ಮಳೆಯಿಂದ ಇಳುವರಿ ಕುಂಠಿತ: ಸೂಕ್ತ ಪರಿಹಾರಕ್ಕಾಗಿ ಹುಬ್ಬಳ್ಳಿ ರೈತರ ಒತ್ತಾಯ
ಹುಬ್ಬಳ್ಳಿ, ನವೆಂಬರ್ 14: ಪ್ರಸಕ್ತ ಸಾಲಿನಲ್ಲಿ ಅತಿಯಾದ ಮಳೆಯಿಂದ ರೈತರು ಬೆಳೆದ ಬೆಳೆಯ ಫಸಲಿನ ತೆನೆಗಳು ಕಾಳು ಹಿಡಿಯದೇ ಇಳುವರಿ ಕುಂಠಿತಗೊಂಡು ರೈತ ಸಮುದಾಯ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಬೆಳೆಹಾನಿ ಸಮೀಕ್ಷೆಗೆ ಬಂದ ರಾಜ್ಯ ತಂಡದ ಬಳಿ ಅಳಲು ತೋಡಿಕೊಂಡರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ಹಾಗೂ ಉಡುಪಿಯ ತೋಟಗಾರಿಕೆ ಉಪ ನಿರ್ದೇಶಕಿ ಭುವನೇಶ್ವರಿ ಅವರ ನೇತೃತ್ವದ ತಂಡ ಹುಬ್ಬಳ್ಳಿ ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ನಡೆಸಿದರು.

ಹುಬ್ಬಳ್ಳಿ ತಾಲೂಕಿನಲ್ಲಿ ಹೆಚ್ಚಿನ ರೈತರು ಗೋವಿನ ಜೋಳ, ಸೋಯಾಬಿನ್ ಬೆಳೆ ಬೆಳೆದಿದ್ದು, ಅತಿಯಾದ ಮಳೆಯಿಂದ ಸರಿಯಾಗಿ ಕಾಳು ಕಟ್ಟದೇ ರೈತರು ಬಿತ್ತನೆ ಮಾಡಲು ಖರ್ಚು ಮಾಡಿದಷ್ಟು ಕೂಡಾ ಬಾರದ ಪರಿಸ್ಥಿತಿ ಬಂದಿದೆ. ಪಸಲು ಬಾರದೇ ರೈತರು ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಬಂದಿದೆ ಎಂದು ರೈತರು ನೋವು ತೋಡಿಕೊಂಡರು. ಬೆಳೆ ಹಾನಿ ವರದಿಯನ್ನು ಸರ್ಕಾರಕ್ಕೆ ಪಾರದರ್ಶಕವಾಗಿ ಸಲ್ಲಿಸಿ ಪರಿಹಾರ ಒದಗಿಸಿ ಎಂದು ತಂಡದ ಬಳಿ ರೈತರು ಮನವಿ ಮಾಡಿದರು.
ದುಮ್ಮವಾಡ, ಕಲಘಟಗಿ ಹಾಗೂ ತಬಕದ ಹೊನ್ನಳ್ಳಿ ಹೋಬಳಿಯ ವಿವಿಧ ರೈತರ ಗೋವಿನ ಜೋಳ ಹಾಗೂ ಭತ್ತದ ಜಮೀನುಗಳಿಗೆ ತೆರಳಿದ ಬೆಳೆ ಹಾನಿ ಸಮೀಕ್ಷೆ ತಂಡ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
ತಂಡದ ಮಮತಾ ಮಾತನಾಡಿ, 'ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಧಾರವಾಡ ಜಿಲ್ಲೆಯಲ್ಲಿ ಅತೀ ಹೆಚ್ಚು ಬೆಳೆ ಹಾನಿ ದಾಖಲಿಸಿದ್ದು, ಐದು ಪ್ರತ್ಯೇಕ ತಂಡ ರಚಿಸಿ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಲಾಗುತ್ತಿದೆ. ಕೃಷಿ ಹಾಗೂ ತೋಟಗಾರಿಗೆ ಎರಡು ಬೆಳೆ ಹಾನಿ ಕುರಿತು ಸಮೀಕ್ಷೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲೆ ಸುಮಾರು 67 ಸಾವಿರ ಹೆಕ್ಟೇರ್ ಬೆಳೆ ಹಾನಿ ಆದ ವರದಿ ಬಂದಿದೆ. ತಾಲೂಕಿನ ಬೆಳೆ ಹಾನಿ ಸಂಭವಿಸಿದ ಕುರಿತು ರೈತರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ' ಎಂದು ಹೇಳಿದರು.
ಈ ವೇಳೆ ಧಾರವಾಡ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತಹಶೀಲ್ದಾರ್ ವೀರೇಶ ಮುಳುಗುಂದಮಠ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಅಮರ ನಾಯಕ, ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ವೈ.ಆಸಂಗಿ, ಪ್ರಭಾರ ಕೃಷಿ ಅಧಿಕಾರಿ ಎಂ.ಸಿ.ಕುಮಚಗಿ, ಕಂದಾಯ ಅಧಿಕಾರಿ ಧ್ರುವಕುಮಾರ ಹೊಸಳ್ಳಿ, ಗ್ರಾಮ ಲೆಕ್ಕಾಧಿಕಾರಿ ಸಂತೋಷ ಲಮಾಣಿ ಉಪಸ್ಥಿತರಿದ್ದರು. ರೈತರಾದ ಬಸನಗೌಡ ಸಿದ್ದನಗೌಡ್ರ, ಶಿವು ತಡಸ, ಸಹದೇವಪ್ಪ ನೂಲ್ವಿ, ಕಲ್ಲಪ್ಪ ಕುರಟ್ಟಿ, ಜಗದೀಶ ಡೊಳ್ಳಿನ, ಭೀಮಪ್ಪ ಬಂಡಿವಡ್ಡರ, ಶಿವಯ್ಯ ಹಿರೇಮಠ, ಧರ್ಮು ತಡಸ, ಸಿದ್ದಪ್ಪ ಗೋವಿಂದ ಕೂಡ ಇದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications