೀರಶೈವ ಮುಖಂಡರು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎಮ್. ಎನ್. ನಾಗರಾಜ್ ಅವರಿಗೆ, ಶ್ರೀಗಳ ವಿರುದ್ಧ ದೂರು ನೀಡಿದ್ದರು. ಆದರೆ ಪೊಲೀಸ್ ಕಮೀಷನರ್ ಸೂಕ್ತ ಕ್ರಮ ಕೈಗೊಳದಿದ್ದಕ್ಕೆ ಶುಕ್ರವಾರ, ಕೋರ್ಟ್ ನಲ್ಲಿ ವಕೀಲರಾದ ಬಸವನಗೌಡ ಪಾಟೀಲ್ ಖಾಸಗಿ ದೂರು ದಾಖಲಿಸಿದ್ದಾರೆ.
ಹೀಗಾಗಿ ಶುಕ್ರವಾರ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಜೆಎಮ್ಎಫ್'ಸಿ ನ್ಯಾಯಾಲಯ ಡಿಸೆಂಬರ್ 20 ಕ್ಕೆ ದೂರಿನ ವಿಚಾರಣೆ ಮುಂದೂಡಿದೆ. ಅಲ್ಲದೆ ವಿಚಾರಣೆ ವೇಳೆ ಜಯಮೃತ್ಯುಂಜಯ ಶ್ರೀಗಳು ಖುದ್ದು ಹಾಜರಾಗುವಂತೆ ಆದೇಶ ನೀಡಿದೆ.












Click it and Unblock the Notifications