ಎಚ್ಡಿಕೆಗೆ ಡಿಕೆಶಿ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ : ಪ್ರಹ್ಲಾದ್ ಜೋಶಿ ವ್ಯಂಗ್ಯ
ಹುಬ್ಬಳ್ಳಿ, ಜೂನ್ 23: ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಚಿವ ಡಿಕೆಶಿವಕುಮಾರ್ ಮೇಲೆ ಇದ್ದಕ್ಕಿಂದ್ದಂತೆ ಪ್ರೀತಿ ಹೆಚ್ಚಾಗಿಬಿಟ್ಟಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ , ಡಿಕೆಶಿ ಅವರ ಮೇಲಿನ ಐಟಿ ರೇಡ್ ಕುರಿತು ಮಾತನಾಡಿದ ಅವರು, ಸಚಿವ ಡಿಕೆ ಶಿವಕುಮಾರ್ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದರು.
ಡಿಕೆಶಿ ಮೇಲೆ ಐಟಿ ದಾಳಿ: ಬಿಜೆಪಿ ಮುಖಂಡರ ಮೌನದ ಹಿಂದಿನ ಮರ್ಮವೇನು?
ನೂರಾರು ಶಾಸಕರನ್ನು ರೆಸಾರ್ಟ್ಗಳಿಗೆ ಕರೆದುಕೊಂಡು ಹೋಗಿ ನೋಡಿಕೊಂಡಾಗ ಮಾಡಿದ ಖರ್ಚಿನ ಹಣ ಎಲ್ಲಿಂದ ಬಂತು. ಕಾಂಗ್ರೆಸ್ನಲ್ಲಿ ಹೈಕಮಾಂಡ್ಗೆ ಕಪ್ಪ ನೀಡುವ ಪರಿ ಇದೆ ಎಂಬುದು ಕೂಡಾ ಡೈರಿಯಿಂದ ಗೊತ್ತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೋಟ್ಯಂತರ ಹಣ ಖರ್ಚು ಮಾಡಿ ಶಾಸಕರನ್ನು ರೆಸಾರ್ಟ್ ಯಾತ್ರೆ ಮಾಡಿಸಿ, ಅವರನ್ನೆಲ್ಲಾ ಒತ್ತಡ ಹಾಕಿ ಹಿಡಿದಿಟ್ಟು ಕುಮಾರಸ್ವಾಮಿಗೆ ಮುಖ್ಯಮಂತ್ರಿ ಪಟ್ಟ ಕೊಡಿಸಿರುವುದಕ್ಕೆ ಎಚ್ಡಿಕೆ ಅವರಿಗೆ ಈಗ ಡಿ.ಕೆ.ಶಿವಕುಮಾರ್ ಅವರ ಮೇಲೆ ಪ್ರೀತಿ ಉಕ್ಕಿಬಂದಿದೆ ಎಂದು ಅವರು ಹೇಳಿದರು.
ಹೈಕಮಾಂಡ್ಗೆ ಹಣ ನೀಡಿಲ್ಲ, ಹವಾಲಾ ಬಗ್ಗೆ ಗೊತ್ತೇ ಇಲ್ಲ: ಡಿಕೆಶಿ
ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದಕ್ಕೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಷಿ ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಮಾಡಿದಷ್ಟು ದ್ವೇಷದ ರಾಜಕಾರಣ ಇನ್ನಾರೂ ಮಾಡಿಲ್ಲ ಎಂದರು.