ಡಿಕೆಶಿ ತರಹ ಲೀಡರ್ ಆಗ್ಬೇಕು ಅಂದ್ರೆ ಕಾರ್ಯಕರ್ತರು ಏನ್ಮಾಡ್ಬೇಕು?
Recommended Video
ಹುಬ್ಬಳ್ಳಿ, ಮೇ 8:ಕ್ಷೇತ್ರದ ಪ್ರತಿ ಮತಗಟ್ಟೆಗಳಲ್ಲಿ ಲೀಡ್ ತಂದು ಕೊಟ್ಟವರು ನನ್ನ ತರಹ ಲೀಡರ್ ಆಗುತ್ತಾರೆ ಎಂದು ಸಚಿವ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.
ಪ್ರಚಾರದ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಬಿಳಿಬಟ್ಟೆ ತೊಟ್ಟಾಕ್ಷಣ ಯಾರು ಲೀಡರ್ ಆಗಲು ಸಾದ್ಯವಿಲ್ಲ, ಬೂತ್ಗಳಿಂದ ಲೀಡ್ ತಂದುಕೊಡಬೇಕು ಎಂದು ಕುಂದಗೋಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹೇಳಿದರು.
ಬಿಳಿ ಬಟ್ಟೆ ತೊಟ್ಟು ನನ್ನ ಜೊತೆ ಬಂದರೆ ನಾನು ಅವರನ್ನು ನಂಬುದುವುದಿಲ್ಲ. ಯಾರು ಏನೇ ಹೇಳಿದರು ನೀವು ಎಲ್ಲರ ಮನೆಗೆ ಹೋಗಿ ಪ್ರಚಾರ ಮಾಡಲೇಬೇಕು. ಕ್ಷೇತ್ರದಲ್ಲಿ ಕುಸುಮಾ ಶಿವಳ್ಳಿಯವರನ್ನ ಗೆಲ್ಲಿಸುವುದು ನಮ್ಮ ಜವಾಬ್ದಾರಿ ಎಂದರು.

ಬಿಜೆಪಿಯ ಸ್ಥಳೀಯ ನಾಯಕರಿಗೆ ಆಹ್ವಾನ ಕೊಡುತ್ತೇನೆ, ನಮ್ಮ ಪಕ್ಷದ ಜೊತೆಗೆ ನೀವು ಕೈ ಜೋಡಿಸಬೇಕು ಎಂದರು. ಈ ಚುನಾವಣೆ ನಡೆಯುತ್ತಿರುವುದು, ಮೋದಿಗಾಗಿ ಅಲ್ಲ. ಇಲ್ಲಿ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಅಭ್ಯರ್ಥಿಗಳಲ್ಲ.
ಇಲ್ಲಿ ನಡೆಯುತ್ತಿರುವುದು ಸಿ.ಎಸ್.ಶಿವಳ್ಳಿಯವರ ಚುನಾವಣೆ, ಅವರು ಮಾಡಿದ ಅಭಿವೃದ್ಧಿ ಕೆಲಸಗಳನ್ನ ಇಟ್ಟುಕೊಂಡು ಚುನಾವಣೆ ಮಾಡುತ್ತೇವೆ. ಮತ ಕೇಳುತ್ತಿದ್ದೇವೆ ಎಂದು ನುಡಿದರು.












Click it and Unblock the Notifications