ನೋವಿನಲ್ಲಿ ಕಣ್ಣೀರಿಡುತ್ತಲೇ sslc ಪರೀಕ್ಷೆ ಬರೆದ ಸಚಿವ ಶಿವಳ್ಳಿ ಮಗಳು
ಹುಬ್ಬಳ್ಳಿ, ಮಾರ್ಚ್ 23: ಶುಕ್ರವಾರ ಹೃದಯಾಘಾತದಿಂದ ನಿಧನರಾದ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಎರಡನೆಯ ಮಗಳು ರೂಪಾ, ತಂದೆಯ ಅಗಲಿಕೆಯ ದುಃಖದ ನಡುವೆಯೇ ಕಣ್ಣೀರಿಡುತ್ತಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ.
ಸಿ.ಎಸ್. ಶಿವಳ್ಳಿ ಅವರ ಮಗಳು ಎರಡನೆಯ ಪುತ್ರಿ ರೂಪಾ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಕೆಎಲ್ಇ ಕಾಲೇಜಿನಲ್ಲಿ 10ನೇ ತರಗತಿ ಓದುತ್ತಿದ್ದಾರೆ.
ತಂದೆ ಸಾವಿನ ನೋವು ಒಂದೆಡೆ ಅತೀವ ದುಃಖ ಉಂಟುಮಾಡುತ್ತಿದ್ದರೂ, ಶಿಕ್ಷಣಕ್ಕೆ ತೊಡಕಾಗಬಾರದು ಎಂಬ ಕಾರಣಕ್ಕೆ ಅವರು ಅಳುತ್ತಲೇ ಪರೀಕ್ಷೆ ಬರೆದಿದ್ದಾರೆ. ಇಲ್ಲಿನ ಸೇಂಟ್ ಆಂಟೋನಿ ಶಾಲೆಯಲ್ಲಿ ಹತ್ತನೇ ತರಗತಿಯ ಸಿಬಿಎಸ್ಇ ಇಂಗ್ಲಿಷ್ ಭಾಷೆಯ ಪರೀಕ್ಷೆಯನ್ನು ಬರೆದರು. ಪರೀಕ್ಷೆ ಮುಗಿಸಿ ಬಳಿಕ ಅವರು ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪೌರಾಡಳಿತ ಸಚಿವ ವಿಎಸ್ ಶಿವಳ್ಳಿ (57) ಗುರುವಾರ ಮಧ್ಯಾಹ್ನ ಸ್ನೇಹಿತರೊಂದಿಗೆ ಮಾತನಾಡುತ್ತ ಕುಳಿತಿದ್ದ ವೇಳೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಹುಬ್ಬಳ್ಳಿಯ ಲೈಫ್ಲೈನ್ ಆಸ್ಪತ್ರೆಗೆ ಕರೆತರಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದರು.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಅವರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ನೆರವೇರಲಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಧ್ಯಾಹ್ನ 3.30ರ ವೇಳೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications