ಹುಬ್ಬಳ್ಳಿಯಲ್ಲಿ ಸುಪ್ರೀಂ ಕೋರ್ಟ್ ವಕೀಲರಿಂದ 2.40 ಲಕ್ಷ ರೂ. ಜಪ್ತಿ
ಹುಬ್ಬಳ್ಳಿ, ಮಾರ್ಚ್ 18: ಸೂಕ್ತ ದಾಖಲೆ ಇಲ್ಲದೆ ಸುಪ್ರೀಂ ಕೋರ್ಟ್ ವಕೀಲರೊಬ್ಬರು ತೆಗೆದುಕೊಂಡು ಹೋಗುತ್ತಿದ್ದ 2.40 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದೆಹಲಿ ಮೂಲದ ಸುಪ್ರೀಂ ಕೋರ್ಟ್ ವಕೀಲ ನಿತಿನ್ ದೇವರಾಜ ಅವರಿಂದ ಹಣ ಜಪ್ತಿ ಮಾಡಲಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಇವರು, ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ದೆಹಲಿಗೆ ತೆರಳುತ್ತಿದ್ದರು.
ಅವರ ಬಳಿ ಸೂಕ್ತ ದಾಖಲಾತಿಗಳಿಲ್ಲದ 2.40 ಲಕ್ಷ ರೂ. ನಗದು ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಚುನಾವಣಾಧಿಕಾರಿ ರಮೇಶ ದೇಸಾಯಿ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ನ ಯತ್ನಳ್ಳಿ ಸಿಬ್ಬಂದಿಯೊಂದಿಗೆ ವಿಮಾನ ನಿಲ್ದಾಣಕ್ಕೆ ತೆರಳಿ ವಕೀಲರನ್ನು ಪರಿಶೀಲನೆಗೊಳಪಡಿಸಿದಾಗ ಹಣ ಪತ್ತೆಯಾಗಿದೆ.

ಪತ್ತೆಯಾಗಿರುವ ಹಣದ ಬಗ್ಗೆ ಸೂಕ್ತ ದಾಖಲಾತಿಗಳಿಲ್ಲದ ಕಾರಣ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿ ಆದಾಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ
ವರದಕ್ಷಿಣೆ ತರಲು ತಡಮಾಡಿದಳೆಂಬ ಕಾರಣಕ್ಕೆ ಪಾಪಿ ಪತಿಯೊಬ್ಬ ತವರಿಗೆ ಬಂದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಹುಬ್ಬಳಿಯ ಆನಂದ ನಗರದಲ್ಲಿ ನಡೆದಿದೆ.
ಹಳೆಹುಬ್ಬಳ್ಳಿಯ ಆನಂದನಗರದ ಯುವತಿವೋರ್ವಳನ್ನು ಐದು ವರ್ಷಗಳ ಹಿಂದೆ ಷರೀಫ್ ಎಂಬುವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಆದ್ರೆ ಪತಿ ಹಾಗೂ ಆತನ ಮನೆಯವರು ವರದಕ್ಷಿಣೆಗಾಗಿ ಪ್ರತಿನಿತ್ಯವೂ ಪೀಡಿಸುತ್ತಿದ್ದರು.
ಕಳೆದ ಎರಡು ದಿನಗಳ ಹಿಂದೆ ಪತಿ ವರದಕ್ಷಿಣೆ ತರುವಂತೆ ಪತ್ನಿಯನ್ನು ತವರುಮನೆಗೆ ಕಳುಹಿಸಿದ್ದ. ಆದ್ರೆ ತವರಿಗೆ ಬಂದ ಪತ್ನಿ ವರದಕ್ಷಿಣೆ ತರಲು ತಡ ಮಾಡಿದಕ್ಕೆ ತವರು ಮನೆಗೇ ಬಂದ ಪತಿ, ಹೆಂಡತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಗಾಯಗೊಂಡಿರುವ ಮಹಿಳೆಯನ್ನು ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ದಾಖಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications