ದಶಕದ ಸಮಸ್ಯೆಗೆ ಕೊನೆಗೂ ಮುಕ್ತಿ: ತ್ಯಾಜ್ಯ ವಿಲೇವಾರಿಗೆ ಟೆಂಡರ್ ಕರೆದ ಧಾರವಾಡ ಪಾಲಿಕೆ
ಹುಬ್ಬಳ್ಳಿ, ಮೇ 16:ಅಂತೂ ಇಂತೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯಕ್ಕೆ ಮುಕ್ತಿ ನೀಡಲು ಮುಂದಾಗಿದೆ. ಮಹಾನಗರ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ದಶಕಗಳಿಂದ ಕೊಳೆಯುತ್ತ ಬಿದ್ದಿರುವ ತ್ಯಾಜ್ಯಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಈ ನಿಟ್ಟಿನಲ್ಲಿ ವಿನೂತನ ಕಾರ್ಯದ ಮೂಲಕ ಹೊಸ ನಿರ್ಧಾರಕ್ಕೆ ಬಂದಿದೆ.
ಹುಬ್ಬಳ್ಳಿಯ ಕಾರವಾರ ರಸ್ತೆಯ ಕೆಂಪಗೇರಿ ಮತ್ತು ಧಾರವಾಡದ ಹೊಸ ಯಲ್ಲಾಪುರದ ತ್ಯಾಜ್ಯ ಘಟಕದಲ್ಲಿ ವರ್ಷಗಳಿಂದ ಗುಡ್ಡದಂತೆ ಸಂಗ್ರಹವಾಗಿರುವ ತ್ಯಾಜ್ಯದ ವಿಲೇವಾರಿಗೆ ಪಾಲಿಕೆ ಟೆಂಡರ್ ಕರೆದಿದೆ. ಕೆಂಪಗೇರಿ ಘಟಕದಲ್ಲಿರುವ ಅಂದಾಜು 3.6 ಲಕ್ಷ ಟನ್ ಹಳೆಯ ತ್ಯಾಜ್ಯ ತೆರವಿಗೆ 22.70 ಕೋಟಿ ಮತ್ತು ಹೊಸ ಯಲ್ಲಾಪುರದಲ್ಲಿರುವ 1.2 ಲಕ್ಷ ಟನ್ ತ್ಯಾಜ್ಯ ತೆರವಿಗೆ 7.15 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ.

ಇನ್ನೂ ವಿಲೇವಾರಿ ಘಟಕದ ಹೆಚ್ಚಿನ ಜಾಗವನ್ನು ಅತಿಕ್ರಮಿಸಿದ್ದ ವಿಲೇವಾರಿಯಾಗದ ತ್ಯಾಜ್ಯದ ತೆರವಿಗಾಗಿ ಸಿದ್ಧ ಪಡಿಸಿದ್ದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ರಾಜ್ಯ ಸರ್ಕಾರದ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿತ್ತು. ಹಳೆಯ ತ್ಯಾಜ್ಯದಲ್ಲಿರುವ ಪ್ಲಾಸ್ಟಿಕ್ ಸೇರಿದಂತೆ ಆರ್ಡಿಎಫ್ (ತ್ಯಾಜ್ಯದಿಂದ ಸಿಗುವ ಇಂಧನ) ವಸ್ತುಗಳನ್ನು ಸಿಮೆಂಟ್ ಕಾರ್ಖಾನೆಗಳಿಗೆ ಕಳಿಸಲಾಗುವುದು.
ಕಟ್ಟಡ ಅವಶೇಷಗಳನ್ನು ವಿಂಗಡಿಸಿ ಬೇರೆ ಕಡೆಗೆ ಸಾಗಿಸಲಾಗುವುದು. ತಗ್ಗು ಪ್ರದೇಶಗಳಿಗೂ ಹಾಕಲಾಗುವುದು. ತ್ಯಾಜ್ಯ ತೆರವಾದ ಬಳಿಕ, ಆ ಜಾಗವನ್ನು ಕೆಲ ವರ್ಷ ಹಾಗೆಯೇ ಬಿಟ್ಟು, ನಂತರ ಆ ಜಾಗವನ್ನು ಇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಧಾರವಾಡದ 16 ಎಕರೆಯಲ್ಲಿ ಮತ್ತು ಹುಬ್ಬಳ್ಳಿಯಲ್ಲಿ 19 ಎಕರೆ 15 ಗುಂಟೆ ಜಾಗದಲ್ಲಿ ಹಳೆಯ ತ್ಯಾಜ್ಯ ಹರಡಿ ಕೊಂಡಿದೆ. ಹುಬ್ಬಳ್ಳಿ ತ್ಯಾಜ್ಯ ತೆರವಿಗೆ 15 ತಿಂಗಳು ಮತ್ತು ಧಾರವಾಡದ ತ್ಯಾಜ್ಯವನ್ನು 11 ತಿಂಗಳಲ್ಲಿ ತೆರವು ಮಾಡಲು ಕಾಲಾವಕಾಶ ನಿಗದಿಪಡಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications