ಹುಧಾ ಮೇಯರ್ ಮನೆಯಲ್ಲಿಯೇ ಮೂವರಿಗೆ ಡೆಂಗ್ಯೂ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಮಹಾಮಾರಿ ಡೆಂಗೆ ಭೀತಿ ಎಲ್ಲೆಡೆ ಆವರಿಸಿದ್ದು, ಮಹಾನಗರದ ಪ್ರಥಮ ಪ್ರಜೆ ಮೇಯರ್ ಡಿ.ಕೆ.ಚವ್ಹಾಣ್ ಅವರ ಮೂವರು ಮೊಮ್ಮಕ್ಕಳು ಶಂಕಿತ ಡೆಂಗೆ ಜ್ವರದಿಂದ ಬಳಲುತ್ತಿದ್ದಾರೆ. ಮೊಮ್ಮಕ್ಕಳನ್ನು ಚವ್ಹಾಣ್ ನಗರದ ಚಿಟಗುಪ್
ಹುಬ್ಬಳ್ಳಿ, ಜುಲೈ 22 : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಮಹಾಮಾರಿ ಡೆಂಗ್ಯೂ ಭೀತಿ ಎಲ್ಲೆಡೆ ಆವರಿಸಿದ್ದು, ರೋಗಿಗಳು ಪರದಾಡುತ್ತಿದ್ದಾರೆ. ಈ ನಡುವೆ, ಶುಕ್ರವಾರ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಡೆಂಗ್ಯೂಗೆ ಬಲಿಯಾಗಿದ್ದಾಳೆ.
ಮಹಾನಗರದ ಪ್ರಥಮ ಪ್ರಜೆ ಮೇಯರ್ ಡಿ.ಕೆ.ಚವ್ಹಾಣ್ ಅವರ ಮೂವರು ಮೊಮ್ಮಕ್ಕಳು ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಮೊಮ್ಮಕ್ಕಳನ್ನು ಚವ್ಹಾಣ್ ನಗರದ ಚಿಟಗುಪ್ಪಿ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಸಿಕೊಂಡಿರುವ ಒಂದು ಮಗು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದೆ.

ಮೇಯರ್ ಅವರ ಮೊಮ್ಮಕ್ಕಳಾದ ಶೀತಲ್, ಪ್ರಿಯಾಂಕಾ ಹಾಗೂ ಅರ್ಪಿತಾ ಎಂಬುವರು ಸೋಂಕಿನಿಂದ ಬಳಲುತ್ತಿದ್ದಾರೆ. ಅವರಲ್ಲಿ ಪ್ರಿಯಾಂಕಾ ಚೇತರಿಸಿಕೊಂಡಿದ್ದು, ಮನೆಗೆ ತೆರಳಿದ್ದಾರೆ. ಶೀತಲ್ ಮತ್ತು ಅರ್ಪಿತಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಪಿತಾ ದೇಹದಲ್ಲಿ ಬಿಳಿ ರಕ್ತಕಣಗಳು ಕುಂಠಿತಗೊಂಡಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಡೆಂಗ್ಯೂ ರೋಗಿ ಮನೆಗೆ ಶೆಟ್ಟರ್ ಭೇಟಿ
ಡೆಂಗ್ಯೂಯಿಂದ ಬಳಲುತ್ತಿದ್ದ ನಗರದ ಬ್ಯಾಂಕರ್ಸ್ ಕಾಲೋನಿಯ ನಿವಾಸಿ ಗಣೇಶ್ ಪೆನಗೊಂಡ ಅವರ ಮನೆಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಗಣೇಶ್ ಅವರು ಗೋಕುಲ ರಸ್ತೆಯ ಲೈಫ್ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ವಾಪಸ್ ಆಗಿದ್ದಾರೆ.
ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ?
ಹುಬ್ಬಳ್ಳಿಯ ವಿದ್ಯಾನಗರದ ಐದು ವರ್ಷದ ಬಾಲಕಿ ಸಮನ್ವಿ ಗಡ್ಡಿ ಮಾರಕ ಡೆಂಗ್ಯೂಗೆ ಬಲಿಯಾಗಿದ್ದಾಳೆ. ಐದು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳುತ್ತಿದ್ದ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದಾಳೆ.
ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವೆಡೆ ಡೆಂಗ್ಯೂ ಉಲ್ಬಣಗೊಂಡಿದ್ದು, ಚಿಕಿತ್ಸೆಗೆ ರೋಗಿಗಳು ಪರದಾಡುವಂತಾಗಿದೆ. ಈ ಕುರಿತು ಮಾತನಾಡಿದ ಪಾಲಿಕೆ ವೈದ್ಯಾಧಿಕಾರಿ ಡಾ.ಪ್ರಭು ಬಿರಾದಾರ, ಜ್ವರದಿಂದ ಮೆದುಳು ನಿಷ್ಕ್ರೀಯಗೊಂಡು ಬಾಲಕಿ ಮೃತಪಟ್ಟಿದ್ದು, ೧೦ ದಿನಗಳ ನಂತರ ಡೆಂಗ್ಯೂ ದೃಢಪಡಿಸಬೇಕಾಗುತ್ತದೆ. ಆದರೆ ಆಸ್ಪತ್ರೆಗೆ ದಾಖಲಾಗಿ ಮೂರು ದಿನದಲ್ಲಿ ಬಾಲಕಿ ಮೃತಪಟ್ಟಿರುವುದಾಗಿ ತಿಳಿಸಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications