ಮಸ್ಲಿಮರು ಹೀಗೆ ಮಾಡಿರದಿದ್ದರೆ ಭಾರತದಲ್ಲಿ 'ಹಿಂದೂ ಬಾವುಟ' ಹಾರುತ್ತಿರಲಿಲ್ಲ: ಸಂತೋಷ್ ಲಾಡ್
ಹುಬ್ಬಳ್ಳಿ, ಏಪ್ರಿಲ್ 15: ಚುನಾವಣಾ ಕಾರ್ಯದಲ್ಲಿರುವ ರಾಜಕೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ, ತಿರುಗೇಟು ಕೊಡುವುದು ಸಾಮಾನ್ಯ. ಆದರೆ ಹುಬ್ಬಳ್ಳಿಯ ಕಾರ್ಯಕ್ರಮವೊಂದಲ್ಲಿ ದೇಶ ವಿಭಜನೆಯ ಇತಿಹಾಸ ನೆನಪಿಸಿ, ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದು ಕಂಡು ಬಂತು.
ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ದೇಶ ವಿಭಜನೆ ಆದಾಗ ಮುಸ್ಲಿಮರು ಭಾರತ ಬಿಟ್ಟು ಹೋಗದಿದ್ದರೆ, ಈ ದೇಶದಲ್ಲಿ ಹಿಂದೂ ಬಾವುಟ ಹಾರುತ್ತಿರಲಿಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಬಸವಣ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಭಾರತದ ವಿಭಜನೆ ಸಂದರ್ಭದಲ್ಲಿ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ, ದೇಶ ಒಡೆಯಲು ನೆಹರೂ ಕಾರಣ ಎಂದು ಬಿಜೆಪಿಗರು ಪದೇಪದೆ ಹೇಳುತ್ತಾರೆ.
ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ
ಅಲ್ಲದೇ ಆಗಾಗ ಮಹಾತ್ಮ ಗಾಂಧೀಜಿ ಅವರನ್ನು ಸಹ ಬೈಯ್ಯುತ್ತಿರುತ್ತಾರೆ. ಸ್ವಾತಂತ್ರ ಸಿಕ್ಕ ಸಂದರ್ಭದಲ್ಲಿ ದೇಶ ವಿಭಜನೆಯಾದಾಗ ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಗುರುತಿಸಿಕೊಂಡಿತು. ಆಗ ಭಾರತದಲ್ಲಿದ್ದ ಮುಸಲ್ಮಾನರು ಅಲ್ಲಿಗೆ ತೆರಳಿದರು. ಅಲ್ಲಿಗೆ ಅವರು ಹೋದರೆ ನಿಮಗೇನು ತೊಂದರೆ' ಎಂದು ಸಂತೋಷ್ ಲಾಡ್ ಬಿಜೆಪಿಗೆ ಪ್ರಶ್ನಿಸಿದರು.
ಚುನಾವಣೆಗಳು ಎದುರಾದ ಸಂದರ್ಭದಲ್ಲಿ ಮುಸ್ಲಿಮರ ಬಗ್ಗೆ, ಶ್ರೀರಾಮನ ಬಗ್ಗೆ ಮಾತನಾಡಿ ಮತ ಯಾಚಿಸಬೇಡಿ. ಮಾಡಿರುವ ಅಭಿವೃದ್ಧಿ ಕಾರ್ಯಗಳೇನು? ಎಂಬುದನ್ನು ದೇಶದ ಮತದಾರರ ಮುಂದೆ ಇಟ್ಟು ಮತಯಾಚಿರಬೇಕು ಎಂದರು.

ಕೊಟ್ಟ ಭರವಸೆಗಳು ಏನಾದವು?
ಇನ್ನೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವೀಸ್ ಬ್ಯಾಂಕ್ನಲ್ಲಿ ಇಟ್ಟಿದ್ದ ಹಣ ತರುತ್ತೇವೆ. ಬಡವರ ಖಾತೆಗೆ ರೂಪಾಯಿ 15 ಲಕ್ಷ ಜಮಾ ಮಾಡುತ್ತೇವೆ. ದೇಶದಲ್ಲಿ ನಿರುದ್ಯೋಗ ಹೋಗಲಾಡಿಸಲು ಉದ್ಯೋಗ ಸೃಷ್ಟಿಸುತ್ತೇವೆ ಎಂದೆಲ್ಲ ಬಿಜೆಪಿಯವರು ಆಶ್ವಾಸನೇ ನೀಡಿದ್ದೀರಿ. ಅವೆಲ್ಲವು ಏನಾಯಿತು?. ಪ್ರಧಾನಿ ನರೇಂದ್ರ ಮೋದಿಯವರೇ ಇನ್ನು ಮುಂದಾದರೂ ಸುಳ್ಳು ಹೇಳುವುದನ್ನು ಬಿಡಿ' ಎಂದು ಅವರು ಒತ್ತಾಯಿಸಿದರು.
ಪ್ರಸಾದ್ ಅಬ್ಬಯ್ಯ ಎಚ್ಚರಿಕೆ
ನಗರದಲ್ಲಿ ನಡೆದ ವಿಶ್ವ ಮಾನವರ ದಿನಾಚರಣೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯಾ ಅವರು, ಸಂವಿಧಾನ ಮುಟ್ಟಿದರೆ ನೀವು ಸುಟ್ಟು ಭಸ್ಮ ಆಗುತ್ತೀರಿ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದರು.
ಕೆಲವೊಬ್ಬರು ಬರೀ ಸಂವಿಧಾನ ಬದಲಾಯಿಸುವ ಕುರಿತು ಮಾತಾಡುತ್ತಿದ್ದಾರೆ. ಆದರೆ, ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆಗೆ ಕೈಹಾಕಿದರೆ ಸುಟ್ಟು ಭಸ್ಮ ಆಗುತ್ತಾರೆ ಎಂದು ಅವರು ಪುನರುಚ್ಚರಿಸಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಶೋಷಿತ ಜನಾಂಗಕ್ಕೆ ಜೀವನ ಮುಡುಪಾಗಿಟ್ಟಿದ್ದರು. ಸಂವಿಧಾನ ಬದಲಾಯಿಸ್ತೇವೆ ಎನ್ನುವ ಭೂಪರಿಗೆ ತಕ್ಕ ಉತ್ತರ ಕೊಡಬೇಕು. ಸಂವಿಧಾನ ವಿರೋಧಿ ಹೇಳಿಕೆ ಕೊಡುವವರನ್ನು ಸಂತೋಷ್ ಲಾಡ್ ನಾಶ ಮಾಡುತ್ತಾರೆ ಎಂದರು.
ಸಂತೋಷ್ ಲಾಡ್ ಬಗ್ಗೆ ಶಾಸಕ ವಿಶ್ವಾಸ
ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡುಗು ಮಿಂಚಿನ ರೀತಿಯಲ್ಲಿ ಓಡಾಡುತ್ತಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್, ವಾಲ್ಮೀಕಿ ಫೋಟೋ ಹೊರಗೆ ಹಾಕಲಾಗಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಮನಸ್ಥಿತಿ ಏನು ಎಂದು ಇದರಿಂದಲೇ ಗೊತ್ತಾಗುತ್ತದೆ. ಸಂವಿಧಾನ ಉಳಿಯಬೇಕಾದ್ರೆ ವಿನೋದ್ ಅಸೂಟಿಯಂಥವರು ಗೆಲ್ಲಬೇಕು ಎಂದು ಅವರು ಮತದಾರರಲ್ಲಿ ಮನವಿ ಮಾಡಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications