ಮಳೆಯಿಂದ ಇಳುವರಿ ಕುಂಠಿತ: ಸೂಕ್ತ ಪರಿಹಾರಕ್ಕಾಗಿ ಹುಬ್ಬಳ್ಳಿ ರೈತರ ಒತ್ತಾಯ
ಹುಬ್ಬಳ್ಳಿ, ನವೆಂಬರ್ 14: ಪ್ರಸಕ್ತ ಸಾಲಿನಲ್ಲಿ ಅತಿಯಾದ ಮಳೆಯಿಂದ ರೈತರು ಬೆಳೆದ ಬೆಳೆಯ ಫಸಲಿನ ತೆನೆಗಳು ಕಾಳು ಹಿಡಿಯದೇ ಇಳುವರಿ ಕುಂಠಿತಗೊಂಡು ರೈತ ಸಮುದಾಯ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಬೆಳೆಹಾನಿ ಸಮೀಕ್ಷೆಗೆ ಬಂದ ರಾಜ್ಯ ತಂಡದ ಬಳಿ ಅಳಲು ತೋಡಿಕೊಂಡರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ಹಾಗೂ ಉಡುಪಿಯ ತೋಟಗಾರಿಕೆ ಉಪ ನಿರ್ದೇಶಕಿ ಭುವನೇಶ್ವರಿ ಅವರ ನೇತೃತ್ವದ ತಂಡ ಹುಬ್ಬಳ್ಳಿ ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ನಡೆಸಿದರು.

ಹುಬ್ಬಳ್ಳಿ ತಾಲೂಕಿನಲ್ಲಿ ಹೆಚ್ಚಿನ ರೈತರು ಗೋವಿನ ಜೋಳ, ಸೋಯಾಬಿನ್ ಬೆಳೆ ಬೆಳೆದಿದ್ದು, ಅತಿಯಾದ ಮಳೆಯಿಂದ ಸರಿಯಾಗಿ ಕಾಳು ಕಟ್ಟದೇ ರೈತರು ಬಿತ್ತನೆ ಮಾಡಲು ಖರ್ಚು ಮಾಡಿದಷ್ಟು ಕೂಡಾ ಬಾರದ ಪರಿಸ್ಥಿತಿ ಬಂದಿದೆ. ಪಸಲು ಬಾರದೇ ರೈತರು ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಬಂದಿದೆ ಎಂದು ರೈತರು ನೋವು ತೋಡಿಕೊಂಡರು. ಬೆಳೆ ಹಾನಿ ವರದಿಯನ್ನು ಸರ್ಕಾರಕ್ಕೆ ಪಾರದರ್ಶಕವಾಗಿ ಸಲ್ಲಿಸಿ ಪರಿಹಾರ ಒದಗಿಸಿ ಎಂದು ತಂಡದ ಬಳಿ ರೈತರು ಮನವಿ ಮಾಡಿದರು.
ದುಮ್ಮವಾಡ, ಕಲಘಟಗಿ ಹಾಗೂ ತಬಕದ ಹೊನ್ನಳ್ಳಿ ಹೋಬಳಿಯ ವಿವಿಧ ರೈತರ ಗೋವಿನ ಜೋಳ ಹಾಗೂ ಭತ್ತದ ಜಮೀನುಗಳಿಗೆ ತೆರಳಿದ ಬೆಳೆ ಹಾನಿ ಸಮೀಕ್ಷೆ ತಂಡ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
ತಂಡದ ಮಮತಾ ಮಾತನಾಡಿ, 'ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಧಾರವಾಡ ಜಿಲ್ಲೆಯಲ್ಲಿ ಅತೀ ಹೆಚ್ಚು ಬೆಳೆ ಹಾನಿ ದಾಖಲಿಸಿದ್ದು, ಐದು ಪ್ರತ್ಯೇಕ ತಂಡ ರಚಿಸಿ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಲಾಗುತ್ತಿದೆ. ಕೃಷಿ ಹಾಗೂ ತೋಟಗಾರಿಗೆ ಎರಡು ಬೆಳೆ ಹಾನಿ ಕುರಿತು ಸಮೀಕ್ಷೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲೆ ಸುಮಾರು 67 ಸಾವಿರ ಹೆಕ್ಟೇರ್ ಬೆಳೆ ಹಾನಿ ಆದ ವರದಿ ಬಂದಿದೆ. ತಾಲೂಕಿನ ಬೆಳೆ ಹಾನಿ ಸಂಭವಿಸಿದ ಕುರಿತು ರೈತರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ' ಎಂದು ಹೇಳಿದರು.
ಈ ವೇಳೆ ಧಾರವಾಡ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತಹಶೀಲ್ದಾರ್ ವೀರೇಶ ಮುಳುಗುಂದಮಠ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಅಮರ ನಾಯಕ, ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ವೈ.ಆಸಂಗಿ, ಪ್ರಭಾರ ಕೃಷಿ ಅಧಿಕಾರಿ ಎಂ.ಸಿ.ಕುಮಚಗಿ, ಕಂದಾಯ ಅಧಿಕಾರಿ ಧ್ರುವಕುಮಾರ ಹೊಸಳ್ಳಿ, ಗ್ರಾಮ ಲೆಕ್ಕಾಧಿಕಾರಿ ಸಂತೋಷ ಲಮಾಣಿ ಉಪಸ್ಥಿತರಿದ್ದರು. ರೈತರಾದ ಬಸನಗೌಡ ಸಿದ್ದನಗೌಡ್ರ, ಶಿವು ತಡಸ, ಸಹದೇವಪ್ಪ ನೂಲ್ವಿ, ಕಲ್ಲಪ್ಪ ಕುರಟ್ಟಿ, ಜಗದೀಶ ಡೊಳ್ಳಿನ, ಭೀಮಪ್ಪ ಬಂಡಿವಡ್ಡರ, ಶಿವಯ್ಯ ಹಿರೇಮಠ, ಧರ್ಮು ತಡಸ, ಸಿದ್ದಪ್ಪ ಗೋವಿಂದ ಕೂಡ ಇದ್ದರು.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು











Click it and Unblock the Notifications