ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಾಭಿಮಾನ ಕೆರಳಿಸಿದರು ಎಂದು ಮತ್ತೆ ಮಾತಿನ ಸಮರಕ್ಕಿಳಿದ ಡಿಕೆಶಿ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್ 2: "ಅನರ್ಹರು ಮತದಾರರ ಸ್ವಾಭಿಮಾನವನ್ನು ಕೆರಳಿಸಿದ್ದಾರೆ. ಯಾರು ಕೂಡ ಇವರಿಗೆ ರಾಜೀನಾಮೆ ಕೊಡಲು ಹೇಳಲಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ದಿನ ರಾಜಕೀಯದಲ್ಲಿ ಅವರು ಮಾಡಿರುವುದಾರು ಏನು? ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅನರ್ಹರ ವಿರುದ್ಧ ವಾಗ್ದಾಳಿ ನಡೆಸಿದರು.

ಡಿಕೆಶಿಗೆ ಐಟಿ ನೋಟಿಸ್, ಹುಬ್ಬಳ್ಳಿಯಿಂದ ತುರ್ತಾಗಿ ವಾಪಸ್!ಡಿಕೆಶಿಗೆ ಐಟಿ ನೋಟಿಸ್, ಹುಬ್ಬಳ್ಳಿಯಿಂದ ತುರ್ತಾಗಿ ವಾಪಸ್!

ನಗರದಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, "ಮತದಾರರು ಅನರ್ಹರ ವಿರುದ್ಧ ಮತ ಹಾಕುತ್ತಾರೆ. ಡಿಸೆಂಬರ್ 9ರ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈಗಾಗಲೇ ಮಹಾರಾಷ್ಟ್ರ, ಹರಿಯಾಣದಲ್ಲಿ ಏನಾಗಿದೆ ನೋಡಿದ್ದೇವೆ. ಕರ್ನಾಟಕ ಚುನಾವಣೆಯಲ್ಲಿ ಕೂಡ ಏನು ಬೇಕಾದರೂ ಬದಲಾವಣೆ ಆಗಬಹುದು" ಎಂದರು.

DK Shivakumar Speak Against Disqualified Members In Hubballi

ಜಾರಿ ನಿರ್ದೇಶನಾಲಯದ ವಿಚಾರಣೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, "ಐಟಿ ಹಾಗೂ ಇಡಿ ಇಲಾಖೆಗೆ ಸ್ವಲ್ಪ ಸಮಯಾವಕಾಶ ಕೇಳಿದ್ದೇನೆ. ಆದರೆ ಅವರು ಇಂದೇ ಹಾಜರಾಗಬೇಕು ಎನ್ನುತ್ತಿದ್ದಾರೆ. ನನಗೆ ಉಸಿರಾಡಲು ಬಿಡಿ ಎಂದು ಮನವಿ ಮಾಡಿದ್ದೇನೆ. ನಾನೂ ಕಾನೂನಾತ್ಮಕವಾಗಿ ಎಲ್ಲವನ್ನೂ ತಿಳಿದುಕೊಳ್ಳಬೇಕಾಗಿದೆ. ಆದರೆ ಕಾನೂನು ಅವರ ಕೈಯಲ್ಲಿದೆ. ಏನು ಬೇಕಾದರೂ ಮಾಡುತ್ತಾರೆ. ನಾವು ಏನೂ ಮಾಡಲು ಆಗುವುದಿಲ್ಲ" ಎಂದು ಬೇಸರ ವ್ಯಕ್ತಪಡಿಸಿದರು.

English summary
"No one told Disqualified members to resign. But they resigned in the name of development. what they did till now in the politics" questioned DK Shivakumar to disqualified members in hubballi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X