ಉದ್ಯಮಗಳು ಬೆಳೆದರೆ ಯವಕರಿಗೆ ಹೆಚ್ಚಿನ ಉದ್ಯೋಗಗಳು: ಶೆಟ್ಟರ್
ಹುಬ್ಬಳ್ಳಿ,ಡಿಸೆಂಬರ್. 04 : ಕರ್ನಾಟಕದಲ್ಲಿ ಹೆಚ್ಚು ಉದ್ಯಮಗಳು ಬೆಳೆದರೆ ಯವಕರಿಗೆ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ, ವಿರೋದ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತ ಸಹಯೋಗದಲ್ಲಿ ಏರ್ಪಡಿಸಲಾಗಿರುವ ಇನ್ಕಾಮೆಕ್ಸ್-2016 ಬೃಹತ್ ಕೈಗಾರಿಕೆ ವಸ್ತು ಪ್ರದರ್ಶನ ಹಾಗೂ ಮಳಿಗೆಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಜಗದೀಶ್ ಶೆಟ್ಟರ್ ಅವರು,
'ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗೆ ಪೂರಕವಾದ ವಾತಾವರಣವಿದ್ದು ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಕೈಗಾರಿಕೆಗಳು ಆರಂಭವಾಗಬೇಕಿದೆ' ಎಂದರು.

ಕೈಗಾರಿಕಾ ವಸ್ತು ಪ್ರರ್ದಶನಕ್ಕಾಗಿ ಶಾಶ್ವತ ಜಾಗವಿದ್ದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯವರು ನಿರಂತರವಾಗಿ ಕೈಗಾರಿಕಾ ವಸ್ತು ಪ್ರರ್ದಶನಗಳನ್ನು ಹಮ್ಮಿಕೊಳ್ಳಬೇಕು. ಇದಕ್ಕಾಗಿ ಸರಕಾರದಿಂದ ಸಿಗುವ ನೆರವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.
ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ದೇಶದ ಆರ್ಥಿಕತೆಯಲ್ಲಿ ಸಣ್ಣ ಹಾಗೂ ಮದ್ಯಮ ಕೈಗಾರಿಕೆಗಳ ಕೊಡುಗೆ ಅಪಾರವಾಗಿದೆ. ಇಂತಹ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ಸಿಗಬೇಕು.

ಇಂದು ಭಾರತ ಜಾಗತಿಕವಾಗಿ ಪ್ರಬಲ ರಾಷ್ಟ್ರವಾಗಿ ರೂಪಗೊಳ್ಳುತ್ತಿದ್ದು ಬ್ರಿಕ್ಸ ಹಾಗೂ ಜಿ-20 ರಾಷ್ರ್ಟಗಳ ಗುಂಪಿನಲ್ಲಿ ಅಗ್ರಗಣ್ಯವಾಗಿದೆ.
ಮೇಕ್ ಇನ್ ಇಂಡಿಯಾ ಹಾಗು ಸ್ಟಾರ್ಟ ಅಪ್ ನಂತಹ ಕಾರ್ಯಕ್ರಮಗಳು ಕೈಗಾರಿಕೆ ಅಭಿವೃದ್ದಿಗೆ ಸಹಾಯಕವಾಗಿವೆ. ಹುಬ್ಬಳ್ಳಿ-ಧಾರವಾಡವನ್ನು ಕೈಗಾರಿಕಾ ಸ್ನೇಹಿ ನಗರವನ್ನಾಗಿ ಬಿಂಬಿಸುವ ಕೆಲಸವನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸೆ ಮಾಡಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಇನ್ಕಾಮೆಕ್ಸ್-2016ನ ಅಂಗವಾಗಿ ಬಿಎಸ್ಎನ್ ಎಲ್ ಒದಗಿಸಿರುವ ಉಚಿತ ವೈಪೈ ಸೌಲಭ್ಯ ಸಹ ಉದ್ಘಾಟಿಸಲಾಯಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications