ಶಾಂತಿಭಂಗದ ಹೇಳಿಕೆ : ಪ್ರಹ್ಲಾದ್ ಜೋಶಿ ವಿರುದ್ಧ ಎಫ್‌ಐಆರ್

ಹುಬ್ಬಳ್ಳಿ, ಏಪ್ರಿಲ್ 01 : ಧಾರವಾಡದ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿಯ ಕಸಬಾ ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಗೌಸಿಯಾ ಟೌನ್‌ನಲ್ಲಿ ಮಾರ್ಚ್ 25 ರಂದು ಗುರುಸಿದಪ್ಪಾ ಅಂಬಿಗೇರ್ ಕೊಲೆ ನಡೆದಿತ್ತು. ಸಂಸದ ಪ್ರಹ್ಲಾದ್ ಜೋಶಿ 26ರಂದು ಗೌಸಿಯಾ ಟೌನ್‌ನಲ್ಲಿರುವ ಇರುವ ಗುರುಸಿದಪ್ಪಾ ಅಂಬಿಗೇರ ಅವರ ಮನೆಗೆ ಭೇಟಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ, 'ಕಸಬಾ ಪೇಟ್ ಪಾಕಿಸ್ತಾನದ ಹಾಗೆ ಇದೆ. ಇಲ್ಲಿನ ಮದರಸಾಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಇದೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Fir against Dharwad BJP MP Pralhad Joshi

ಶಾಂತಿಭಂಗ ಹಾಗೂ ಕೋಮು ಸೌರ್ಹಾದತೆಗೆ ಧಕ್ಕೆ ತಂದ ಆರೋಪದಲ್ಲಿ ಜೋಶಿ ವಿರುದ್ಧ, ಕಸಬಾ ಪೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 ಅಂಡರ್ ಸೆ,153, 298 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ವಿಚಾರಣೆ ನಡೆಸುತಿದ್ದಾರೆ.

ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಮುಸ್ಲಿಂ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಜೋಶಿ ವಿರುದ್ಧ ದೂರು ದಾಖಲಿಸುವಂತೆ ಒತ್ತಾಯ ಮಾಡಿದ್ದರು. ಸ್ಥಳೀಯರ ದೂರಿನ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+