ದೇವೇಗೌಡ ಅವರಿಗೆ ತುಮಕೂರಲ್ಲ, ಮೈಸೂರು ಬೇಕಿತ್ತು!
ಬೆಂಗಳೂರು, ಜೂನ್ 22: ದೇವೇಗೌಡ ಅವರು ರಾಜಕೀಯ ಸಂಧ್ಯಾಕಾಲದಲ್ಲಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ಆದರೆ ತುಮಕೂರಿನಿಂದ ಸ್ಪರ್ಧಿಸುವುದು ಅವರ ಮೊದಲ ಆಯ್ಕೆ ಆಗಿರಲಿಲ್ಲವಂತೆ!
ದೇವೇಗೌಡ ಅವರು ತಮಗಾಗಿ ಮೈಸೂರು ಕ್ಷೇತ್ರವನ್ನು ಕೇಳಿದ್ದರಂತೆ ಆದರೆ ಸಿದ್ದರಾಮಯ್ಯ ಅವರು ಮೈಸೂರು ಬಿಟ್ಟುಕೊಡಲು ಸಿದ್ದರಿಲ್ಲದ ಕಾರಣ ಅನಿವಾರ್ಯವಾಗಿ ತುಮಕೂರನ್ನು ದೇವೇಗೌಡ ಅವರು ಆಯ್ಕೆ ಮಾಡಿಕೊಳ್ಳಬೇಕಾಯಿತು ಎಂಬ ಅಂಶವನ್ನು ಸಿದ್ದರಾಮಯ್ಯ ಅವರೇ ಹೊರಗೆಡವಿದ್ದಾರೆ.
ನಿನ್ನೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದೇವೇಗೌಡ ಅವರು ಮೈಸೂರನ್ನು ಕೇಳಿದ್ದು ನಿಜ, ಆದರೆ ತುಮಕೂರನ್ನು ಅವರಿಗೆ ಒತ್ತಾಯಪೂರ್ವಕವಾಗಿಯೇನೂ ಕೊಟ್ಟಿಲ್ಲ, ಅವರು ತುಮಕೂರನ್ನು ಕೇಳಿದ್ದರು ಎಂದು ಹೇಳಿದ್ದಾರೆ.
ತುಮಕೂರಿನಿಂದ ಸ್ಪರ್ಧಿಸಿದ್ದ ದೇವೇಗೌಡ ಅವರು, ಬಿಜೆಪಿ ಎದುರು 12000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನ್ನು ಅನುಭವಿಸಿದರು. ಬಿಜೆಪಿಯ ಅಭ್ಯರ್ಥಿ ಜಿಎಸ್.ಬಸವರಾಜು ಅವರು ಅಚ್ಚರಿಯ ಜಯಗಳಿಸಿ ಲೋಕಸಭೆ ಪ್ರವೇಶ ಮಾಡಿದ್ದಾರೆ.

'ಯಾರ ಮೇಲೂ ದೂರು ಕೊಡಲು ದೆಹಲಿಗೆ ಹೋಗಿರಲಿಲ್ಲ'
ತಮ್ಮ ದೆಹಲಿ ಭೇಟಿ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾನು ಯಾರ ಮೇಲೂ ದೂರು ನೀಡಲು ದೆಹಲಿಗೆ ಹೋಗಿರಲಿಲ್ಲ, ರಾಜ್ಯ ರಾಜಕಾರಣ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಊಹಾಪೋಹದ ವರದಿಗೆ ಪ್ರತಿಕ್ರಿಯಿಸಲ್ಲ: ಸಿದ್ದರಾಮಯ್ಯ
ನಾನು ರಾಹುಲ್ ಗಾಂಧಿ ಇಬ್ಬರೇ ಸಭೆ ನಡೆಸಿದ್ದೇವೆ, ಅವರು ಸಭೆಯ ವಿವರಗಳನ್ನು ಯಾರಿಗೂ ಹೇಳಿಲ್ಲ, ನಾನೂ ಯಾರಿಗೂ ಹೇಳಿಲ್ಲ, ಹಾಗಿದ್ದ ಮೇಲೆ ಊಹಾಪೋಹದ ವರದಿಗಳಿಗೆ ನೇನೇಕೆ ಪ್ರತಿಕ್ರಿಯೆ ನೀಡಲಿ ಎಂದು ಖಾರವಾಗಿಯೇ ಉತ್ತರಿಸಿದ್ದಾರೆ.

ಊಹೆಯನ್ನೇ ವರದಿ ಮಾಡಿರುವ ಮಾಧ್ಯಮಗಳು
ರಾಹುಲ್ ಗಾಂಧಿ ಹಾಗೆ ಹೇಳಿದರು, ಸಿದ್ದರಾಮಯ್ಯ ಹಾಗೆ ಹೇಳಿದರು, ದೇವೇಗೌಡರು ಹೀಗೆ ಹೇಳಿದರು ಎಂಬುದೆಲ್ಲಾ ಸುಳ್ಳು ಸುದ್ದಿ, ಯಾರೂ ಯಾರ ವಿರುದ್ಧವೂ ದೂರು ನೀಡಿಲ್ಲ, ಮಾಧ್ಯಮಗಳು ಊಹೆಯನ್ನು ವರದಿ ಮಾಡಿವೆ ಎಂದು ಹೇಳಿದರು.

ಗ್ರಾಮ ವಾಸ್ತವ್ಯದಿಂದ ಮೈತ್ರಿ ಸರ್ಕಾರಕ್ಕೆ ಲಾಭ
ಯಾರು ಏನೇ ಹೇಳಿದರು ಸರ್ಕಾರ ಸುಭದ್ರವಾಗಿದೆ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ, ಮುಂದೆಯೂ ಮಾಡುತ್ತಾರೆ, ಇದರಿಂದ ಮೈತ್ರಿ ಸರ್ಕಾರಕ್ಕೆ ಲಾಭವಾಗಲಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications